ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೆ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಜಿಲ್ಲಾಧಿಕಾರಿಯವರು ಆಗಸ್ಟ್ 31 ರಂದು ಹೊನ್ನಾಳಿಗೆ ಭೇಟಿ ನೀಡಿ ದುರಸ್ಥಿಯಾದ ಕಾಲುವೆ ವೀಕ್ಷಣೆಯಾಗಿ ಬಸವನಹಳ್ಳಿ ಮಾರ್ಗವಾಗಿ ತೆರಳಿದ್ದಾರೆ. ಅಲ್ಲಿ ನ್ಯಾಯಬೆಲೆ ಅಂಗಡಿ ನೋಡಿದ ಜಿಲ್ಲಾಧಿಕಾರಿಯವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ತೆರಳಿದಾಗ ಅಲ್ಲಿ ಓರ್ವ ಮಹಿಳೆ ಪಡಿತರ ಧಾನ್ಯಗಳನ್ನು ಪಡೆದುಕೊಂಡಿದ್ದರು. ಅವರನ್ನು ಮಾತನಾಡಿಸಿ ನಿಮ್ಮ ಮನೆಯಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಆಹಾರಧಾನ್ಯ ನೀಡುತ್ತಿದ್ದಾರೆ ಎಂದು ಮಾಹಿತಿ ಪಡೆದುಕೊಂಡರು. ಮಹಿಳೆ ಮೂರು ಕೆ.ಜಿ.ಅಕ್ಕಿ ಹಾಗೂ 2 ಕೆ.ಜಿ ರಾಗಿ ಪಡೆಯಲಾಗಿದೆ ಎಂದಾಗ ತೂಕದ ನಿಖರತೆ ಪರೀಕ್ಷೆ ಮಾಡಲು ಮರು ತೂಕ ಮಾಡಲು ತಿಳಿಸಿದರು.


ಇದನ್ನೂ ಓದಿ: ಬೆಂಬಲ ಬೆಲೆ ಯೋಜನೆಯಡಿ ರೂ.8682 ರಂತೆ ಹೆಸರು ಕಾಳು ಉತ್ಪನ್ನ ಖರೀದಿ


ಒಟ್ಟು ಆಹಾರ ಧಾನ್ಯ ಐದು ಕೆಜಿ ನೀಡಬೇಕಿದ್ದು ಇದು 4 ಕೆಜಿ 300 ಗ್ರಾಂ ತೂಕ ಮಾತ್ರ ಬಂದಿದೆ. ಪಡಿತರರಿಗೆ 700 ಗ್ರಾಂ ತೂಕದಲ್ಲಿ ಮೋಸ ಮಾಡಲಾಗಿದೆ ಎಂದು ಅರಿತ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಸ್ಥಳದಲ್ಲಿಯೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲು ಸೂಚನೆ ನೀಡಿದರು.


ಈ ವೇಳೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.