Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಪ್ಯೂ: ಏನಿರುತ್ತೆ? ಏನಿರಲ್ಲ?

ಕರ್ಫ್ಯೂ ಸಮಯದಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ, ಆದರೆ 50 ಜನರು ಮಾತ್ರ ಇದಕ್ಕೆ ಹಾಜರಾಗಲು ಸಾಧ್ಯವಾಗುತ್ತದೆ. 

Written by - Yashaswini V | Last Updated : Apr 24, 2021, 09:40 AM IST
  • ಕರೋನಾವೈರಸ್ ಅನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ
  • ಕರ್ನಾಟಕದಲ್ಲಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ
  • ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಸಮಯದಲ್ಲಿ ಏನಿರುತ್ತೆ? ಏನಿರಲ್ಲ?
Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಪ್ಯೂ: ಏನಿರುತ್ತೆ? ಏನಿರಲ್ಲ? title=
Weekend curfew in Karnataka

ಬೆಂಗಳೂರು: ಯಾರ ಹಿಡಿತಕ್ಕೂ ಸಿಗದೇ ದೇಶದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಲಿ ಪಡೆಯುತ್ತಿರುವ ಕರೋನಾವೈರಸ್ ಅನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ನೀವು ಮನೆಯಿಂದ ಹೊರಹೋಗುವ ಮೊದಲು ರಾಜ್ಯದಲ್ಲಿ ಏನು ಲಭ್ಯವಿರಲಿದೆ? ಯಾವುದಕ್ಕೆಲ್ಲಾ ಕಡಿವಾಣ ಹಾಕಲಾಗಿದೆ ಎಂದು ತಿಳಿಯಿರಿ.

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ: ಏನಿರುತ್ತೆ? ಏನಿರಲ್ಲ?
ಕರ್ನಾಟಕದ ಶಾಲೆಗಳು, ಕಾಲೇಜುಗಳು ಮತ್ತು ಕೋಚಿಂಗ್ ಸಂಸ್ಥೆಗಳು ವಾರಾಂತ್ಯದ ಕರ್ಫ್ಯೂ (Weekend Curfew) ಸಮಯದಲ್ಲಿ ಮುಚ್ಚಲ್ಪಡುತ್ತವೆ. ಆನ್‌ಲೈನ್ ಮತ್ತು ದೂರ ಶಿಕ್ಷಣವನ್ನು ಅನುಮತಿಸಲಾಗಿದೆ. ಇದಲ್ಲದೆ, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್‌ಗಳು, ಜಿಮ್‌ಗಳು, ಯೋಗ ಕೇಂದ್ರಗಳು, ಸ್ಪಾಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣಗಳು, ಈಜುಕೊಳಗಳು, ಮನೋರಂಜನಾ ಉದ್ಯಾನವನಗಳು, ಚಿತ್ರಮಂದಿರಗಳು, ಬಾರ್‌ಗಳು, ಸಭಾಂಗಣಗಳು, ಅಸೆಂಬ್ಲಿ ಹಾಲ್‌ಗಳು ಇತ್ಯಾದಿಗಳನ್ನು ಮುಚ್ಚಲಾಗಿದೆ. ಆದಾಗ್ಯೂ, ಭಾರತದ ಈಜು ಒಕ್ಕೂಟವು ಅನುಮೋದಿಸಿದ ಈಜುಕೊಳಗಳು ಆಟಗಾರರ ತರಬೇತಿಗಾಗಿ ತೆರೆದಿರುತ್ತವೆ. ಕ್ರೀಡಾಕೂಟಗಳನ್ನು ಸಹ ಅನುಮತಿಸಲಾಗುವುದು, ಆದರೆ ಪ್ರೇಕ್ಷಕರಿರುವುದಿಲ್ಲ.

ಇದನ್ನೂ ಓದಿ - ಬೆಳಗೆದ್ದು ಪ್ರಾಣಾಯಾಮ ಮಾಡಿ ಕರೋನಾ ಬರಲ್ಲ : ಡಾ. ಸುಧಾಕರ್

ದೇವಾಲಯ ಮುಚ್ಚಲಾಗಿದೆ, ಮದ್ಯದಂಗಡಿಗಳು ತೆರೆದಿರುತ್ತವೆ:
ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ, ಎಲ್ಲಾ ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಸಮಾರಂಭಗಳನ್ನು ಸಹ ನಿಷೇಧಿಸಲಾಗಿದೆ. ಜನರಿಗೆ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗಿದೆ, ಆದರೆ ದೇವಾಲಯದ (Temple) ಕಾರ್ಯಚಟುವಟಿಕೆಗೆ ಸಂಬಂಧಿಸಿದ ಜನರು ಪೂಜಾ ವಿಧಿಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಅದೇ ಸಮಯದಲ್ಲಿ, ರೆಸ್ಟೋರೆಂಟ್‌ಗಳನ್ನು ತೆಗೆಯಲು ಮಾತ್ರ ಅನುಮತಿಸಲಾಗಿದೆ. ಅಂದರೆ, ಜನರಿಗೆ ಅಲ್ಲಿ ಕುಳಿತು ಆಹಾರ ಸೇವಿಸಲು ಸಾಧ್ಯವಾಗುವುದಿಲ್ಲ. ಪಾರ್ಸಲ್ ತೆಗೆದುಕೊಂಡು ಹೋಗಲು ಅವಕಾಶವಿರುತ್ತದೆ.

ಕರ್ಫ್ಯೂ ಸಮಯದಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ, ಆದರೆ 50 ಜನರು ಮಾತ್ರ ಇದಕ್ಕೆ ಹಾಜರಾಗಲು ಸಾಧ್ಯವಾಗುತ್ತದೆ. ಅದೇ ಸಮಯದಲ್ಲಿ, 20ಕ್ಕೂ ಹೆಚ್ಚು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಮದ್ಯದಂಗಡಿಗಳು ಮತ್ತು ಬಾರ್‌ಗಳು ತೆರೆದಿರುತ್ತವೆ, ಆದರೆ ಅಲ್ಲಿಯೇ ಕುಳಿತು ಕುಡಿಯಲು ಅವಕಾಶವಿರುವುದಿಲ್ಲ. 

ಇದನ್ನೂ ಓದಿ - BS Yediyurappa: 'ಕರ್ನಾಟಕಕ್ಕೆ ತುರ್ತಾಗಿ ಬೇಕು 1,471 ಟನ್ ಆಕ್ಸಿಜನ್'

ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶವಿದೆ. ಕೈಗಾರಿಕೆಗಳು ಅಥವಾ ಕೈಗಾರಿಕಾ ಸಂಸ್ಥೆಗಳು ಅಥವಾ ಉತ್ಪಾದನಾ ಘಟಕಗಳು ಸಹ COVID-19 ನಿಯಮಗಳನ್ನು ಅನುಸರಿಸುವ ಮೂಲಕ ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಬಹುದು. ಆದಾಗ್ಯೂ, ಸಂಸ್ಥೆಯನ್ನು ತಲುಪಲು, ನೌಕರರು ತಮ್ಮ ಐಕಾರ್ಡ್ ಅನ್ನು ತೋರಿಸಬೇಕಾಗುತ್ತದೆ. ಇದಲ್ಲದೆ ಬ್ಯಾಂಕುಗಳು, ವಿಮಾ ಕಚೇರಿಗಳು ಮತ್ತು ಎಟಿಎಂಗಳು ಸಹ ತೆರೆದಿರುತ್ತವೆ. ಕ್ಷೌರಿಕನ ಅಂಗಡಿ, ಸಲೂನ್, ಬ್ಯೂಟಿ ಪಾರ್ಲರ್ ಕರೋನಾ ನಿಯಮಗಳನ್ನು ಅನುಸರಿಸಿ ತಮ್ಮ ಚಟುವಟಿಕೆಗಳನ್ನು ನಡೆಸಬಹುದು. ಎಲ್ಲಾ ಖಾಸಗಿ ಕಚೇರಿಗಳನ್ನು ಕನಿಷ್ಠ ಸಿಬ್ಬಂದಿಗಳೊಂದಿಗೆ ತೆರೆಯಬಹುದಾಗಿದೆ. ಆದರೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕೇವಲ 50 ಪ್ರತಿಶತ ಸಿಬ್ಬಂದಿಗೆ ಮಾತ್ರ ಅವಕಾಶ ನೀಡಲಾಗುವುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News