ಕಾಂಗ್ರೆಸ್ ದು ಯಾವತ್ತೂ ಹೊಡಿ-ಬಡಿ ಸಂಸ್ಕೃತಿಯೇ: ಪ್ರಹ್ಲಾದ ಜೋಶಿ ಆಕ್ರೋಶ

ಪ್ರಧಾನಿ ಮೋದಿಗೆ ಜೈಕಾರ ಹಾಕುವ ಯುವ ಪಡೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದ್ದಾರೆ.  

Written by - Yashaswini V | Last Updated : Mar 26, 2024, 11:41 AM IST
  • ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಳಿದರೆ ವರ್ಚಸ್ಸು ಕುಗ್ಗುವಂತೆ ಮಾಡಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ.
  • ನೀವೆಷ್ಟು ಮೋದಿ ಅವರನ್ನು ದ್ವೇಷಿಸುತ್ತೀರಿ ಅಷ್ಟೇ ಪ್ರೀತಿಯಿಂದ ಜನ ಮೋದಿ ಅವರನ್ನು ಕಾಣುತ್ತಾರೆ- ಸಚಿವ ಪ್ರಹ್ಲಾದ ಜೋಶಿ
ಕಾಂಗ್ರೆಸ್ ದು ಯಾವತ್ತೂ ಹೊಡಿ-ಬಡಿ ಸಂಸ್ಕೃತಿಯೇ: ಪ್ರಹ್ಲಾದ ಜೋಶಿ ಆಕ್ರೋಶ title=

Lok Sabha Elections:  ಕಾಂಗ್ರೆಸ್ಸಿಗರಿಗೆ ಯಾವಾಗಲೂ ಹೊಡಿ-ಬಡಿ ಸಂಸ್ಕೃತಿಯೇ ಇದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರು ಶಿವರಾಜ್ ತಂಗಡಗಿ ವಿರುದ್ಧ ಕಿಡಿ ಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Union Parliamentary Minister Prahlada Joshi) , ರಾಜ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಇದ್ದುಕೊಂಡು ಹೀಗೆ ಹೊಡಿ ಬಡಿಯುವ ರೀತಿ ಪ್ರಚೋದನೆ ನೀಡುವುದು ಅವರ ವ್ಯಕ್ತಿತ್ವ ಮತ್ತು ಹುದ್ದೆಗೆ ಘನತೆ, ಗೌರವ ತರುವಂಥದ್ದಲ್ಲ ಎಂದು ಖಂಡಿಸಿದರು.

ಸುಸಂಸ್ಕೃತ ರಾಜ್ಯದಲ್ಲಿ ಈ ರೀತಿಯ ಭಾಷೆ ಪ್ರಯೋಗ ತಪ್ಪು. ಕಾಂಗ್ರೆಸ್ ಪಕ್ಷದ ಕೈಯಲ್ಲಿ ಎಷ್ಟು ಶಕ್ತಿ ಇದೆ ತೋರಿಸಿ ಬಿಡಲಿ. ಕಾಂಗ್ರೆಸ್ ಪಕ್ಷದ್ದು ಹೊಡಿಬಡಿ ಸಂಸ್ಕೃತಿ, ದ್ವೇಷ ಕಾರುವ ಸ್ವಭಾವ. ಕಾಂಗ್ರೆಸ್‌ನವರು ಎಷ್ಟು ದ್ವೇಷಿಸುತ್ತೀರಿ ದ್ವೇಷಿಸಿ, ಆದರೆ ಜನ ಮೋದಿಯನ್ನು ಮತ್ತಷ್ಟು ಇಷ್ಟಪಡುತ್ತಾರೆ ಎಂದವರು ನುಡಿದರು. 

ಇದನ್ನೂ ಓದಿ- ಕೊಪ್ಪಳ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಹೈಕಮಾಂಡ್ ಗಮನಕ್ಕೆ ತರಲು ತೀರ್ಮಾನ: ಬಸವರಾಜ ಬೊಮ್ಮಾಯಿ

ಮೋದಿ ಬಗ್ಗೆ ದ್ವೇಷ ಕಾರುವುದೇಕೆ?
ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಬಗ್ಗೆ  ದ್ವೇಷ ಕಾರುವ ಮನೋಭಾವವಿದೆ. ಇದಕ್ಕೆಲ್ಲ ಜನರೇ ಉತ್ತರ ಕೊಡುತ್ತಾರೆ ಎಂದು ಎಚ್ಚರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಳಿದರೆ ವರ್ಚಸ್ಸು ಕುಗ್ಗುವಂತೆ ಮಾಡಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ. ನೀವೆಷ್ಟು ಮೋದಿ ಅವರನ್ನು ದ್ವೇಷಿಸುತ್ತೀರಿ ಮತ್ತು  ಸೇಡಿನ ಭಾವನೆಯಿಂದ ವರ್ತಿಸುತ್ತಿರೋ? ಅಷ್ಟೇ ಪ್ರೀತಿಯಿಂದ ಜನ ಮೋದಿ ಅವರನ್ನು ಕಾಣುತ್ತಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದರು.

ಇದನ್ನೂ ಓದಿ- ಪತ್ರಕರ್ತರ ಜೊತೆ ಡ್ಯಾನ್ಸ್ ಮಾಡಿದ ಜಾಧವ್! ವಿಡಿಯೋ

ರಾಜ್ಯಕ್ಕೆ ಯಾವುದೇ ಜಿಎಸ್‌ಟಿ ಬಾಕಿ ಉಳಿದಿಲ್ಲ !
ಇದೇ ಸಂದರ್ಭದಲ್ಲಿ ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ಮಾಡುತ್ತಿದೆ. ರಾಜ್ಯಕ್ಕೆ ಯಾವುದೇ ಜಿಎಸ್‌ಟಿ ಬಾಕಿ ಉಳಿದಿಲ್ಲ. ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲು ಸವಾಲ್ ಹಾಕಿದ್ದಾರೆ. ಈಗಾಗಲೇ ನಿರ್ಮಲಾ ಸೀತಾರಾಮನ್ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ತತ್ವಾರ ಬಂದಿದೆ. ಬರ‌ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲರಾಗಿದ್ದಾರೆ. ಯಾವುದೇ ರೆಕಮಂಡೇಷನ್ ಉಲ್ಲಂಘನೆಯಾಗಿಲ್ಲ. ಅನುದಾನ ವಿಚಾರದಲ್ಲಿ ಕೋರ್ಟ್‌ಗೆ ಹೋಗಿದ್ದು ರಾಜಕೀಯ ನಡೆ ಎಂದವರು ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News