ಬೆಂಗಳೂರು: ಬಿಜೆಪಿಯಿಂದ ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದು, ನಾಳೆ ಬೆಳಗ್ಗೆ 10 ಗಂಟೆಗೆ ಉಪಸಭಾಪತಿ ಸ್ಥಾನಕ್ಕೆ ವಿಧಾನಸೌಧದಲ್ಲಿ ಎಂಕೆ ಪ್ರಾಣೇಶ್ ನಾಮಪತ್ರ ಸಲ್ಲಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಇನ್ನೂ,. ವಿಧಾನಪರಿಷತ್ ಸಭಾಪತಿ, ಉಪಸಭಾಪತಿ ಆಯ್ಕೆ ಕುರಿತಂತೆ ಮೇಲ್ಮನೆಯಲ್ಲಿ ಬಿಜೆಪಿ(BJP)ಗೆ ಜೆಡಿಎಸ್ ಅನಿವಾರ್ಯವಾಗಿದೆ. ಕೊನೆಗೂ ಬಿಜೆಪಿ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಟ್ಟಿದೆ.


D.K.Shivakumar: ವಿನಯ್‌ ಗುರೂಜಿ ಜೊತೆ 20 ನಿಮಿಷ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್


ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಲು ಬಸವರಾಜ ಹೊರಟ್ಟಿ ಸಿದ್ದತೆ ನಡೆಸಿದ್ದಾರೆ. ಇನ್ನೂ. ಸಭಾಪತಿ ಸ್ಥಾನವನ್ನು ಪಡೆಯಲು ಒಂದೆಡೆ ಜೆಡಿಎಸ್ ಭಾರೀ ಕಸರತ್ತು ನಡೆಸುತ್ತಿತ್ತು. ಸಭಾಪತಿ ಸ್ಥಾನ ಬೇಕು ಎಂದು ಜೆಡಿಎಸ್ ಬೇಡಿಕೆ ಕೂಡ ಇಟ್ಟಿದೆ. ಈ ಬಗ್ಗೆ ಸಿಎಂ ಅವರನ್ನು ಭೇಟಿಯಾಗಿದ್ದ ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಬೇಡಿಕೆಯನ್ನು ಅಧಿಕೃತವಾಗಿ ಸಿಎಂ ಮುಂದಿಟ್ಟಿದ್ದರು. ಇನ್ನೂ, ಸಿಎಂ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಭಾಪತಿ, ಉಪಸಭಾಪತಿ ಸ್ಥಾನದ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.


BJP-JDS: ಮೇಲ್ಮನೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy


ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.