ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ಪ್ರವೇಶದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?

ನಾನು ಕಳೆದ ಹದಿನೈದು ದಿನಗಳಿಂದ ಇಲ್ಲೇ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ (Dharwad Lok Sabha Constituency) ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ (Congress Ticket) ನೀಡುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ. - ಸಚಿವ ಸಂತೋಷ್ ಲಾಡ್ 

Written by - Yashaswini V | Last Updated : Apr 11, 2024, 01:43 PM IST
  • ದಿಂಗಾಲೇಶ್ವರ ಸ್ವಾಮೀಜಿ ಅವರ ರಾಜಕೀಯ ಪ್ರವೇಶ
  • ಈ ಕುರಿತಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್ ಹೇಳಿದ್ದೇನು?
ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ಪ್ರವೇಶದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?  title=

ಹುಬ್ಬಳ್ಳಿ : ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗೆ (Dingaleshwar Swamiji) ಕಾಂಗ್ರೆಸ್ ಟಿಕೆಟ್ ಕೊಡುವ ವಿಚಾರವಾಗಿ ನನಗೆ ಏನು ಗೊತ್ತು ಇಲ್ಲ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಸಂತೋಷ ಲಾಡ್ ಹೇಳಿದರು.

ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಸಚಿವ ಸಂತೋಷ ಲಾಡ್, ನಾನು ಕಳೆದ ಹದಿನೈದು ದಿನಗಳಿಂದ ಇಲ್ಲೇ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ (Dharwad Lok Sabha Constituency) ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ (Congress Ticket) ನೀಡುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ. ಹೈಕಮಾಂಡ್ ಮಟ್ಟದಲ್ಲಿ ಏನು ಚರ್ಚೆ ಆಗಿದೆ ಎಂಬ ಮಾಹಿತಿ ಸಹ ಇಲ್ಲ ಈ ಬಗ್ಗೆ ನಾನು ಏನು ಹೇಳಲಾರೆ ಎಂದರು.

ಇದನ್ನೂ ಓದಿ- ಕೋಟೆಯ ನಾಡು ಚಿತ್ರದುರ್ಗದಲ್ಲಿ ‘ಚಂದ್ರೋ’ದಯವೋ.. ʼಗೋವಿಂದʼ ಸ್ತುತಿಯೋ..? ಹೀಗಿದೆ ಬಲಾಬಲ..

ಇದೇ ಸಂದರ್ಭದಲ್ಲಿ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ (Dingaleshwar Swamiji) ಅವರ ಬಗ್ಗೆ ಅಪಾರ ಗೌರವ ಇದೆ ಎಂದು ತಿಳಿಸಿದ ಸಚಿವ ಸಂತೋಷ್ ಲಾಡ್ (Minister Santosh Lad),  ಅವರೊಬ್ಬ ಮಹಾನ್ ವ್ಯಕ್ತಿ. ಭಾವೈಕ್ಯತೆ ಸ್ವಾಮೀಜಿ ಆಗಿದ್ದು, ಅವರಿಗೆ ಶಕ್ತಿ ಇದೆ. ದೊಡ್ಡ ಪ್ರಮಾಣದಲ್ಲಿ ಲಕ್ಷಾಂತರ ಭಕ್ತರು ಹಿಂಬಾಲಕರು ಇದ್ದಾರೆ. ಧಾರವಾಡ ಜಿಲ್ಲೆ ಅಷ್ಟೇ ಎಲ್ಲಾ ರಾಜ್ಯದ ಎಲ್ಲ ಕಡೆ ಇದ್ದಾರೆ ಎಂದಿದ್ದಾರೆ. 

ಇದನ್ನೂ ಓದಿ- ಚಿಕ್ಕಬಳ್ಳಾಪುರ ಲೋಕ ಸಮರ..! 10 ಬಾರಿ ಕಾಂಗ್ರೆಸ್‌ ಗೆದ್ದರೆ, 1 ಬಾರಿ ಕಮಲಕ್ಕೆ ಜಯ.. ಹೇಗಿದೆ ಸಧ್ಯದ ಬಲಾಬಲ 

ಈ ವೇಳೆ ದಿಂಗಾಲೇಶ್ವರ  ಸ್ವಾಮೀಜಿ ಅವರ ರಾಜಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂತೋಷ್ ಲಾಡ್, ಸ್ವಾಮೀಜಿ ಅವರು ರಾಜಕೀಯಕ್ಕೆ ಬರುವುದರಿಂದ ಏನಾಗುತ್ತದೆ ಅಂತಾ ಹೇಳಲು ನನಗೆ ಆಗಲ್ಲ. ಆದರೆ ಅವರ ಆರ್ಶೀವಾದಿಂದ ನಾವು ಸಹ ಚುನಾವಣೆಗೆ ಹೋಗತಾ ಇದ್ದೇವೆ. ಅವರ ಮಠ ಭಾವೈಕ್ಯತೆಗೆ ಹೆಸರು, ಅವರೊಬ್ಬ ಸಾಮಾಜಿಕ ಸಾಮರಸ್ಯ ಉಳ್ಳ ಒಳ್ಳೆಯ ವ್ಯಕ್ತಿ. ರಾಜಕೀಯದ ಬಗೆಗಿನ ಚರ್ಚೆಗೆ ಇದು ಸೂಕ್ತ ಸಮಯವಲ್ಲ ಎಂದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News