ನಾಳೆಯೇ ನಾವು ಬಹಿರಂಗ ಚರ್ಚೆಗೆ ಸಿದ್ದ : ವಿ.ಎಸ್.ಉಗ್ರಪ್ಪ

ಸರ್ಕಾರದ ಸಾಧನೆ ಕುರಿತು ಬಹಿರಂಗ ಚರ್ಚೆ ಕುರಿತು ಬಿಎಸ್ ವೈ ನೀಡಿದ್ದ ಸವಾಲಿಗೆ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಪ್ರತಿಕ್ರಿಯಿಸಿದ್ದಾರೆ.

Last Updated : Sep 14, 2017, 06:15 PM IST
ನಾಳೆಯೇ ನಾವು ಬಹಿರಂಗ ಚರ್ಚೆಗೆ ಸಿದ್ದ : ವಿ.ಎಸ್.ಉಗ್ರಪ್ಪ title=

ಬೆಂಗಳೂರು: ಬಿಜೆಪಿ, ಕಾಂಗ್ರೆಸ್ ಸರ್ಕಾರದ ಸಾಧನೆ ಕುರಿತು ಬಹಿರಂಗ ಚರ್ಚೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೇಸ್ ಪಕ್ಷಕ್ಕೆ ಸವಾಲು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಬಿ.ಎಸ್‌.ಯಡಿಯೂರಪ್ಪ ಅವರ ಸವಾಲಿಗೆ ನಾವು ಸಿದ್ದ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ವಿಧಾನಸೌಧದಲ್ಲಿ ಮಾತನಾಡಿದ ವಿ.ಎಸ್.ಉಗ್ರಪ್ಪ, ಅವರು ನಿಗದಿ ಪಡಿಸಿದ ದಿನ ಮತ್ತು ಸ್ಥಳದಲ್ಲಿ ಚರ್ಚೆಗೆ ಸಿದ್ದರಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಯುಪಿಎ ಸರ್ಕಾರದ ಅವಧಿ ಹಾಗೂ ಪ್ರಸಕ್ತ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಾಧನೆ ಮತ್ತು ವೈಫಲ್ಯಗಳ ಕುರಿತಂತ ಚರ್ಚೆ ನಡೆಸೋಣ ಎಂದು ಪ್ರತಿ ಸವಾಲು ಒಡ್ಡಿದ್ದಾರೆ.

ಯಾರು ಜೈಲಿಗೆ ಹೋಗಿದ್ರು, ಬೇಲ್ ಮೇಲೆ ಎಷ್ಟು ಜನ ಇದ್ದಾರೆ, ಭ್ರಷ್ಟಾಚಾರ ಯಾರು ಮಾಡಿದ್ದಾರೆ ಅನ್ನೋದನ್ನು ಚರ್ಚಿಸೋಣ, ಬಹಿರಂಗ ಚರ್ಚೆಗೆ ಮುಖ್ಯಮಂತ್ರಿ ಗಳನ್ನು‌ ನಾನು ಒಪ್ಪಿಸುತ್ತೇನೆ ಎಂದು ಉಗ್ರಪ್ಪ ತಿಳಿಸಿದ್ದಾರೆ.

Trending News