ಬೆಂಗಳೂರು : ಇಂದು ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ‌ ವ್ಯತ್ಯಯವಾಗಲಿದೆ. ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಹಿನ್ನೆಲೆಯಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. 


COMMERCIAL BREAK
SCROLL TO CONTINUE READING

ಇಂದು ನಮ್ಮ ಮೆಟ್ರೋದ ಹಸಿರು ಮಾರ್ಗದ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಯಲ್ಲಿ ಬದಲಾವಣೆ ಮಾಡಲಾಗಿದೆ.ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ  ಪರೀಕ್ಷೆ ಹಿನ್ನೆಲೆಯಲ್ಲಿ ಈ ಬದಲಾವಣೆ ಉಂಟಾಗಿದೆ. ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ಇಂದು ಮತ್ತು ಸೆಪ್ಟೆಂಬರ್ 11 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾ ಸಂಪೂರ್ಣ ಸ್ಥಗಿತವಾಗಿರಲಿದೆ. ಮೆಟ್ರೋ ವ್ಯತ್ಯಯದ ಬಗ್ಗೆ ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.  


ಇದನ್ನೂ ಓದಿ : ಕೋವಿಡ್ ಭ್ರಷ್ಟಾಚಾರ: ಕುನ್ಹಾ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ


ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ರಾತ್ರಿ 10 ಗಂಟೆಗೆ ಕೊನೆಯ ರೈಲು ಹೊರಡಲಿದೆ. ನಿತ್ಯ ಇಲ್ಲಿ ರಾತ್ರಿ 11.05 ಕ್ಕೆ ಕೊನೆಯ ರೈಲು ಹೊರಡುತ್ತಿತ್ತು. ಆದರೆ ಇಂದು ಸಿಗ್ನಲ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ ಕೂಡಾ 5 ಗಂಟೆಯ ಬದಲಿಗೆ 7ಕ್ಕೆ ಮೆಟ್ರೋ ಸಂಚಾರ ಪ್ರಾರಂಭ ಆಗಿತ್ತು. 


ಇನ್ನು ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ ಇಂದು ರಾತ್ರಿ ಕೊನೆಯ ರೈಲು 11.12ಕ್ಕೆ ಹೊರಡಲಿದೆ.ನೇರಳೆ ಮಾರ್ಗದಲ್ಲಿ ರೈಲಿ ಎಂದಿನ್ನತೆ ಸಂಚಾರ ಮಾಡಲಿದೆ.  ಈ ಮಾರ್ಗದಲ್ಲಿ ರೈಲು ಸಂಚಾರ ಮತ್ತು ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. 


ಇದನ್ನೂ ಓದಿ : ಕೋವಿಡ್‌ ವರದಿ ಸಂಪುಟದಲ್ಲಿ ಚರ್ಚೆ ವಿಚಾರ: ಬಿ ಎಸ್‌ ವೈ ಪ್ರತಿಕ್ರಿಯೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ