ಬೆಳಗಾವಿ : ಇಲ್ಲಿ ಬಂದಿರೋದು ವೈಯಕ್ತಿಕ ವಿಚಾರ, ಪಕ್ಷಕ್ಕೆ ಸಂಬಂಧ ಇಲ್ಲ. ರಾಜಕೀಯ ನಾಯಕರ ಸಪೋರ್ಟ್ ನಾನೇ ಕೇಳಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನವ್ಯಶ್ರೀ, ರಾಜಕುಮಾರ ಟಾಕಳೆಗೆ ದುಡ್ಡು ಕೊಟ್ಟು ಕೊಂಡುಕೊಳ್ಳುವ ಅಭ್ಯಾಸ ಇದೆ. ರಾಜಕುಮಾರ ಟಾಕಳೆ ಮೊಬೈಲ್ ಸೀಜ್ ಮಾಡಿದ್ರೆ ಮತ್ತಷ್ಟು ಹೆಣ್ಣುಮಕ್ಕಳ ಮರ್ಯಾದೆ ಉಳಿಯುತ್ತೆ. ನಾನು ಎಫ್ಐಆರ್ ಕೊಟ್ಟು 13 ದಿನ ಆಗಿದೆ. ರಾಜಕುಮಾರ ಟಾಕಳೆಯನ್ನು ಕರೆದು ವಿಚಾರಣೆ ಮಾಡಬಹುದಲ್ಲ. ಬುಧವಾರ ಸಂಜೆ ಮನೆಯಿಂದ ಆತ ಪರಾರಿಯಾಗಿದ್ದಾನೆ. ರಾಜಕುಮಾರ ಟಾಕಳೆ ಬಂಧನ ಏಕೆ ಆಗಿಲ್ಲ, ದಯಮಾಡಿ ಬಂಧಿಸಿ. ಆತ ನನ್ನ ಹೆಂಡತಿ ಅಂತಾ ಒಪ್ಪಿಕೊಳ್ಳಲಿ ಬಿಡಲಿ. ಅದನ್ನು ಹೇಗೆ ಪ್ರೂವ್ ಮಾಡಬೇಕೆಂದು ನನಗೆ ಗೊತ್ತು. ನನ್ನ ಕಿಡ್ನಾಪ್ ಮಾಡಿದು ಸಿಸಿ ಕ್ಯಾಮರಾ ವಿಸ್ಯೂಯಲ್ಸ್ ಕೊಟ್ಟಿದೀನಿ. ಪೊಲೀಸ್ ಇಲಾಖೆಗೆ ಬೇಕಾದ ಅಗತ್ಯ ದಾಖಲೆ ನೀಡ್ತೀನಿ ಎಂದು ಹೇಳಿದ್ದಾರೆ. 


ಇದನ್ನೂ ಓದಿ : ಪಿಎಸ್ಐ ನೇಮಕಾತಿ ಪ್ರಕರಣ : ಪರೀಕ್ಷೆ ಬರೆದಿದ್ದ 8 ಅಭ್ಯರ್ಥಿಗಳು ಅರೆಸ್ಟ್!


ಇನ್ನು ಮುಂದುವರೆದು ಮಾತನಾಡಿದ ನವ್ಯಶ್ರೀ, ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗುವ ಆಸೆ ಬಿಚ್ಚಿಟ್ಟರು. ಬಿಗ್ ಬಾಸ್ ಕಾರ್ಯಕ್ರಮಕ್ಕೆ‌ ನವ್ಯಶ್ರೀ ಆಯ್ಕೆ ಏಕೆ ಆಗಬಾರದು. ನನಗೆ ಸಂಬಂಧ ದಾಖಲೆ ಆ ವಾಹಿನಿಗೆ ಹೋಗಿವೆ ಕೆಲವು ಚರ್ಚೆ ಆಗಿದೆ ಎಂದು ಹೇಳಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.