ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?

ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ. 

Written by - Ranjitha R K | Last Updated : Sep 3, 2024, 12:27 PM IST
  • ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಊಹಾಪೋಹ
  • ಯಾರಾಗುತ್ತಾರೆ ಮುಂದಿನ ಸಿಎಂ
  • ಕೇಳಿ ಬರುತ್ತಿದೆ ಈ ನಾಯಕನ ಹೆಸರು
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದರೆ ಆ ಪಟ್ಟಕ್ಕೇರುವ ನಾಯಕ ಇವರೇ ಅಂತೆ!ಹಾಗಿದ್ದರೆ ಡಿಕೆಶಿ?  title=

ಬೆಂಗಳೂರು : ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ನಡೆದ ಸಭೆ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ.

ಸಭೆಯಲ್ಲಿ ನಡೆದ ಮಾತುಕತೆ ಬಗ್ಗೆ ಪರಮೇಶ್ವರ್ ತುಟಿ ಬಿಚ್ಚಿಲ್ಲ.ಆದರೆ ಮೂಡಾ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದ ಆರೋಪದ ಮೇಲೆ ಸಿದ್ದರಾಮಯ್ಯ ಒಂದು ವೇಳೆ ರಾಜೀನಾಮೆ ನೀಡಿದರೆ ಆ ಸ್ಥಾನಕ್ಕೆ ಏರುವ ನಾಯಕ ಯಾರು ಎನ್ನುವ ಪ್ರಶ್ನೆ ಇದೀಗ ಎದ್ದಿದೆ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಎದುರಾದರೆ ಆ ಸ್ಥಾನವನ್ನು ಅಲಂಕರಿಸುವ ನಾಯಕನ ಹೆಸರು ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ. 

ಇದನ್ನೂ ಓದಿ : ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿರುವ CM

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಹಲವಾರು ನಾಯಕರು ಈಗಾಗಲೇ ತುದಿಗಾಲಲ್ಲಿ ನಿಂತಿದ್ದಾರೆ ಎಂದರೆ ತಪ್ಪಲ್ಲ.ಕೆಲವು ನಾಯಕರು ತಾನು ಸಿಎಂ ಸ್ಥಾನದ ಆಕಾಂಕ್ಷಿ ಎನ್ನುವ ಹೇಳಿಕೆಯನ್ನು ಕೂಡಾ ಕೊಟ್ಟಾಗಿದೆ. 

ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆರಂಭದಲ್ಲಿ ಈ ಸ್ಥಾನಕ್ಕೆ ಪರಿಗಣಿಸಲಾಗಿತ್ತಾದರೂ, ಇತ್ತೀಚೆಗೆ ಅವರ ಕುಟುಂಬದವರು ನಿರ್ವಹಿಸುತ್ತಿರುವ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆಯಾಗಿದೆ ಎನ್ನುವ ವಿವಾದದ ಕರಿನೆರಳು ಖರ್ಗೆ ಮೇಲಿದೆ.ಎಂ.ಬಿ.ಪಾಟೀಲ್ ಗೂ ಭೂ ಸಂಬಂಧಿತ ಸಮಸ್ಯೆ ತಡೆಯಾಗಬಹುದು.ಸತೀಶ್ ಜಾರಕಿಹೊಳಿ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಗಂಭೀರವಾಗಿ ಪರಿಗಣಿಸದಿರುವುದಕ್ಕೆ ಜೆಡಿಎಸ್ ಜೊತೆಗಿನ ಹಿಸ್ಟರಿ ಕಾರಣ ಎನ್ನಲಾಗಿದೆ. ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಈ ಹುದ್ದೆಯನ್ನು ಅಲಂಕರಿಸುವಲ್ಲಿ ಆಸಕ್ತಿ ಹೊಂದಿದ್ದಾರೆ. ಆದರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸುವುದು ಕಷ್ಟ ಎನ್ನಲಾಗಿದೆ. 

ಇದನ್ನೂ ಓದಿ : ಸುರಿದ ಮಳೆಗೆ ನಲುಗಿದ ಮಹದೇವಪುರ ಜನತೆ

ಪರಮೇಶ್ವರ್ ಮತ್ತು ಜಾರಕಿಹೊಳಿ ಅವರು ಇತ್ತೀಚೆಗೆ ಅತೃಪ್ತ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿರುವುದು ಕೂಡಾ ಗಮನಾರ್ಹ.ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ್ 2013ರಲ್ಲಿ ಅನಿರೀಕ್ಷಿತ ಸೋಲು ಕಂಡ ನಂತರ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿ ಹೋಯಿತು. ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದೇ ಬಹುವಾಗಿ ನಂಬಲಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಸದ್ಯದ ಸ್ಥಿತಿಯಲ್ಲಿ ಡಿಫೆನ್ಸಿವ್ ಆಗಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪರಮೇಶ್ವರ್ ಗೆ ಈ ಅವಕಾಶ ಶೀಘ್ರದಲ್ಲೇ ಒದಗಿ ಬರಬಹುದು ಎನ್ನಲಾಗಿದೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News