ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, "ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?" ಎಂದರು.  

Written by - Prashobh Devanahalli | Last Updated : Sep 28, 2024, 08:04 PM IST
    • ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು?
    • ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಒತ್ತಾಯ ಮಾಡುತ್ತಿದೆ
    • ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು
ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು title=
File Photo

ಸಾತನೂರು (ಕನಕಪುರ): "ಕುಮಾರಸ್ವಾಮಿಯವರಿಗೆ ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು?" ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು.

ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, "ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?" ಎಂದರು.

ಇದನ್ನೂ ಓದಿ: BBK 11 : ಬಿಗ್‌ ಬಾಸ್‌ ಸೀಸನ್‌ 11ರ ಮೊದಲ ಸ್ಪರ್ಧಿ ಗೌತಮಿ..! ಡೇರ್‌ ಡೇವಿಲ್‌ ಸುಂದರಿಯ ಹಿಸ್ಟರಿ ಗೊತ್ತೆ..?

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಉತ್ತರಿಸಿದ್ದು ಹೀಗೆ.

ಬಿಜೆಪಿ-ದಳ ಎರಡು ಒಂದೇ:
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಒತ್ತಾಯ ಮಾಡುತ್ತಿದೆ. ಕುಮಾರಸ್ವಾಮಿಯವರು ಮೌನವಾಗಿದ್ದಾರೆ ಎಂದು ಕೇಳಿದಾಗ, "ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಪಕ್ಷ ಸಿದ್ದರಾಮಯ್ಯ ಅವರ ಬೆಂಬಲಕ್ಕಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಮಗೆ ಬಿಜೆಪಿ ಮತ್ತು ದಳ ಎರಡೂ ಒಂದೇ" ಎಂದರು.

ಕನಕಪುರದ ಮೆಡಿಕಲ್ ಕಾಲೇಜು ವಿಚಾರವಾಗಿ ಸರ್ಕಾರ ಸೂಕ್ತ ತಯಾರಿ ಮಾಡಿಕೊಳ್ಳಲಿಲ್ಲವೇ ಎಂದು ಕೇಳಿದಾಗ, ಈ ಕುರಿತು ನಾನು ಪ್ರತ್ಯೇಕ ಸಭೆ ಮಾಡಿದ್ದೇನೆ. ಹಾಸಿಗೆ ಕೊರತೆಯನ್ನು ಸರಿಪಡಿಸಲು ಸೂಚನೆ ನೀಡಿದ್ದೇನೆ. ವಸತಿ ಇಲಾಖೆಯಿಂದ ಜಾಗ ಸ್ಥಳಾಂತರವಾಗಬೇಕು. ರಾಮನಗರದಲ್ಲಿಯೂ ಕೆಲಸ ನಡೆಯುತ್ತಿದೆ. ಕನಕಪುರದಲ್ಲಿಯೂ ಆಗುತ್ತದೆ" ಎಂದರು.

ಕನಕಪುರದಲ್ಲಿ ಮೆಡಿಕಲ್ ಕಾಲೇಜು ಯಾವಾಗ ಪ್ರಾರಂಭವಾಗುತ್ತದೆ ಎಂದು ಕೇಳಿದಾಗ, " ಸಿಬ್ಬಂದಿ ಕೊರತೆ ಸೇರಿದಂತೆ ಒಂದಷ್ಟು ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸಲು ಈಗಾಗಲೇ ಸಭೆ ನಡೆಸಲಾಗಿದೆ. ರೈತರ ಭೂಮಿ ಪರಿಹಾರ ವಿಚಾರವಾಗಿ ಸಮಸ್ಯೆಗಳಿದ್ದು ಅವರ ಬಳಿ ಚರ್ಚೆ ನಡೆಸಲಾಗಿದೆ" ಎಂದರು.

ಬೆಂಗಳೂರು ದಕ್ಷಿಣ ಎಂದು ಯಾವಾಗ ನಾಮಕರಣವಾಗುತ್ತದೆ ಎಂದಾಗ, "ಸಮಯ ಬಂದಾಗ ಇದರ ಬಗ್ಗೆ ತಿಳಿಸುತ್ತೇನೆ" ಎಂದರು.

ಕನಕಪುರದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನದ ಬಗ್ಗೆ ಕೇಳಿದಾಗ, "ಅವರ ಕೆಲಸ ಅವರು ಮಾಡಲಿ. ಜನರು ಬಿಜೆಪಿ ಅಥವಾ ಜೆಡಿಎಸ್ ಯಾವುದಕ್ಕೆ ಸದಸ್ಯರಾಗುತ್ತಾರೆ? ಅವರ ಸದಸ್ಯತ್ವ ಅಭಿಯಾನವನ್ನು ನಾವು ಬೇಡ ಎನ್ನಲು ಆಗುತ್ತದೆಯೇ? ಅವರ ಪಕ್ಷವನ್ನು ಅವರು ಬಿಗಿ ಮಾಡಿಕೊಳ್ಳಲಿ. ನಾವು ಮಾಡಿದಂತೆ ಅವರು ಮಾಡುತ್ತಿದ್ದಾರೆ. ಇದರಿಂದ ರಾಜಕೀಯವಾಗಿ ಯಾರು ಗೌಪ್ಯವಾಗಿರುತ್ತಾರೆ ಅವರು ಹೊರಗೆ ಬರುತ್ತಾರೆ" ಎಂದು ಹೇಳಿದರು.

ರಾಜ್ಯದ ಸೇವೆ ಮಾಡಲು ಪ್ರಯತ್ನ ಮತ್ತು ಹೋರಾಟ ನಡೆಯುತ್ತಿದೆ ಎಂದು ಕನಕಪುರದಲ್ಲಿ ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ " ನಾನು ಈ ಈ ಅರ್ಥದಲ್ಲಿ ಮಾತನಾಡಲಿಲ್ಲ. ಜನರು ಸೇವೆ ಮಾಡಲು ಶಕ್ತಿ ಕೊಟ್ಟಿದ್ದಾರೆ ಎಂದು ಹೇಳಿದ್ದೇನೆ. ನೀವು (ಮಾಧ್ಯಮದವರು) ಹೊಸ ಅರ್ಥವನ್ನು ಸೃಷ್ಟಿ ಮಾಡಿದ್ದೀರಿ. ಈ ರೀತಿ ಹೇಳಿಕೆ ನೀಡಿದ್ದರೆ ದಾಖಲೆ ಕೊಡಿ" ಎಂದರು.

ಇದನ್ನೂ ಓದಿ: ಎಷ್ಟೊಂದು ಸಖತ್‌ ಆಗಿದೆ ಗೊತ್ತೇ ಈ ಬಾರಿಯ ಬಿಗ್‌ ಬಾಸ್‌ ಮನೆ! ಹಿಂದಿನ ಸೀಸನ್‌ಗಿಂತಲೂ ಸೂಪರ್‌...

ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವ ಬಗ್ಗೆ ಕೇಳಿದಾಗ, "ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ತಿಳಿದು ಮಾತನಾಡುತ್ತೇನೆ" ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News