ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೊಸ ರಾಜಕೀಯ ಬದಲಾವಣೆಯಾಗುವ ಮುನ್ಸೂಚನೆಯನ್ನು ಈಗ ಕಾಲಜ್ಞಾನಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು, ಅವರ ಭವಿಷ್ಯವಾಣಿ ಪ್ರಕಾರ ಮುಂದಿನ ಬಾರಿ ಈ ದೇಶದ ಚುಕ್ಕಾಣಿ ಮಹಿಳೆಯ ಕೈಯಲ್ಲಿ ಇರಲಿದೆ ಎಂದು ಹೇಳಿದ್ದಾರೆ.


ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೋವಿನಕೆರೆಯಲ್ಲಿ ಈ ಹಿಂದೆ  ಭವಿಷ್ಯ ನುಡಿದಿದ್ದ ಕಾಲಜ್ಞಾನಿ ಯಶವಂತ್ ಗುರೂಜಿ ಮಹಾಶಿವರಾತ್ರಿ ಬಳಿಕ ಶಕ್ತಿ ಸ್ವರೂಪವಾದ ಮಹಿಳೆ ದೇಶವನ್ನು ಆಳುತ್ತಾಳೆ, ಮಾರ್ಚ್ ತಿಂಗಳ ಬಳಿಕ ಇದು ಶತ ಸಿದ್ದ ಎಂದು ಅವರು ಭವಿಷ್ಯ ನುಡಿದಿದ್ದಾರೆ.


ಇದನ್ನೂ ಓದಿ: ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ?: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಕಿಡಿ


ಅಚ್ಚರಿಯ ಸಂಗತಿ ಎಂದರೆ ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದರು.


ಈಗ ಅವರು ನುಡಿದಿರುವ ಭವಿಷ್ಯವಾಣಿಯ ಪ್ರಕಾರ ಮಹಾಶಿವರಾತ್ರಿ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರವಾದ ಬದಲಾವಣೆಯಾಗಲಿದ್ದು, ಒಂದು ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲ್ಲ ಮಿತ್ರ ಪಕ್ಷಗಳ ಸಹಾಯದಿಂದ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ.ಪ್ರಧಾನಿ ಯೋಗವಿರುವ ಸ್ತ್ರೀ ಬಗ್ಗೆ ಮಕರ ಸಂಕ್ರಾಂತಿಯಂದು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.