ಬೆಂಗಳೂರು : "ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನಲ್ಲಿ ಈ ರೀತಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ನೀರಿಗಾಗಿ ನಡಿಗೆ ಪಾದಯಾತ್ರೆ ಮಾಡಿದ್ದೆವು. 


COMMERCIAL BREAK
SCROLL TO CONTINUE READING

ಬೆಂಗಳೂರಿನ ಪರಿಸ್ಥಿತಿಯನ್ನು ಕಂಡು ಕೇಂದ್ರ ಸರ್ಕಾರ ಈಗಲಾದರೂ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಬರ ಪರಿಸ್ಥಿತಿಯಲ್ಲಿ ನೀರಿನ ಅಭಾವವನ್ನು ನೀಗಿಸಲು ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರು ಸೇರಿದಂತೆ ಎಲ್ಲಾ ಸಚಿವರು ಹಾಗೂ ಅಧಿಕಾರಿಗಳು ಚರ್ಚೆ ಮಾಡಿದ್ದೇವೆ. ನಗರದಲ್ಲಿ ನೀರು ಇಲ್ಲದಿದ್ದರೆ 15 ಕಿ. ಮೀ ಸುತ್ತಮುತ್ತಲ ನೀರಿನ ಮೂಲಗಳನ್ನು ಬಳಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. 


ಇದನ್ನೂ ಓದಿ : 692 ರೈತರ ಆತ್ಮಹತ್ಯೆ..! ಇದೇ ಸಿದ್ದರಾಮಯ್ಯ ಸಾಧನೆಯ ಕಿರುನೋಟ- ಹೆಚ್.ಡಿ ದೇವೇಗೌಡ ವ್ಯಂಗ್ಯ


ಬೆಂಗಳೂರಿನಲ್ಲಿ ಕುಡಿಯುವ ನೀರು ಕೊರತೆ ನೀಗಿಸಲು ಹೊಸಕೋಟೆ, ರಾಮನಗರ, ಚನ್ನಪಟ್ಟಣ, ಮಾಗಡಿ, ರಾಮನಗರದಿಂದ ದೊಡ್ಡ ಟ್ಯಾಂಕರ್ ನಲ್ಲಿ ನೀರು ತರಲು ಸೂಚಿಸಿದ್ದೇವೆ. ಕೆಲವು ಟ್ಯಾಂಕರ್ ಗಳು 600ಕ್ಕೂ ನೀರು ನೀಡುತ್ತಿದ್ದಾರೆ. ಮತ್ತೆ ಕೆಲವರು 3 ಸಾವಿರಕ್ಕೂ ನೀಡುತ್ತಿದ್ದಾರೆ. ಹೀಗಾಗಿ ಎಲ್ಲರನ್ನೂ ನೋಂದಣಿ ಮಾಡಿಕೊಳ್ಳಲು ತಿಳಿಸಿದ್ದೇವೆ. ಎಲ್ಲರ ನೋಂದಣಿ ನಂತರ ಎಲ್ಲವನ್ನೂ ಒಂದು ವ್ಯವಸ್ಥೆ ಮೂಲಕ ನೀಡಲಾಗುವುದು. ನೀರನ್ನು ಎಷ್ಟು ದೂರದಿಂದ ತರಲಾಗಿದೆ ಎಂದು ನೋಡಿ ದರ ನಿಗದಿ ಮಾಡುವುದಾಗಿ ಹೇಳಿದ್ದಾರೆ. 


"ನಾವು ಎಲ್ಲರಿಗೂ ನೆರವು ನೀಡುತ್ತೇವೆ. ಅಪಾರ್ಟ್ಮೆಂಟ್ ಗಳಿಗೂ ನಾವು ನೀರನ್ನು ಪೂರೈಸುತ್ತೇವೆ. ಅಪಾರ್ಟ್ಮೆಂಟ್ ನಿವಾಸಿಗಳಾಗಲಿ, ಕೊಳಗೇರಿ ನಿವಾಸಿಗಳಾಗಲಿ ಎಲ್ಲರಿಗೂ ನೆರವಾಗುವುದು ನಮ್ಮ ಕರ್ತವ್ಯ" ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ : BMTC : ಮಾರ್ಚ್ 6 ರಿಂದ ಈಶಾ ಫೌಂಡೇಶನ್ ಟೂರ್ ಪ್ಯಾಕೇಜ್ ಆರಂಭ ಮಾಡಲಿರುವ ಬಿಎಂಟಿಸಿ : ಇಲ್ಲಿದೆ ಸಂಪೂರ್ಣ ವಿವರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ