ಮಂಡ್ಯ : ಸಂಸದೆ ಸುಮಲತಾ ಅಂಬರೀಶ್ ಅವರು ಸದ್ಯದಲ್ಲೇ ಬಿಜೆಪಿ ಸೇರ್ತಾರಾ ಎಂಬ ಊಹಾಪೋಹಗಳು ಹರಿದಾಡುತ್ತಿವೆ.


COMMERCIAL BREAK
SCROLL TO CONTINUE READING

ಹೌದು, ಸುಮಲತಾ ಅವರ ಬೆಂಬಲಿಗ ಮತ್ತು  ಬಿಜೆಪಿ ನಾಯಕ ಸಚ್ಚಿದಾನಂದ ಅವರ ಶಕ್ತಿ ಪ್ರದರ್ಶನದ ಕಾರ್ಯಕ್ರಮದಲ್ಲಿ ಹಾಕಲಾಗಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಅವರ ಭಾವಚಿತ್ರ ರಾರಾಜಿಸುತ್ತಿದೆ.


ಇದನ್ನೂ ಓದಿ : CC Patil : ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಿಸಿ ಪಾಟೀಲ್!


ಇಂದು ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಸಚ್ಚಿದಾನಂದ ಶಕ್ತಿ ಪ್ರದರ್ಶನ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶದಲ್ಲಿ ಸಚಿವ ನಾರಾಯಣಗೌಡ, ಸಚಿವ ಆರ್ ಅಶೋಕ್ ಭಾಗಿಯಾಗಿದ್ದಾರೆ. 


ಸಮಾವೇಶದಲ್ಲಿ ಸಾವಿರಾರು ಜನರನ್ನು ಸೇರಿಸಿ ಸಾಧ್ಯತೆ ಇದೆ. ಸಚ್ಚಿದಾನಂದ ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಸಚ್ಚಿದಾನಂದ ಎಂಪಿ ಸುಮಲತಾ ಅವರ ಬೆಂಬಲಿಗನಾಗಿ ಕ್ಷೇತ್ರದಲ್ಲಿ ಸಮಾಜ ಸೇವಕನಾಗಿ ಕ್ಷೇತ್ರದಲ್ಲಿ ಗುರುತಿಸಿ ಕೊಂಡಿರುವ 
 ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿದ್ದಾರೆ. 


ಇಂದು ತಮ್ಮ ತಂದೆಯ ಎನ್ ಶಂಕರೇಗೌಡ ಟ್ರಸ್ಟ್ ನ ವಾರ್ಷಿಕೋತ್ಸವ ಹಾಗೂ ಕೆಂಪೇಗೌಡ ಜಯಂತಿ ಹೆಸರಲ್ಲಿ ಪಟ್ಟಣದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಿದ್ದಾರೆ. ಸಮಾಜ ಸೇವಕ ಸಚ್ಚಿದಾನಂದ ಜೊತೆ ಕಂದಾಯ ಸಚಿವ ಅಶೋಕ್ ಮೆರವಣಿಗೆಯ ಮೂಲಕ ತೆರದ ವಾಹನದಲ್ಲಿ ವೇದಿಕೆಗೆ ಆಗಮಿಸಿದರು.


ಇದನ್ನೂ ಓದಿ : ಕುರ್ಚಿ ಉಳಿಸಲು ಈ ಪರಿಯ ಗುಲಾಮಗಿರಿಯೇ? ನೆಹರು ಫೋಟೋ ಕೈಬಿಟ್ಟ ಬೊಮ್ಮಾಯಿಗೆ ಸಿದ್ದು ಗುದ್ದು!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.