ಚಾಮರಾಜನಗರ: ಮೂಲಸೌಕರ್ಯಕ್ಕೆ ಆಗ್ರಹಿಸಿ ಗ್ರಾಮಸ್ಥರು ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿರುವ ಘಟನೆ ಹನೂರು ತಾಲೂಕಿನ‌ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಇಂಡಿಗನತ್ತ ಗ್ರಾಮಸ್ಥರು ಇಂದಿ ಸಭೆ ಸೇರಿ ಮೂಲಭೂತ ಸೌಲಭ್ಯ ನೀಡಿ ಇಲ್ಲದಿದ್ದರೇ ಮತ ಕೇಳಲು ಬರಬೇಡಿ, ನಾವು ಓಟು ಹಾಕುವುದಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದಾರೆ.


ಗ್ರಾಮದ ಮುಖಂಡ ಪುಟ್ಟ ತಂಬಡಿ ಎಂಬವರು ಸಭೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಬಂದು 76 ವರ್ಷಗಳು ಕಳೆದರೂ ನಾಗಮಲೆ, ಇಂಡಿಗನತ್ತ, ತೋಕೆರೆ, ಪಡಸಲನತ್ತ ಮೆಂದಾರೆ, ತೇಕಾಣೆ ಗ್ರಾಮಗಳಲ್ಲಿ ಕನಿಷ್ಠ ಮೂಲಸೌಕರ್ಯವೂ ಇಲ್ಲಂದತಾಗಿದೆ.


ಇದನ್ನೂ ಓದಿ- ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ vs ಸ್ವಾರ್ಥ! ಡಿಕೆ ಸುರೇಶ್ ಗೆ ಜೆಡಿಎಸ್ ತಿರುಗೇಟು


ರಸ್ತೆ ಇಲ್ಲಾ, ವಿದ್ಯುತ್ ಇಲ್ಲಾ, ಕುಡಿಯುವ ನೀರಿನ ಸೌಲಭ್ಯವಿಲ್ಲ ಖಾಸಗಿ ಜೀಪ್ ಗಳಲ್ಲಿ ಬರುತ್ತಿದ್ದೆವು. ಈಗ ಅದಕ್ಕೂ ಅರಣ್ಯ ಇಲಾಖೆ ನಿರ್ಬಂಧ ಹೇರಿದ್ದು ಜೀವನ ನಡೆಸುವುದೇ ದುಸ್ತರವಾಗಿದೆ. ಹಿಂದೆ ಅಧಿಕಾರಿಗಳು, ಸಚಿವರು ನೀಡಿದ್ದ ಭರವಸೆ ಭರವಸೆಯಾಗೇ ಉಳಿದಿದೆ ಎಂದು ಕಿಡಿಕಾರಿದರು.


ಮೂಲಸೌಕರ್ಯವೇ ಮರೀಚಿಕೆಯಾಗಿರುವ ಗ್ರಾಮಕ್ಕೆ ಸರ್ಕಾರ ನೀಡಿರುವ ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿಗಳನ್ನು ವಾಪಸ್ ಪಡೆದು ನಮಗೆ  ಸಾಯಲು ವಿಷ ನೀಡಿ ಇಲ್ಲದಿದ್ದರೆ ಮೂಲಭೂತ ಸೌಲಭ್ಯ ಕೊಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ- ಸಿವಿಲ್ ಎಂಜಿನಿಯರಿಂಗ್ ನಿಂದ ರಾಜಕಾರಣದವರೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ನಡೆದು ಬಂದ ಹಾದಿ


ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 5000ಕ್ಕೂ ಹೆಚ್ಚು ಜನಸಂಖ್ಯೆ ಇರುವ ಮಾದಪ್ಪನ ಬೆಟ್ಟದ ತಪ್ಪಲಿನ ಗ್ರಾಮಸ್ಥರು ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.