ದಸರಾ ಉದ್ಘಾಟನೆ ವೇಳೆ ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್: ಎಚ್‌ಡಿ‌ಕೆ ರಾಜೀನಾಮೆ ಕೊಡ್ತಾರಾ..!

GT Devegowda: ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು. ಅವರು ಯಾವತ್ತೂ ಕುಟುಂಬ ನೋಡಿದವರಲ್ಲ. ಎಫ್‌ಆರ್‌ಐ ಆದವರು ರಾಜೀನಾಮೆ ಕೊಡಬೇಕೆಂದರೆ ಜೆ‌ಡಿ‌ಎಸ್ ನಲ್ಲಿ ಇರೋರು ಕೊಡ್ತಾರಾ? ಸ್ವ ಪಕ್ಷದವರ ವಿರುದ್ಧವೇ ಗುಡುಗಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ. 

Written by - Yashaswini V | Last Updated : Oct 3, 2024, 11:34 AM IST
  • ಸಿಎಂ ಸಿದ್ದರಾಮಯ್ಯ ಪರ ಶಾಸಕ ಜಿ‌.ಟಿ.ದೇವೇಗೌಡ ಬ್ಯಾಟಿಂಗ್.
  • ವಿಧಾನಸೌಧದ ಮುಂದೆ ಸಾಲಾಗಿ ಬಂದು ರಾಜೀನಾಮೆ ಕೊಡಿ, ಕೊಡ್ತೀರಾ ?
  • ತಾಕತ್ತಿದ್ದರೆ ಎಲ್ಲ ಬನ್ನಿ. ಯಾರ ಮೇಲೆ ಎಫ್‌ಐಆರ್ ಆಗಿದೆಯೋ ಎಲ್ಲರು ರಾಜೀನಾಮೆ ಕೊಡಿ ಎಂದು ಗುಡುಗಿದ ಜಿ‌ಟಿಡಿ
ದಸರಾ ಉದ್ಘಾಟನೆ ವೇಳೆ ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್: ಎಚ್‌ಡಿ‌ಕೆ ರಾಜೀನಾಮೆ ಕೊಡ್ತಾರಾ..! title=

ಮೈಸೂರು: ರಾಜ್ಯದಲ್ಲಿ ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ನಿನ್ನೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಬಿ‌ಡಿ‌ಎ ಬಾಂಬ್ ಸಿಡಿದಿದ್ದರು. ಇಂದು ಜೆ‌ಡಿ‌ಎಸ್ ನಾಯಕರ ವಿರುದ್ಧ ಸ್ವಪಕ್ಷದವರೇ ಗುಡುಗಿದ್ದು ಎಫ್‌ಐಆರ್ ಆದೊರೆಲ್ಲಾ ರಾಜೀನಾಮೆ ಕೊಡಬೇಕು ಅಂದ್ರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ನಿಡ್ತಾರಾ ಎಂದು  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಪ್ರಶ್ನಿಸಿದ್ದಾರೆ. 

ಮೈಸೂರಿನಲ್ಲಿ ಇಂದು ದಸರಾ ಉದ್ಘಾಟನಾ ಭಾಷಣದ ವೇಳೆ ಮಾತನಾಡಿದ ಜೆ‌ಡಿ‌ಎಸ್ ಶಾಸಕ ಜಿ.ಟಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಮಾಡಿದರು. ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು ಹೌದು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಭಾರಿ ಸಿಎಂ ಆಗಿದ್ದಾರೆ ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ಮಾತ್ರವೇ ಸಾಧ್ಯ. ಎಂತಹ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ ಎಂದು ಧನಾತ್ಮಕ ಮಾತುಗಳನ್ನಾಡಿದರು. 

ಇದನ್ನೂ ಓದಿ- ಮುಡಾಗೆ ಬಿಡಿಎ ʼಕೈʼ ಕೌಂಟರ್;‌ ಸರ್ಕಾರಿ ಜಮೀನು ಸರ್ಕಾರಕ್ಕೆ ರಿಟರ್ನ್ ಗಿಫ್ಟ್ ಕೊಟ್ಟ ದಾನಶೂರ ಆರ್.ಅಶೋಕ್!

ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ: 
ಉಪ ಚುನಾವಣೆ ವೇಳೆ ಸಿದ್ದರಾಮಯ್ಯರನ್ನ ಸೋಲಿಸಲಿಕ್ಕೆ ನಾವು ತೀರ್ಮಾನ ಮಾಡಿದ್ವಿ. ಆದರೆ ಸಿಎಂ ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರಿಗೆ ಇದೆ ಎಂದರಲ್ಲದೆ ರಾಜ್ಯದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ 'ಮುಡಾ ಪ್ರಕರಣ'ಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ - ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ. ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್‌ಐ‌ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ ಜೆಡಿಎಸ್ ನಲ್ಲಿ ಇರೋರು ರಾಜೀನಾಮೆ ಕೊಡ್ತಾರಾ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದರು. 

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದ್ಯಾ ಎಂದು ಪ್ರಶ್ನಿಸಿದ ಶಾಸಕ ಜಿ‌ಟಿ ದೇವೇಗೌಡ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ? ಕುಮಾರಸ್ವಾಮಿ ಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? ಎಂದು ನೇರವಾಗಿಯೇ ಕೇಳಿದರು. 

ಇದನ್ನೂ ಓದಿ- ಮುಡಾಕ್ಕಿಂತಲೂ ದೊಡ್ಡ ಹಗರಣ; ಸಿಎಂ ಸಿದ್ದರಾಮಯ್ಯರ ವಿರುದ್ಧ ಸ್ಫೋಟಕ ಬಾಂಬ್‌ ಸಿಡಿಸಿದ ಎಚ್‌.ಡಿ.ಕುಮಾರಸ್ವಾಮಿ!

136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ,  ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ?, ಒಂದು ಅತ್ಯಾಚಾರ, ಕೊಲೆ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ. ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯಾ ಎಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತು ಕೊಳ್ಳಿ. ಬನ್ನಿ ನೋಡೋಣಾ. ಕೇಂದ್ರದಿಂದ ರಾಜ್ಯಕ್ಕೆ ಏನೂ ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ? ಎಂದು ಜಿ‌ಟಿ ದೇವೇಗೌಡ ಗುಡುಗಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News