ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ

ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲ ಇಂದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಸಭೆಯನ್ನು ಕರೆದು ʼವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು. ಅದಕ್ಕಾಗಿ ತಮ್ಮ ಮುನ್ನೋಟವನ್ನು ಸಭೆಯಲ್ಲಿ ಪ್ರಸುತ್ತಪಡಿಸಿದರು. ಕರ್ನಾಟಕವೂ ಸೇರಿ ಎಲ್ಲಾ ರಾಜ್ಯಗಳು ಭಾಗವಹಿಸಬೇಕಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

Written by - Prashobh Devanahalli | Edited by - Krishna N K | Last Updated : Jul 27, 2024, 11:24 PM IST
    • ಕೇಂದ್ರದ ಜತೆ ಸಂಘರ್ಷ, ವಿಶ್ವಾಸದ ಕೊರತೆ ರಾಜ್ಯಕ್ಕೆ ಒಳ್ಳೇಯದಲ್ಲ
    • ಸಂಘರ್ಷಕ್ಕೆ ಕಾಂಗ್ರೆಸ್‌ ಪಕ್ಷವೇ ನೇರ ಹೊಣೆ ಎಂದು ದೂರಿದ ಹೆಚ್ಡಿಕೆ
    • ಇಂಥ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ.
ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ title=
HD Kumaraswamy

ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಇಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಂಥ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಅವರು ಹೇಳಿದರು.

ಇದನ್ನೂ ಓದಿ:ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿರೋಧ ಪಕ್ಷಗಳ ಶಾಸಕರು ಒಪ್ಪಿಗೆ, ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ

ಇಂತಹ ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲ ಇಂದ ಸಚಿವರು; ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಸಭೆಯನ್ನು ಕರೆದು ʼವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು. ಅದಕ್ಕಾಗಿ ತಮ್ಮ ಮುನ್ನೋಟವನ್ನು ಸಭೆಯಲ್ಲಿ ಪ್ರಸುತ್ತಪಡಿಸಿದರು. ಕರ್ನಾಟಕವೂ ಸೇರಿ ಎಲ್ಲಾ ರಾಜ್ಯಗಳು ಭಾಗವಹಿಸಬೇಕಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಭೆಗೆ ಎನ್ ಡಿಎ ಒಕ್ಕೂಟದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಬಂದಿದ್ದರು. ನಿತೀಶ್ ಕುಮಾರ್ ಅವರು ಆರೋಗ್ಯದ ಸಮಸ್ಯೆಯಿಂದ ಬಂದಿರಲಿಲ್ಲ. ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಭಿವೃದ್ಧಿ ಮತ್ತು ಆ ರಾಜ್ಯಗಳ ಜನರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದರಿಂದ ಅವರು ಏನು ಸಾಧನೆ ಮಾಡುತ್ತಾರೆ. ಅನ್ಯಾಯ ಆಗಿದ್ದರೆ ಸಭೆಯಲ್ಲಿ ಬಂದು ಚರ್ಚಿಸಬೇಕಾಗಿತ್ತು. ಬೀದಿಯಲ್ಲಿ ನಿಂತು ಮಾತನಾಡಿದರೆ ಏನು ಸಿಗುತ್ತದೆ? ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ರಾಜ್ಯ ಸರಕಾರ ಕೇಂದ್ರ ಸರಕಾರದೊಂದಿಗೆ ನಿರಂತರವಾಗಿ ಒಂದಲ್ಲ ಒಂದು ಕಾರಣಕ್ಕೆ ಸಂಘರ್ಷ ಮಾಡಿಕೊಳ್ಳುತ್ತಿದೆ.  ರಾಜ್ಯ ಸರಕಾರದ ವಿಶ್ವಾಸದ ಕೊರತೆಯಿಂದ ಕೂಡಿದೆ. ಒಕ್ಕೂಟ ವ್ಯವಸ್ಥೆಗೆ ಇದು ಒಳ್ಳೇಯದಲ್ಲ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ಇದಕ್ಕೆ ಕಾಂಗ್ರೆಸ್‌ ಪಕ್ಷವೇ ನೇರ ಕಾರಣ ಎಂದು ಅವರು ದೂರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News