ಹುಬ್ಬಳ್ಳಿ: ಕಲ್ಲಿದ್ದಲು ಗಣಿಗಾರಿಕೆ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾಡಿರುವ ಆರೋಪ ಅಧಾರ ರಹಿತವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಹುಬ್ಬಳ್ಳಿ-ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಮ್ಮ ಸರ್ಕಾರದಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದರು. ಜೊತೆಗೆ ಯಾವುದೇ ಆಧಾರವಿಲ್ಲದ ಯಡಿಯೂರಪ್ಪ ಅವರ ಆರೋಪಗಳಿಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಇಂಧನ ಸಚಿವ  ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಿದರು.


ವಿಕಾಸ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವರಿಗೆ ಕೇಂದ್ರದಿಂದ ಒಂದು ಪೈಸೆಯೂ' ಸಿಗಲ್ಲ ಎಂಬ ಪ್ರಧಾನಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರಜಾಪ್ರಭುತ್ವದದಲ್ಲಿ ಪ್ರಧಾನಿ ಆ ರೀತಿ ಮಾತನಾಡಬಾರದು. ರಾಜ್ಯ ಸರ್ಕಾರಗಳಿಂದ ತೆರಿಗೆ ಸಂಗ್ರಹ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.


ಬಿಜೆಪಿಯವರು ಚುನಾವಣೆ ಸಮೀಪಿಸುತ್ತಿದ್ದಂತೆ ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ: 


ಧಾರವಾಡದಲ್ಲಿ ಆಯೋಜಿಸಿದ್ದ ಭರವಸೆಗಳ ಸಾಕಾರದ ಸಂಭ್ರಮ, ಬೆಳಗಾವಿ ವಿಭಾಗದ ಸೌಲಭ್ಯಗಳ ವಿತರಣಾ ಸಮಾವೇಶ ಹಾಗೂ ಮಾಹಿತಿ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.


ಚುನಾವಣೆ ಹಿನ್ನೆಲೆಯಲ್ಲಿ ನಾವು ಸಮಾವೇಶಗಳನ್ನು ಮಾಡುತ್ತಿಲ್ಲ ಎಂದ ಸಿದ್ದರಾಮಯ್ಯ, ಇಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ನಲ್ಲಿ ಮಾಡುತ್ತಿರುವುದೇನು? ಚುನಾವಣೆ ಸಮೀಪಿಸುತ್ತಿದ್ದಂತೆ ವಿನಾಕಾರಣ ಆರೋಪದಲ್ಲಿ ತೊಡಗಿರುವ ಬಿಜೆಪಿ ಎಂದು ಬಿಜೆಪಿ ವಿರುದ್ಧ ಹರಿಹೈದಿದ್ದಾರೆ.