ಮತಾಂತರ & ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವವಂತೆ ಪೇಜಾವರ ಮಠ ಸ್ವಾಮೀಜಿ ಮನವಿ

ಮತಾಂತರ ತಡೆ ಮತ್ತು ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವ ದುಸ್ಸಾಹಸ ಕೈ ಬಿಡಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

Written by - Zee Kannada News Desk | Last Updated : Jun 21, 2023, 06:49 PM IST
ಮತಾಂತರ & ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವವಂತೆ ಪೇಜಾವರ ಮಠ ಸ್ವಾಮೀಜಿ ಮನವಿ  title=

ಉಡುಪಿ: ಮತಾಂತರ ತಡೆ ಮತ್ತು ಗೋ ಹತ್ಯೆ ನಿಷೇದ ಕಾನೂನನ್ನು ವಾಪಾಸ್ ಪಡೆಯುವ ದುಸ್ಸಾಹಸ ಕೈ ಬಿಡಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

ಅವರು ನಗರದಲ್ಲಿ ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್‌ ಪಡೆಯುವ ಕಾಂಗ್ರೆಸ್ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ. ಮತಾಂತರ ಹಾವಳಿಯಿಂದ ಕುಟುಂಬಗಳು ಛಿದ್ರವಾಗುತ್ತಿರುವುದನ್ನು ಮನಗಂಡ ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿತ್ತು.

ಇದನ್ನೂ ಓದಿ: Viral Video: ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರು...!

ಗೋ ಕಳವು ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಎರಡೂ ಕಾಯ್ದೆಗಳನ್ನು ಹಿಂಪಡೆಯಲು ತೀರ್ಮಾನಿಸಿರುವುದು ಕಳವಳಕಾರಿಯಾಗಿದೆ. ಕಾನೂನುಗಳ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: Video Viral: ಇವ್ರೇ ನೋಡಿ ಅತೀ ಉದ್ದ ಗಡ್ಡ & ಮೀಸೆ ಹೊಂದಿ ಚಾಂಪಿಯನ್ ಪಟ್ಟ ಪಡೆದವರು.!

ಜನಾಭಿಪ್ರಾಯ ಪಡೆದು ಎರಡೂ ಕಾಯ್ದೆಗಳನ್ನು ಹಿಂಪಡೆಯದೆ ತಟಸ್ಥ ನಿಲುವು ತಾಳಬೇಕು ಎಂದು ಒತ್ತಾಯಿಸಿದ್ದಾರೆ. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಕೂಡ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ನಿಲುವು ಮರು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News