)
ದಕ್ಷಿಣದ ಕಾಶೀ ಎಂದೇ ಪ್ರಸಿದ್ದಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಶ್ರೀವೀರಭದ್ರೇಶ್ವರ ದೇವಸ್ಥಾನ ಜಲಾವೃತ ಹಿನ್ನೆಲೆಯಲ್ಲಿ ಭಕ್ತರು ಬಾಗಿಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಇವತ್ತು ಶ್ರಾವಣ ಮಾಸದ ಕೊನೆಯ ಅಮವಾಸ್ಯೆ ಹಿನ್ನೆಲೆಯಲ್ಲಿ ಶ್ರೀ ವೀರಭದ್ರೇಶ್ವರ ದೇವರ ದರ್ಶನ ಪಡೆಯಲು ಕರ್ನಾಟಕ, ಮಹಾರಾಷ್ಟ್ರದ, ಆಂದ್ರಪ್ರದೇಶದ ಸೇರಿದಂತೆ ವಿವಿಧ ಭಾಗಗಳಿಂದ ದರ್ಶನ ಪಡೆಯಲು ಆಗಮಿಸುತ್ತಾರೆ.
ದೇವಸ್ಥಾನ ಜಲಾವೃತಗೊಂಡ ಹಿನ್ನೆಲೆಯಲ್ಲಿ ಭಕ್ತರು ಪೂರ್ವ,ಉತ್ತರದ ಬಾಗಿಲು ಹಾಗೂ ದೇವಸ್ಥಾನ ಹಿಂಭಾಗದಲ್ಲಿ ನಿಂತು ದರ್ಶನವನ್ನು ಪಡೆಯುತ್ತಿದ್ದಾರೆ. ಮಂಜಾಗೃತಾ ಕ್ರಮವಾಗಿ ಭಕ್ತರು ದೇವಸ್ಥಾನದ ಒಳಗಡೆ ಪ್ರವೇಶಿಸಬಾರದೆಂದು ಎಲ್ಲ ಬಾಗಿಲುಗಳನ್ನು ಬಂದ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಇದೇ ಸಂದರ್ಭದಲ್ಲಿ ದೇವಸ್ಥಾನದ ಕಟ್ಟಡಗಳ ಸೈಟ್ ಇನಚಾರ್ಜ ಸುನೀಲ ಬಿರದೆ ಮಾತನಾಡಿ ನಿನ್ನೆ ಸಾಯಂಕಾಲ ಈ ದೇವಸ್ಥಾನ ಜಲಾವೃತಗೊಂಡಿದೆ.ಭಕ್ತರು ಸಾಕಷ್ಟು ಪ್ರಮಾಣದಲ್ಲಿ ಆಗಮಿಸುತ್ತಿದ್ದಾರೆ.ಶ್ರೀವೀರಭದ್ರೇಶ್ವರ ದೇವರಿಗೆ ಜಲಾಭಿಷೇಕ ಆಗಿರುವುದು ಸಂತಸದ ಸುದ್ದಿ.ಭಕ್ತರು ದೂರದಿಂದ ನಿಂತು ದರ್ಶನ ಪಡೆಯಬೇಕೆಂದು ಮನವಿಯನ್ನು ಮಾಡಿಕೊಂಡರು.