ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಮೈತ್ರಿ ಸರ್ಕಾರ ಉರುಳಿದರೆ ಸರ್ಕಾರ ರಚನೆಗೆ ಸಿದ್ಧ: ಯಡಿಯೂರಪ್ಪ

ನಾವೇನು ಮೈತ್ರಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಅವರಾಗೇ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಯಡಿಯೂರಪ್ಪ ಹೇಳಿದ್ದಾರೆ.

Last Updated : Jul 1, 2019, 05:13 PM IST
ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಮೈತ್ರಿ ಸರ್ಕಾರ ಉರುಳಿದರೆ ಸರ್ಕಾರ ರಚನೆಗೆ ಸಿದ್ಧ: ಯಡಿಯೂರಪ್ಪ title=

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿದರೆ ನಾವು ಸರ್ಕಾರ ರಚಿಸಲು ಸಿದ್ಧ, ಅವಕಾಶ ಸಿಕ್ಕಾಗ ಕೈ ಬಿಡಲು ನಾನೇನು ರಾಜಕೀಯ ಸನ್ಯಾಸಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ದಿಢೀರ್ ರಾಜೀನಾಮೆ ಹಿನ್ನೆಲೆಯಲ್ಲೇ ದಿಢೀರ್ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು, ನಾವೇನು ಮೈತ್ರಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಅವರಾಗೇ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.

ಆದರೆ ಮೈತ್ರಿ ಸರ್ಕಾರದಲ್ಲಿ 20ಕ್ಕೂ ಹೆಚ್ಚು ಮಂದಿ ಅತೃಪ್ತರಿದ್ದಾರೆ. ಇವರಲ್ಲಿ 11 ರಿಂದ 12 ಮಂದಿ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಸರ್ಕಾರ ಬಿದ್ದು ಹೋದರೆ ನಾವು ಹೊಸ ಸರ್ಕಾರ ರಚಿಸುತ್ತೇವೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಹೋಗುವುದಿಲ್ಲ. ನಾವು ಸರ್ಕಾರ ರಚನೆ ಮಾಡಿ ಉತ್ತಮ ಆಡಳಿತ ನಡೆಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 

Trending News