ಬೆಂಗಳೂರು: ನಾಲ್ಕೇ ಕಿಮೀ ನಡೆದು ಸುಸ್ತಾದರೆ ಹೇಗೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ವ್ಯಂಗ್ಯವಾಗಿ ಪ್ರಶ್ನಿಸಿದೆ. ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ(Mekedatu Project Dispute) ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ‘ಸಿದ್ದರಾಮಯ್ಯನವರೇ ನಿಮ್ಮ ಆರೋಗ್ಯ ಹೇಗಿದೆ?’ ಅಂತಾ ಪ್ರಶ್ನಿಸಿದೆ.


COMMERCIAL BREAK
SCROLL TO CONTINUE READING

‘ನಾವಿಬ್ಬರೇ (ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ) ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ನೀವು ನಾಲ್ಕೇ‌ ಕಿಮೀ ನಡೆದು ಸುಸ್ತಾದರೆ ಹೇಗೆ? #ಸುಳ್ಳಿನಜಾತ್ರೆಯಲ್ಲಿ ಡಿಕೆಶಿ(DK Shivakumar) ಅವರಿಗೆ ಅರ್ಧದಲ್ಲೇ ಕೈಕೊಟ್ಟಿದ್ದರ ಹಿಂದೆ ನಿಮ್ಮ ಪೂರ್ವ ನಿಯೋಜಿತ ತಂತ್ರವಿದೆಯೇ?’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.


Mekedatu Padayatre: ಡಿಕೆಶಿ ಕೋವಿಡ್ ಟೆಸ್ಟ್ ಗೆ ನಿರಾಕರಣೆ; "ತಿಹಾರ್ ಜೈಲ್ ಆಯ್ತು ಈಗ ರಾಮನಗರ ಜೈಲು ನೋಡನ"!


‘ಹೋರಾಟದ ಕಿಚ್ಚು ಕಾಂಗ್ರೆಸ್(Congress) ಪಕ್ಷಕ್ಕೆ ರಕ್ತಗತವಾಗಿ ಬಂದಿದೆ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಅಬ್ಬರಿಸಿದ್ದಾರೆ‌. ಆದರೆ ಒಂದು ವೈಜ್ಞಾನಿಕ ಸತ್ಯವನ್ನು ಕಾಂಗ್ರೆಸ್ಸಿಗರು ನೆನಪಿಟ್ಟುಕೊಳ್ಳಬೇಕು. ರಕ್ತಗತವಾಗಿ ಬರುವುದು ಖಾಯಿಲೆ ಮಾತ್ರ. ಹೋರಾಟ ರಕ್ತಗತವೋ ಮತ್ತೊಂದೋ, ಆದರೆ ಕೋವಿಡ್‌ ಮಾತ್ರ #ಸುಳ್ಳಿನಜಾತ್ರೆ‌ ಮೂಲಕ ಹಬ್ಬುವುದು ನಿಶ್ಚಿತ’ ಅಂತಾ ಟೀಕಿಸಿದೆ.


'ಚಂಪಾ' ಇನ್ನಿಲ್ಲ: ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ನಿಧನ, ಸಿಎಂ ಸಂತಾಪ


DK Sivakumar)ಯವರು ದೇಶದಲ್ಲಿ ಕೋವಿಡ್ ಇಲ್ಲ, ಎಲ್ಲವೂ ಬಿಜೆಪಿ ಸೃಷ್ಟಿ ಎನ್ನುತ್ತಿದ್ದಾರೆ. ಆದರೆ ಅವರದೇ ಪಕ್ಷದ ಹಿರಿಯ ನಾಯಕರು ಹಾಗೂ ಹೈಕಮಾಂಡ್ ಕೋವಿಡ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸವಾರಿಗೆ ಹೊರಟಿದೆ. ಹಾಗಾದರೆ ಯಾರ ಮಾತು ಸರಿ? ಕೆಪಿಸಿಸಿ ಅಧ್ಯಕ್ಷ(KPCC President)ರೇ ಮನುಷ್ಯನಿಗೆ ದೇಹ ಸ್ವಾಸ್ಥ್ಯ ಹಾಗೂ ಚಿತ್ತ ಸ್ವಾಸ್ಥ್ಯ ಎರಡು ಮುಖ್ಯ. ಕೋವಿಡ್ ವಿಚಾರದಲ್ಲಿ ನೀವು ಚಿತ್ತ ಸ್ವಾಸ್ಥ್ಯ ಕಳೆದುಕೊಂಡಿದ್ದೀರೋ ಅಥವಾ ನಿಮ್ಮ ರಾಷ್ಟ್ರೀಯ ನಾಯಕರೋ?’ ಅಂತಾ ಬಿಜೆಪಿ ಕುಟುಕಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.