'ವಿ ಆರ್ ನಾಟ್ ಬೆಗ್ಗರ್ಸ್', ಕಾಂಗ್ರೆಸ್ ವಿರುದ್ಧ ಗರಂ ಆದ ಸಿಎಂ ಕುಮಾರಸ್ವಾಮಿ!

ವಿ ಆರ್​​ ನಾಟ್​​ ಬೆಗರ್ಸ್​ ಎಂದು ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Last Updated : Feb 19, 2019, 02:23 PM IST
'ವಿ ಆರ್ ನಾಟ್ ಬೆಗ್ಗರ್ಸ್', ಕಾಂಗ್ರೆಸ್ ವಿರುದ್ಧ ಗರಂ ಆದ ಸಿಎಂ ಕುಮಾರಸ್ವಾಮಿ! title=

ಮೈಸೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಮತ್ತೆ ಗರಂ ಆಗಿದ್ದಾರೆ. 

ಇಂದಿಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್​ ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟು ಕೊಡ್ತಾರೋ ಗೊತ್ತಿಲ್ಲ. ವಿ ಆರ್​​ ನಾಟ್​​ ಬೆಗರ್ಸ್​ ಎಂದು ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಯಿಂದ ರಾಷ್ಟ್ರಕ್ಕೆ ಒಂದು ಸಂದೇಶ ರವಾನೆ ಆಗಬೇಕಾದರೆ ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ರಾಜ್ಯದ ಅಭಿವೃದ್ಧಿಗಾಗಿ ಆಡಳಿತ ಕಡೆಗೆ ನಾನು ಗಮನ ಹರಿಸಿದ್ದೇನೆ. ಇನ್ನು ಸೀಟು ಹಂಚಿಕೆ ಬಗ್ಗೆ ಜೆಡಿಎಸ್​​ ವರಿಷ್ಠ ಹೆಚ್​​.ಡಿ. ದೇವೇಗೌಡರು ಕಾಂಗ್ರೆಸ್ ಜೊತೆ ಮಾತುಕತೆ ಮೂಲಕ ತಿರ್ಮಾನ ಕೈಗೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
 

Trending News