ಯಡಿಯೂರಪ್ಪಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಗೊತ್ತಿಲ್ಲ: ಸಿದ್ದರಾಮಯ್ಯ

ನೀರಾವರಿ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ.

Last Updated : Sep 22, 2017, 03:19 PM IST
ಯಡಿಯೂರಪ್ಪಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಗೊತ್ತಿಲ್ಲ: ಸಿದ್ದರಾಮಯ್ಯ title=

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನೂ ಗೊತ್ತಿಲ್ಲ. ಸರ್ಕಾರದ ಸಾಧನೆಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದರೆ ಅವರು ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೀರಾವರಿ ಯೋಜನೆಗಳಿಗೆ ಸರ್ಕಾರ ಪ್ರತಿವರ್ಷ ಹತ್ತು ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. 60 ಸಾವಿರ  ಕೋಟಿ ರೂ.ಗಳನ್ನು ಈ ಐದು ವರ್ಷದಲ್ಲಿ ಖರ್ಚು ಮಾಡುತ್ತಿದ್ದೇವೆ. ಬಿಜೆಪಿಯವರು ತಮ್ಮ ಅಧಿಕಾರ ಅವಧಿಯಲ್ಲಿ ಖರ್ಚು ಮಾಡಿದ್ದು ಕೇವಲ 18 ಸಾವಿರ ಕೋಟಿ ರೂಪಾಯಿ ಎಂದು ವಿವರಿಸಿದರು.

ಕೃಷ್ಣಾ ಬಿ ಸ್ಕೀಮ್ ಯೋಜನೆಗೆ ಈಗ ಟೆಂಡರ್ ಕರೆಯಲಾಗುತ್ತಿದೆ. ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಗೆ 17,500 ಕೋಟಿ ರೂ. ವೆಚ್ಚ ಮಾಡುವುದಾಗಿ ಹೇಳಿದ್ದ ಬಿಜೆಪಿಯವರು ನಯಾಪೈಸೆ ಕೊಡಲಿಲ್ಲ ಎಂದು ಬಿಜೆಪಿಯವರ ವಿರುದ್ಧ ಕಿಡಿಕಾರಿದರು.

Trending News