ಬೆಂಗಳೂರು : ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರಿಂದ ಕೊಂಚ ನಿಯಂತ್ರಣ ಕೂಡ ಆಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತಷ್ಟು ಕೊರೋನಾ ನಿಯಂತ್ರಣಕ್ಕಾಗಿ ಮತ್ತೆ ಜೂನ್.7ರ ನಂತ್ರ ಒಂದು ವಾರ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


COMMERCIAL BREAK
SCROLL TO CONTINUE READING

ಹೀಗಾಗಲೆ ಸಚಿವ ಬಸವರಾಜ ಬೊಮ್ಮಾಯಿ, ಲಾಕ್ ಡೌನ್ ಮತ್ತೆ ವಿಸ್ತರಣೆಯ ಬಗ್ಗೆ ಸಿಎಂ ಯಡಿಯೂರಪ್ಪ(BS Yediyurappa) ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಅಲ್ಲದೇ ಸಚಿವ ಸುಧಾಕರ್ ಸೇರಿದಂತೆ ಅನೇಕ ಸಚಿವರು ಇದೇ ಮಾತನ್ನು ತಿಳಿಸಿದ್ದಾರೆ. ಹೀಗಾಗಿ ಜೂನ್.7ರ ನಂತ್ರ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ವಿಚಾರ ಸಿಎಂ ಯಡಿಯೂರಪ್ಪ ನಿರ್ಧಾರ ಮಾಡಲಿದ್ದಾರೆ.


ಇದನ್ನೂ ಓದಿ : Laxman Savadi : 'ಟೂರಿಸ್ಟ್ ವಾಹನ ಮಾಲೀಕ'ರಿಗೆ ಗುಡ್ ನ್ಯೂಸ್..! 


ಇದರ ಮಧ್ಯೆ, ತಜ್ಞರ ಸಮಿತಿ ಮಾತ್ರ, ರಾಜ್ಯದಲ್ಲಿ ಕೊರೋನಾ ಮತ್ತಷ್ಟು ನಿಯಂತ್ರಣ ಆಗಬೇಕಾದರೆ, ಈಗ ಜಾರಿ ಇರುವ ಲಾಕ್ ಡೌನ್( Lockdown Extended) ಅನ್ನು ಮತ್ತೆ ಮುಂದುವರೆಸೋದು ಅತ್ಯಗತ್ಯ. ಇಲ್ಲವಾದಲ್ಲಿ ಕೊರೋನಾ ನಿಯಂತ್ರಣ ಕಷ್ಟ ಸಾಧ್ಯ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಜೂನ್ 7ರ ನಂತ್ರ ಮತ್ತೆ ಒಂದುವಾರ ಜೂನ್.13ರವರೆಗೆ ಲಾಕ್ ಡೌನ್ ವಿಸ್ತರಣೆ ಆಗಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಏನ್ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವ ಬಗ್ಗೆ ಕಾದು ನೋಡಬೇಕಿದೆ.


ಇದನ್ನೂ ಓದಿ : Heavy Rainfall in Karnataka : ಜೂ. 3ಕ್ಕೆ ಮುಂಗಾರು ಪ್ರವೇಶ; ನಾಳೆಯಿಂದ ರಾಜ್ಯದಲ್ಲಿ ಭಾರೀ ಮಳೆ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ