ಬೆಂಗಳೂರು : I.N.D.I.A ಒಕ್ಕೂಟ ಹುಟ್ಟುವ ಮೊದಲೇ ಸತ್ತಿದೆ. ನೇತೃತ್ವ, ನೀತಿ, ನಿಯತ್ತು ಮೂರೂ ಇಲ್ಲದಂತಹದ್ದು ಒಕ್ಕೂಟ ಅದು. ಇದನ್ನರಿತೆ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಹೊರ ಬಂದಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅಣಕಿಸಿದರು.


COMMERCIAL BREAK
SCROLL TO CONTINUE READING

ಇಂದು ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ವೇಳೆ ಮಾದ್ಯಮದವರ ಜತೆ ಮಾತನಾಡಿ, ಐಎನ್‌ಡಿಐಎ ಒಕ್ಕೂಟ ಜನ್ಮತಾಳುವ ಮೊದಲೇ ಸತ್ತಂತೆ ಇತ್ತೆಂದು ಪ್ರತಿಕ್ರಿಯಿಸಿದರು. ನೇತೃತ್ವ, ನೀತಿ, ನಿಯತ್ತು ಮೂರೂ ಇಲ್ಲದಂತಹದ್ದು I.N.D.I.A ಒಕ್ಕೂಟ. ಇದನ್ನರಿತೆ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಹೊರ ಬಂದಿದ್ದಾರೆ ಎಂದರು.


ಇದನ್ನೂ ಓದಿ:"ನಾನು ಕ್ರಿಕೆಟ್ ಆಡುವುದಿಲ್ಲ. ಆದರೆ ಕ್ರಿಕೆಟ್ ವೀಕ್ಷಕ"-ಸಿಎಂ ಸಿದ್ದರಾಮಯ್ಯ


ಕಾಂಗ್ರೆಸ್ ಮತ್ತು ಆರ್‌ಜೆಡಿ ಎರಡೂ ಕಡು ಭ್ರಷ್ಟರ ಪಕ್ಷಗಳು. ಕೇವಲ  ಸ್ವ ಕುಟುಂಬ ಮತ್ತು ಪರಿವಾರಕ್ಕಾಗಿ ಹೋರಾಡುವ ಪಕ್ಷಗಳು. ಜನರ ಕಷ್ಟ, ದುಃಖ, ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ತಮಗೆ ಸಂಬಂಧವೇ ಇಲ್ಲದಂತೆ ವರ್ತಿಸುವ ನಾಯಕರ ಪಕ್ಷಗಳು ಎಂದು ಜೋಶಿ ಜರಿದರು.


ಇಂಡಿಯಾ ಒಕ್ಕೂಟದಲ್ಲಿ ಮನೆ ಮಾಡಿದ್ದ ವಿರೋಧಿ ನಡೆಯಿಂದ ಬೇಸತ್ತು, ದುಃಖಿತರಾಗಿ ನಿತೀಶ್ ಕುಮಾರ್ ಹೊರ ಬಂದಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದರು. ಅಲ್ಲದೆ, ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿ, ಮಹಾ ಘಟ್ ಬಂಧನ್ ಕೇವಲ ಫೋಟೋಶೂಟ್ ಗಾಗಿ ಎಂಬುದನ್ನು ಮೊದಲೇ ಹೇಳಿದ್ದೆವು. ಇಂಡಿಯಾ ಒಕ್ಕೂಟ ಸೇರಿದವರಿಗೆ ಈಗ ಅದರ ನೈಜ ಅನುಭವವಾಗುತ್ತಿದೆ ಎಂದು ಜೋಶಿ ಹೇಳಿದರು.


ಜಗದೀಶ್ ಶೆಟ್ಟರ್ ಪಕ್ಷಕ್ಕೆ ಮರಳಿರುವುದು ಸಹಜವಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.