ಬೆಂಗಳೂರು: ಸಿದ್ದರಾಮಯ್ಯ ಅವರ ಸಿದ್ಧಾಂತ ಯಾವುದು, ಮಜಾವಾದವೋ, ಸಮಾಜವಾದವೋ? ಎಂದು ಬಿಜೆಪಿ ಪ್ರಶ್ನಿಸಿದೆ. #ಮಜವಾದಿಸಿದ್ದರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಯಾವ ಸೈದ್ಧಾಂತಿಕ ಬದ್ಧತೆಯೂ ಇಲ್ಲದೇ ಎಲ್ಲರ ಮೇಲೂ ಎರಗುವ, ಎಲ್ಲರನ್ನೂ ಕಬಳಿಸುವ ಸಿದ್ದರಾಮಯ್ಯರ ರಾಜಕೀಯ ಬೆಳವಣಿಗೆಯನ್ನು ಅನಾವರಣಗೊಳಿಸಲಿದು ಸಕಾಲ’ವೆಂದು ಟೀಕಿಸಿದೆ.


ಸಿದ್ದರಾಮಯ್ಯರ ಆಪ್ತರನ್ನು ತುಸು ವಿಚಾರಿಸಿದರೆ ಮೈಸೂರು ಜಲದರ್ಶಿನಿಯ ಕಲ್ಯಾಣಲೀಲೆಗಳು ಹೊರಬೀಳುತ್ತವೆ. ಪಕ್ಷದ ಚೌಕಟ್ಟಿನಲ್ಲಿ ಯಾವ ಹೋರಾಟವನ್ನೂ ರೂಪಿಸದ ಸಿದ್ದರಾಮಯ್ಯ ಹುತ್ತದಲ್ಲಿ ಸೇರುವ ಹಾವು, ಅಷ್ಟೇ’ ಎಂದು ಬಿಜೆಪಿ ಕುಟುಕಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಸಚಿವ ನಾಗೇಶ್ ಅವರ ಮನೆ ಮೇಲಿನ ದಾಳಿ ಹೇಡಿತನದ ಸಂಕೇತ'


ಗಣಿಗಾರಿಕೆ ಆರೋಪ: ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲು!


‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಿದ್ದರಾಮಯ್ಯರ ರಾಜಕೀಯ ಏಳಿಗೆಯ ನಿಜವಾದ ಗುರು. ಆದರೆ, ಸಿದ್ದರಾಮಯ್ಯನವರು ದೇವೇಗೌಡರಿಗೆ ಮಾಡಿದ್ದೇನು? ಒಂದಿಷ್ಟು ಜನ "ರಾತ್ರಿ ಗೆಳೆಯರ" ಜೊತೆ ಗುಂಪುಕಟ್ಟಿಕೊಂಡು ಉಂಡ ಮನೆಗೆ ಬೆಂಕಿ ಹಚ್ಚುವ ಯೋಜನೆ ರೂಪಿಸಿದ್ದು ನಿಜವಲ್ವೇ? ಈಗ ಕಾಂಗ್ರೆಸ್ ಪಕ್ಷದಲ್ಲೂ ನಡೆಸುತ್ತಿರುವುದು ಅದನ್ನೇ ಅಲ್ಲವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.


ಸಿದ್ದರಾಮಯ್ಯ ರಾಜಕೀಯ ಬದುಕಿನ ಮೈಲಿಗಲ್ಲುಗಳೇನು? ನಾಡು, ನುಡಿ, ಸಂಸ್ಕೃತಿ, ಜಲ, ಪರಿಸರಕ್ಕಾಗಿ ಸಿದ್ದರಾಮಯ್ಯ ಕೊಡುಗೆ ಏನು? ಜನತಾ ಪರಿವಾರದಲ್ಲಿದ್ದಾಗ ದೇವೇಗೌಡರು ಉಪವಾಸ ಸತ್ಯಾಗ್ರಹ ನಡೆಸುವಾಗ,  #ಮಜವಾದಿಸಿದ್ದರಾಮಯ್ಯ ಮಾತ್ರ ಭಾಷಣದಲ್ಲಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದರು’ ಎಂದು ಬಿಜೆಪಿ ಕುಟುಕಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.