ಬಾಗಲಕೋಟೆ : ಬಸ್‌ ಪಾಟಾ ಕಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಹರಿದ ಘಟನೆ ಬಾದಾಮಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಪಾಟಾ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೆಂಕುಬಾಯಿ ಮೇಲೆ ಹರಿದಿದೆ. ಘಟನೆಯಲ್ಲಿ ವೆಂಕುಬಾಯಿ ರಾಮಣ್ಣ ಚವ್ಹಾಣ್ (35) ಎಂಬ ಮಹಿಳೆ ಮೃತಪಟ್ಟಿದ್ದಾರೆ.


ಇದನ್ನೂ ಓದಿ: ಬ್ಯಾಂಕ್ ಗ್ರಾಹಕರೆ ಗಮನಿಸಿ : ಅಕ್ಟೋಬರ್‌ ತಿಂಗಳಲ್ಲಿ  21 ದಿನ ಬ್ಯಾಂಕ್ ಬಂದ್!


ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಾಳಾಪುರ ತಾಂಡಾ ನಿವಾಸಿಗಳಾದ ಮೃತ ವೆಂಕುಬಾಯಿ ತನ್ನ ಗಂಡ ಹಾಗೂ ಮಗುವಿನೊಂದಿಗೆ ಕರೆಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದರು. ಈ ವೇಳೆ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್‌ನ ಪಾಟಾ ಕಟ್‌ ಆಗಿತ್ತು. ಅದೃಷ್ಟವಶಾತ್ ಬಸ್ ಪಲ್ಟಿಯಾಗದ ಹಿನ್ನೆಲೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಇದನ್ನೂ ಓದಿ: ಕಾಂತಾರʼ ಸಿಂಗಾರ ಸಿರಿ ಸಪ್ತಮಿ ನೋಟಕ್ಕೆ ಮೂಕವಿಸ್ಮಿತರಾದ ಫ್ಯಾನ್ಸ್‌..!


ಇನ್ನು ಘಟನೆಯಲ್ಲಿ ವೆಂಕುಬಾಯಿ ಗಂಡ ಹಾಗೂ ಮಗುವಿಗೆ ಯಾವುದೇ ಗಾಯಗಳಾಗಿಲ್ಲ. ವೆಂಕುಬಾಯಿ ಹಾಗೂ ಕುಟುಂಬ ಬಾದಾಮಿ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕರೆಮ್ಮ ದೇವಸ್ಥಾನಕ್ಕೆ ಹೋಗುವಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.