ಕುಟುಂಬ ಆತ್ಮಹತ್ಯೆ ಯತ್ನ ಕೇಸ್‌ನಲ್ಲಿ ಮಹಿಳೆ ಸಾವು: ಸಿಮ್ಸ್ ಗೆ ಸಚಿವರ ಭೇಟಿ

Minister visits Sims: ಅಶ್ಲೀಲ ವೀಡಿಯೋ ವೈರಲ್ ಬೆದರಿಕೆಗೆ ಹೆದರಿ ಕುಟುಂಬದ ನಾಲ್ವರಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Written by - Savita M B | Last Updated : Jun 10, 2024, 04:51 PM IST
  • ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಲೀಲಾವತಿ ಮೃತ ದುರ್ದೈವಿ
  • ಅಶ್ಲೀಲ ವೀಡಿಯೋ ವೈರಲ್ ಬೆದರಿಕೆಗೆ ಹೆದರಿದ ಕುಟುಂಬದ ನಾಲ್ವರು ಮಲೆ ಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಕುಟುಂಬ ಆತ್ಮಹತ್ಯೆ ಯತ್ನ ಕೇಸ್‌ನಲ್ಲಿ ಮಹಿಳೆ ಸಾವು: ಸಿಮ್ಸ್ ಗೆ ಸಚಿವರ ಭೇಟಿ title=

ಚಾಮರಾಜನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಲೀಲಾವತಿ ಮೃತ ದುರ್ದೈವಿ. ಅಶ್ಲೀಲ ವೀಡಿಯೋ ವೈರಲ್ ಬೆದರಿಕೆಗೆ ಹೆದರಿದ ಕುಟುಂಬದ ನಾಲ್ವರು ಮಲೆ ಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪ್ರಕರಣದ ದಿನವೇ ಮಹಾದೇವನಾಯಕ ಅಸುನೀಗಿದ್ದರೆ ಇಂದು ಮಹಾದೇವನಾಯಕ ಪುತ್ರಿ ಲೀಲಾವತಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಮೃತ ಮಹಾದೇವನಾಯಕ ಪತ್ನಿ ಗೌರಮ್ಮ, ಅಪ್ರಾಪ್ತೆ ಮೊಮ್ಮಗಳು ಐಸಿಯು‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಸಚಿವರು, ಡಿಸಿಗಳು ಭೇಟಿ: 
ಪ್ರಕರಣದ ಬಗ್ಗೆ ತಿಳಿಯಲು ಸಚಿವರಾದ ಕೆ.ವೆಂಕಟೇಶ್, ಡಾ.ಎಚ್.ಸಿ.ಮಹಾದೇವಪ್ಪ, ಚಾಮರಾಜನಗರ ಡಿಸಿ ಶಿಲ್ಪಾನಾಗ್, ಮೈಸೂರು ಡಿಸಿ ರಾಜೇಂದ್ರ ಸಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದರು. ಸದ್ಯದ, ಆರೋಗ್ಯದ ಪರಿಸ್ಥಿತಿಗೆ ಬಗ್ಗೆ ವೈದ್ಯರಿಂದ ಸಚಿವರು ಮಾಹಿತಿ ಪಡೆದರು.

ಅಶ್ಲೀಲ ವೀಡಿಯೋ ಬೆದರಿಕೆ ಹಾಗೂ ಪೊಲೀಸರ ನಿರ್ಲಕ್ಷ: 
ಮೃತ ಮಹದೇವನಾಯಕರ  ಮೊಮ್ಮಗಳು ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದು ಚೀರನಹಳ್ಳಿ ಗ್ರಾಮದ ಲೋಕೇಶ್ ಜೊತೆ ಸ್ನೇಹವಿತ್ತು. ಸ್ನೇಹವನ್ನೇ ಬಂಡವಾಳ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಯುವಕ ಅಪ್ರಾಪ್ತೆಯನ್ನು ಚುಂಚ‌ನಕಟ್ಟೆಗೆ ಕರೆದೊಯ್ದು ಖಾಸಗಿ ವೀಡಿಯೋ ಸೆರೆ ಹಿಡಿದಿದ್ದ. ಬಳಿಕ, ತಾನು ಹೇಳದಿದ್ದನ್ನು ಕೇಳದಿದ್ದರೇ ವೀಡಿಯೋ ಹರಿ ಬಿಡುವುದಾಗಿ ಹುಡುಗಿ ಮನೆಗೇ ಬಂದು ಹೆದರಿಸಿದ್ದ.
ಯುವಕನ ಅಟಾಟೋಪಕ್ಕೆ ಬೇಸತ್ತ ಮಹಾದೇವನಾಯಕ ಕುಟುಂಬ ಕೆ.ಆರ್.‌ನಗರ ಪೊಲೀಸರಿಗೆ ದೂರು ಕೊಟ್ಟರೂ ಯಾವುದೇ ಕ್ರಮ ವಹಿಸದ ಆರೋಪ ಕೇಳಿಬಂದಿದೆ.

ಪೊಲೀಸರು ಯಾವುದೇ ಕ್ರಮ ವಹಿಸದಿದ್ದದು, ವೀಡಿಯೋ ಹರಿಬಿಡುವ ಆತಂಕ ಎದುರಾಗಿ ಮಾನಕ್ಕೆ ಹೆದರಿದ ಕುಟುಂಬ ಶುಕ್ರವಾರ ಮಧ್ಯಾಹ್ನವೇ ಮಲೆ ಮಹದೇಶ್ವರ ಬೆಟ್ಟದತ್ತ ಬಂದಿದ್ದಾರೆ‌. ಮಾದಪ್ಪನ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಕಾಡಿನ‌ಹಾದಿಯಲ್ಲಿ ನಾಲ್ವರು ಕ್ರಿಮಿನಾಶಕ ಸೇವಿಸಿ, ಮಹಾದೇವನಾಯಕ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿತ್ತು. ಈಗ ಮಗಳು ಲೀಲಾವತಿ ಕೂಡ  ಸಿಮ್ಸ್ ಆಸ್ಪತ್ರೆಯಲ್ಲಿ  ಅಸುನೀಗಿದ್ದಾರೆ.

ಘಟನೆ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿ ಲೋಕೇಶ್ ನನ್ನು ಬಂಧಿಸಿದ್ದಾರೆ. ಮತ್ತು ಕೆ.ಆರ್.ನಗರ ಠಾಣೆಯ ಮೂವರು ಪೊಲೀಸರು ಅಮಾನತುಗೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News