ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಯ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯನವರು ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞ ರೊಂದಿಗೆ ಸಭೆ ನಡೆಸಿ ಚರ್ಚಿಸಿದರು.


ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾಘಟಬಂದನ್‌ ಸಭೆ


‘ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.


ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ


ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರ ಸೇರಿದಂತೆ ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್.ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ ಸರ್ಕಾರದ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.