ಬೆಂಗಳೂರು: ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ‌. ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ.ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದ ಬೃಹತ್ ಪ್ರಜಾಧ್ವನಿ -2 ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.


ಇದನ್ನೂ ಓದಿ: ಟ್ರು ಲವ್, ಜಸ್ಟೀಸ್ ಫಾರ್ ದಿ ಲವ್ ಎಂಬ ಪೋಸ್ಟ್ ಮಾಡಿದ್ರು


ಬೆಲೆ ಏರಿಕೆ ಭಾರತೀಯರ ಶತ್ರು.ನಾನು ಪ್ರಧಾನಿಯಾದರೆ ಬೆಲೆ ಏರಿಕೆ ತಡೆಯುವುದಾಗಿ ಇಡಿ ಭಾರತೀಯರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಂಬಿಸಿದ್ದರು. ಆದರೆ ಇದೇ ಮೋದಿಯವರು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಸೇರಿ ಎಲ್ಲದರ ಬೆಲೆಯನ್ನೂ ಗಗನಕ್ಕೆ ಏರಿಸಿದರು.


ಇದನ್ನೂ ಓದಿ: ಕಾಂಗ್ರೆಸ್ ನವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ಚಂಬು ಕೊಟ್ಟಿದ್ದಾರೆ: ಬಸವರಾಜ ಬೊಮ್ಮಾಯಿ


ಮೋದಿಯವರ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಮಧ್ಯಮ ವರ್ಗದ ಜನ ಮತ್ತು ದುಡಿಯುವ ವರ್ಗಗಳು ಹಾಗೂ ಬಡ ಜನರ ಬದುಕಿಗೆ ಸ್ಪಂದಿಸುವ ಉದ್ದೇಶದಿಂದ ನಾನು ಐದು ಗ್ಯಾರಂಟಿಗಳನ್ನು ರೂಪಿಸಿ ಐದನ್ನೂ ಜಾರಿ ಮಾಡಿದ್ದೇವೆ.ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ ಹೆಚ್ಚಿಸಿದ್ದೇವೆ‌.ಈ ಅರ್ಹತೆಯಿಂದ ನಿಮ್ಮ ಎದುರಿಗೆ ನಿಂತು ಮತ ಕೇಳುತ್ತಿದ್ದೇವೆ.ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ? ಎಂದು ಪ್ರಶ್ನಿಸಿದ್ದಾರೆ.


ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿಕೆ ಸುರೇಶ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ.ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.