ಬೆಂಗಳೂರು : ಹಳೇ ವಿಡಿಯೋ ತುಣುಕು ಮತ್ತೆ ವೈರಲ್ ಮಾಡಿ ಕಿರಿ-ಕಿರಿ ಮಾಡುತ್ತಿದ್ದಾರೆ ಎಂದು‌ ಅವಧೂತ ವಿನಯ್ ಗುರೂಜಿ ತಮ್ಮ ಪಿಆರ್ ಒ ಮೂಲಕ ಟ್ರೋಲ್ ಪೇಜ್, ಟ್ರೋಲಿಗರು ಸೇರಿ ಹಲವು ಯೂಟ್ಯೂಬ್ ಚಾನೆಲ್ ಗಳ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಕೆಪಿಸಿಸಿ ಆನೇಕಲ್ ವಿಭಾಗ ಸೋಷಿಯಲ್ ಮೀಡಿಯಾ ವಿಂಗ್ ಸೇರಿ 22 ಟ್ರೋಲ್ ಪೇಜ್ ಗಳ ಮೇಲೆ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಯ ಮೇಲೆ ಕಾಲಿಡುವ ದೃಶ್ಯ ಪೋಸ್ಟ್ ಮಾಡಿ ಅದರಲ್ಲಿ ಕೆಟ್ಟದಾಗಿ ಕಾಮೆಂಟ್ ಹಾಕಿದಾರೆಂಬ ಕಾರಣಕ್ಕೆ ದೂರು ನೀಡಲಾಗಿದೆ. 


[[{"fid":"250508","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಇದನ್ನೂ ಓದಿ : BJP : ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಠಾಧೀಶರಿಂದ ಹೈಕಮಾಂಡ್ ಗೆ ಪತ್ರ


ರಾತ್ರಿ ಕುಡಿದ ಹೆಂಡದ ಅಮಲಿನಲ್ಲಿ ತಲೆಯ ಮೇಲೆ ಕಾಲಿಡುತ್ತಿರುವ ಗುರೂಜಿ , ನಶೆಯಲ್ಲಿ ನಿಲ್ಲೋಕೂ ಆಗುತ್ತಿಲ್ಲ ಗಾಂಜಾ ಸಿಗರೇಟು ಸೇದ್ತಾನೆ ಎಂದು ಒಪ್ಪಿಕೊಳ್ಳಬೇಕಾಗುತ್ತೆ.ಗುರೂಜಿ ಎಂದು ಹೇಳಿಕೊಳ್ಳುವ ಎಲ್ಲರೂ ಸ್ಟಾರ್ ಹೊಟೇಲ್ ನಲ್ಲಿ ನಡೆಸುವ ರಂಗಿನಾಟ ಇದೆ ಎಂದು ಟ್ರೋಲ್ ಪೇಜ್ ನಲ್ಲಿ ಕೆಲವರು ಕಾಮೆಂಟ್  ಮಾಡಿದ್ರು.  ಇಂತಹ ಟ್ರೋಲ್ ಗಳಿಂದ ಗುರೂಜಿಯ ತೇಜೋವಧೆ ಆಗಿದೆ. ಅವರ ಲಕ್ಷಾಂತರ ಭಕ್ತರ ಮನಸ್ಸಿಗೆ ಘಾಸಿಯುಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 


ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಸಮಾಜದ ಸ್ವಾಸ್ಥ್ಯ ಕದಡುವ ಕೆಲಸ ಮಾಡುತ್ತಿರುವ ಟ್ರೋಲಿಗರ ಮೇಲೆ ಕ್ರಮ ಕೈಗೊಳ್ಳಲು ದೂರಿನಲ್ಲಿ ಮನವಿ ಮಾಡಲಾಗಿದೆ.


ಇದನ್ನೂ ಓದಿ : HD Kumaraswamy : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡಲ್ಲ'


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.