ಚಾಮರಾಜನಗರ: ದೀಪಾವಳಿ ಹಾಗೂ ಕಾರ್ತಿಕ ಮಾಸದ ಪ್ರಯುಕ್ತ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ಸುಮಾರು 100ಕ್ಕೂ ಅಧಿಕ ಯುವಕರು ಮಲೆ ಮಹದೇಶ್ವರ ಬೆಟ್ಟಕ್ಕೆ ಶುಕ್ರವಾರ ಬೆಳಗ್ಗೆ ಪಾದಯಾತ್ರೆ ಹೊರಟಿದ್ದಾರೆ.


COMMERCIAL BREAK
SCROLL TO CONTINUE READING

ಕೋಡಹಳ್ಳಿ ಗ್ರಾಮದಿಂದ ಬುತ್ತಿ ಕಟ್ಟಿಕೊಂಡು, ಬೆತ್ತ ಹಿಡಿದು ಮಹದೇಶ್ವರನ ನಾಮಸ್ಮರಣೆ ಮಾಡುತ್ತಾ ಸುಮಾರು 4 ದಿನಗಳ ಕಾಲ 160 ಕಿಮೀ ಪಾದಯಾತ್ರೆ ಆರಂಭಿಸಿರುವ ಯುವಕರ ತಂಡ ಹಿಂದಿನಿಂದ ಬೆಳೆದು ಬಂದ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಇದರ ಜೊತೆಗೆ ರೈತರು ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಹೆಣ್ಣು ಸಿಗದೆ ಮದುವೆ ಆಗದ ಕಾರಣ ಪಾದಯಾತ್ರೆ ಮಾಡುವ ಮೂಲಕ ಮಧು ಸಿಗಲೆಂದು ಮಾದಪ್ಪನ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: ದುಬೈನಿಂದ ಬಂದ ಹೆಚ್ ಡಿ ಕುಮಾರಸ್ವಾಮಿ ಫುಲ್ ಆಕ್ಟೀವ್


ಈ ಸಂದರ್ಭದಲ್ಲಿ ಪಾದಯಾತ್ರೆ ಹೊರಟ ಯುವಕರು ಮಾತನಾಡಿ, ‘ಪ್ರಸ್ತುತ ಬರಗಾಲ ಇರುವ ಹಿನ್ನೆಲೆ ಇದನ್ನು ಹೋಗಲಾಡಿಸಲು ನಾಡಿಗೆ ಉತ್ತಮ ಮಳೆ ಬೆಳೆಯಾಗಿ, ರೋಗ ರುಜಿನ ಬರದೆ ಆರೋಗ್ಯಕರವಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಲು ಪಾದಯಾತ್ರೆ ಹೊರಡಲಾಗಿದೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ರೈತರು ಮತ್ತು ಕೂಲಿ ಕಾರ್ಮಿಕರ ಮಕ್ಕಳ ಮದುವೆಗೆ ಹೆಣ್ಣು ಕೊಡಲು ಸಮಾಜವು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಹೆಣ್ಣು ಸಿಗಲೆಂದು ಮಾದಪ್ಪನ ಬಳಿಗೆ ತೆರಳಿ ಪೂಜೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.


ಪಾದಯಾತ್ರೆಯಲ್ಲಿ ಕೋಡಹಳ್ಳಿ ಗ್ರಾಮದ ಯುವಕರಾದ ಜವರ, ಮಹೇಶ್, ಮಹದೇವ, ಕೆಂಪ, ನಿಲೇಶ್, ಸ್ವಾಮಿ, ಸಿದ್ದರಾಜು, ಕೃಷ್ಣ, ಮಾಧು, ಕುಮಾರ, ಪ್ರಸಾದ್ ಸೇರಿದಂತೆ 100ಕ್ಕೂ ಅಧಿಕ ನೀಲಗಾರರು ಹಾಗೂ ಮಹದೇಶ್ವರ ಗುಡ್ಡರು ಭಾಗವಹಿಸಿದ್ದರು.


ಇದನ್ನೂ ಓದಿ: ಸರ್ಕಾರಿ ಶಾಲೆಯ ಆವರಣದಲ್ಲಿ 17 ವರ್ಷದ ಬಾಲಕನ ಹತ್ಯೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.