ಹಿಂದೂ ಹಬ್ಬಕ್ಕೆ ಅಡ್ಡಿಪಡಿಸಲೆಂದೇ ಇಂಥ ಕ್ರಮ; ಇಫ್ತಿಯರ್ ಕೂಟದ ವೇಳೆ ಈ ಆದೇಶ ಹೊರಡಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲು

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ ಎಂದು  ಟೀಕಿಸಿದರು.  

Written by - Prashobh Devanahalli | Last Updated : Sep 6, 2024, 10:18 PM IST
    • ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರ
    • ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ
    • ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿರೋಧ
ಹಿಂದೂ ಹಬ್ಬಕ್ಕೆ ಅಡ್ಡಿಪಡಿಸಲೆಂದೇ ಇಂಥ ಕ್ರಮ; ಇಫ್ತಿಯರ್ ಕೂಟದ ವೇಳೆ ಈ ಆದೇಶ ಹೊರಡಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸವಾಲು title=
File Photo

ಹುಬ್ಬಳ್ಳಿ: ಗಣೇಶ ಪೆಂಡಾಲ್ʼಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಐಪಿಎಲ್‌ 2025ರಲ್ಲಿ ಈ ತಂಡದ ಹೆಡ್‌ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌: ಆ ಲಕ್ಕಿ ಟೀಂ ಯಾವುದು?

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ ಎಂದು  ಟೀಕಿಸಿದರು.

ಎಂಪ್ಯಾನಲ್ ಅದವರಿಂದಲೇ ಪ್ರಸಾದ ತಯಾರಿಸಬೇಕು ಎಂದಿರುವ ರಾಜ್ಯ ಸರ್ಕಾರದ ಈ ಸೂಚನೆ ಸರಿಯಲ್ಲ ಎಂದು ಖಂಡಿಸಿದರು

ಗಣೇಶ ಹಬ್ಬದ ವೇಳೆ ದೇಶಾದ್ಯಂತ, ರಾಜ್ಯಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷಾ ಕ್ರಮ ಕೈಗೊಳ್ಳುವುದು ಸರಿ. ಆದರೆ, ಹೀಗೆ ಹುಚ್ಚರ ರೀತಿ ಅಲ್ಲ ಎಂದು ರಾಜ್ಯ ಸರ್ಕಾರವನ್ನು ತಿವಿದರು.

ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ಈ ಕ್ರಮ: ರಾಜ್ಯದಲ್ಲಿ ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರದಿಂದ ಇಂಥ ಆದೇಶ ಹೊರ ಬಿದ್ದಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ ಎಂದು ಹೇಳಿದರು.

ಎಲ್ಲಾದರೂ ದುರುದ್ದೇಶದಿಂದ ಪ್ರಸಾದ ದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ? ಎಂದು ಪ್ರಶ್ನಿಸಿದರು.

ಹಿಂದೂ ಹಬ್ಬದಲ್ಲಷ್ಟೇ ಆಹಾರ ಸುರಕ್ಷೆ ನೆನಪಾಗುತ್ತೆದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತಾ ನಿಯಮ ಇರೋದು ನೆನಪಾಗುತ್ತದೆಯೇ? ಎಂದ ಸಚಿವ ಜೋಶಿ, ಇಫ್ತಿಯಾರ್ ಕೂಟ ಇದ್ದಾಗ ಇಂಥ ಆದೇಶ ಹೊರಡಿಸಿ ನೋಡೋಣ ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಗಣೇಶ ಹಬ್ಬದ ಮರುದಿನವೇ ಈ ರಾಶಿಗೆ ಗಜಕೇಸರಿ ಯೋಗ: ಸಂಪತ್ತು, ಕೀರ್ತಿ, ರಾಜವೈಭೋಗ ಬೆನ್ನತ್ತಿ ಬರುವುದು! ಇವರಿಗೆ ಶ್ರೀಮಂತಿಕೆ ಒಲಿಯಲು ಹೆಚ್ಚು ಸಮಯವಿಲ್ಲ!

ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಿ: ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ತಯಾರಿಕೆ ವೇಳೆ ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ ಸಚಿವರು, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ಈ ಆದೇಶ ಧಿಕ್ಕರಿಸಿ ಎಂದು ಕರೆ ಕೊಟ್ಟರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News