ದೊಡ್ಡಬಳ್ಳಾಪುರ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲಿ ಊಟದ ವಿಚಾರಕ್ಕೇ ಮೂವರ ಹೆಣ ಬಿದ್ದಿರುವ ಆರೋಪ ಕೇಳಿ ಬಂದಿದೆ. ಈ ಮೂಲಕ ದೊಡ್ಡಬಳ್ಳಾಪುರದ ಎಸ್.ಎಂ.ಗೊಲ್ಲಹಳ್ಳಿಯಲ್ಲಿ ಮಹಿಳೆ ಆತ್ಮಹತ್ಯೆಗೆ (Suicide) ಶರಣಾದ ಪ್ರಕರಣ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದೆ.


COMMERCIAL BREAK
SCROLL TO CONTINUE READING

ದೊಡ್ಡಬಳ್ಳಾಪುರ (Doddaballapura) ಪಟ್ಟಣದಲ್ಲಿ ಬೆಳೆದಿದ್ದ ಮೃತ ಮಹಿಳೆಗೆ ವಾರಕ್ಕೆ ಒಮ್ಮೆ ಹೋಟೆಲ್ ನಲ್ಲಿ ಊಟಕ್ಕೆ ಹೋಗುವ ಆಸೆ ಇತ್ತಂತೆ. ಆದರೆ ಹಳ್ಳಿಯಲ್ಲಿ ಹುಟ್ಟಿ ಬೆಳೆದಿದ್ದ ಪತಿ ತನ್ನ ಆಸೆ ಈಡೇರಿಸುತ್ತಿಲ್ಲ ಎಂದು ಜಿಗುಪ್ಸೆಗೊಂಡು 2 ಮಕ್ಕಳ ಜೊತೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆದರೆ ಮಹಿಳೆಗೆ (Woman) ಆರೋಗ್ಯ ಸಮಸ್ಯೆ ಇದ್ದಿದ್ದರಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸ್ (Police) ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಪೆಟ್ರೋಲ್ ತೆಗೆದುಕೊಂಡು ಹೋಗಿ ಮಕ್ಕಳ ಜೊತೆಗೆ ತನಗೂ ಬೆಂಕಿ ಇಟ್ಟುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಳು.


ಇದನ್ನೂ ಓದಿ- Bangalore:1200 ರೂ. ಗಾಗಿ ಬಿತ್ತು ಹೆಣ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಂದೇ ಬಿಟ್ಟರು..
 
ಕೊಲೆಯೋ..? ಆತ್ಮಹತ್ಯೆಯೋ..?

ಅತ್ತೆ, ಮಾವ ದೇವಾಲಯಕ್ಕೆ (Temple) ಹೋದ ಸಂದರ್ಭದಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಳು. ಮನೆಯಿಂದ ಹೊಗೆ ಬರುತ್ತಿದ್ದದ್ದನ್ನು ಗಮನಿಸಿ ಗ್ರಾಮಸ್ಥರು ಕದ ಮೀಟಿ ಬೆಂಕಿ ನಂದಿಸಿದ್ದರು. ಆದರೆ ಅಷ್ಟೊತ್ತಿಗಾಗಲೇ ಪರಿಸ್ಥಿತಿ ಕೈಮೀರಿತ್ತು. ಇದೀಗ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತ ಮಹಿಳೆಯ ಪೋಷಕರು ದೂರು ನೀಡಿದ್ದು, ತನಿಖೆ ಆರಂಭವಾಗಿದೆ.


ಇದನ್ನೂ ಓದಿ- ಜೈಲಿಗೆ ಹಾಕಿದ್ರು ಪರವಾಗಿಲ್ಲ, ಪಾದಯಾತ್ರೆ ಮಾಡಿಯೇ ತೀರುತ್ತೇವೆ: ಡಿ.ಕೆ.ಶಿವಕುಮಾರ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.