ಹುಬ್ಬಳ್ಳಿ:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರ ನಟ ದರ್ಶನ್ ಕೇಸ್ ದಲ್ಲಿ ಸರಿಯಾಗಿ ತನಿಖೆ ಆಗಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದರು. 


COMMERCIAL BREAK
SCROLL TO CONTINUE READING

ಕೇಂದ್ರ ಸಚಿವರಾದ ಬಳಿಕ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ಇಂತಹ ಪ್ರಕರಣದಲ್ಲಿ ನಾನು ಕೇಂದ್ರ ಸಚಿವನಾಗಿ ಮಾತನಾಡುವುದು ಸರಿಯಲ್ಲ ಎಂದರು. 


ಇದನ್ನೂ ಓದಿ- ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆ


ನಾನು ಹೊಸದಾಗಿ ಕರ್ನಾಟಕದಲ್ಲಿ ಹೊಸ ಕೈಗಾರಿಕಾ ಕ್ಷೇತ್ರದಲ್ಲಿ ಹೊಸ ಹೆಜ್ಜೆ ಇರಿಸಲು ಬಯಸಿದ್ದು ಇಲಾಖೆಯಲ್ಲಿ ಹೊಸ ಆಯಾಮ ತರಲು ಪ್ರಯತ್ನ ಮಾಡಲು ಕಲಿಯಬೇಕಾಗುತ್ತದೆ ಎಂದವರು ಇದೇ ವೇಳೆ ತಿಳಿಸಿದರು. ನಾನು ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದವನು ಇದು ಸಹಕಾರಿಯಾಗುತ್ತದೆ ಎಂದರು.


ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಆಕ್ರೋಶ- ಏಕಾಏಕಿ ಪೆಟ್ರೋಲ್ ಡಿಸೇಲ್ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿ ಅವರು ಇದೊಂದು ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಾ ಇದ್ದಾರೆ ಎಂದು ತಿಳಿಸಿದರು. 


ಇದನ್ನೂ ಓದಿ- ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್


ನಾನು ಪ್ರಧಾನ ಮಂತ್ರಿ ಯೋಜನೆ ಜಾರಿಗಾಗಿ ಧಾರವಾಡಕ್ಕೆ ಬಂದಿದ್ದು ಇದೊಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದ ಅವರು ಇತರ 16 ಕಂತುಗಳಲ್ಲಿ ಪ್ರತಿ ಭಾರಿ ಒಂದು ಸಲ 2000 ರೂಪಾಯಿ ಕೊಡಲಾಗುವುದು. ಇದೊಂದು ರೈತರಿಗೆ ಅನುಕೂಲಾಗಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.