ಕಾರ್ಡ್‍ದಾರರಿಗೆ ತೂಕ ವಂಚನೆ, ಸ್ಥಳದಲ್ಲೇ ನ್ಯಾಯಬೆಲೆ ಅಂಗಡಿ ಅಮಾನತಿಗೆ ಡಿಸಿ ಆದೇಶ

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಸ್ಥಳದಲ್ಲಿಯೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲು ಸೂಚನೆ ನೀಡಿದರು.

Written by - Manjunath N | Last Updated : Aug 31, 2024, 09:31 PM IST
  • ಜಿಲ್ಲಾಧಿಕಾರಿಯವರು ಆಗಸ್ಟ್ 31 ರಂದು ಹೊನ್ನಾಳಿಗೆ ಭೇಟಿ ನೀಡಿ ದುರಸ್ಥಿಯಾದ ಕಾಲುವೆ ವೀಕ್ಷಣೆಯಾಗಿ ಬಸವನಹಳ್ಳಿ ಮಾರ್ಗವಾಗಿ ತೆರಳಿದ್ದಾರೆ.
  • ಅಲ್ಲಿ ನ್ಯಾಯಬೆಲೆ ಅಂಗಡಿ ನೋಡಿದ ಜಿಲ್ಲಾಧಿಕಾರಿಯವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ತೆರಳಿದಾಗ ಅಲ್ಲಿ ಓರ್ವ ಮಹಿಳೆ ಪಡಿತರ ಧಾನ್ಯಗಳನ್ನು ಪಡೆದುಕೊಂಡಿದ್ದರು.
 ಕಾರ್ಡ್‍ದಾರರಿಗೆ ತೂಕ ವಂಚನೆ, ಸ್ಥಳದಲ್ಲೇ ನ್ಯಾಯಬೆಲೆ ಅಂಗಡಿ ಅಮಾನತಿಗೆ ಡಿಸಿ ಆದೇಶ  title=

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ನೀಡಿದ್ದಾರೆ.

ಜಿಲ್ಲಾಧಿಕಾರಿಯವರು ಆಗಸ್ಟ್ 31 ರಂದು ಹೊನ್ನಾಳಿಗೆ ಭೇಟಿ ನೀಡಿ ದುರಸ್ಥಿಯಾದ ಕಾಲುವೆ ವೀಕ್ಷಣೆಯಾಗಿ ಬಸವನಹಳ್ಳಿ ಮಾರ್ಗವಾಗಿ ತೆರಳಿದ್ದಾರೆ. ಅಲ್ಲಿ ನ್ಯಾಯಬೆಲೆ ಅಂಗಡಿ ನೋಡಿದ ಜಿಲ್ಲಾಧಿಕಾರಿಯವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ತೆರಳಿದಾಗ ಅಲ್ಲಿ ಓರ್ವ ಮಹಿಳೆ ಪಡಿತರ ಧಾನ್ಯಗಳನ್ನು ಪಡೆದುಕೊಂಡಿದ್ದರು. ಅವರನ್ನು ಮಾತನಾಡಿಸಿ ನಿಮ್ಮ ಮನೆಯಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಆಹಾರಧಾನ್ಯ ನೀಡುತ್ತಿದ್ದಾರೆ ಎಂದು ಮಾಹಿತಿ ಪಡೆದುಕೊಂಡರು. ಮಹಿಳೆ ಮೂರು ಕೆ.ಜಿ.ಅಕ್ಕಿ ಹಾಗೂ 2 ಕೆ.ಜಿ ರಾಗಿ ಪಡೆಯಲಾಗಿದೆ ಎಂದಾಗ ತೂಕದ ನಿಖರತೆ ಪರೀಕ್ಷೆ ಮಾಡಲು ಮರು ತೂಕ ಮಾಡಲು ತಿಳಿಸಿದರು.

ಇದನ್ನೂ ಓದಿ: ಬೆಂಬಲ ಬೆಲೆ ಯೋಜನೆಯಡಿ ರೂ.8682 ರಂತೆ ಹೆಸರು ಕಾಳು ಉತ್ಪನ್ನ ಖರೀದಿ

ಒಟ್ಟು ಆಹಾರ ಧಾನ್ಯ ಐದು ಕೆಜಿ ನೀಡಬೇಕಿದ್ದು ಇದು 4 ಕೆಜಿ 300 ಗ್ರಾಂ ತೂಕ ಮಾತ್ರ ಬಂದಿದೆ. ಪಡಿತರರಿಗೆ 700 ಗ್ರಾಂ ತೂಕದಲ್ಲಿ ಮೋಸ ಮಾಡಲಾಗಿದೆ ಎಂದು ಅರಿತ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಸ್ಥಳದಲ್ಲಿಯೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲು ಸೂಚನೆ ನೀಡಿದರು.

ಈ ವೇಳೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News