Astrology For Week: ವಾರದ ಈ ದಿನ ಈ ಪದಾರ್ಥ ಸೇವನೆ ಬೇಡ, ಜಾತಕದ ಗ್ರಹಗಳು ಅಶುಭ ಫಲಿತಾಂಶ ನೀಡುತ್ತವೆ

Astro Tips: ಧರ್ಮ ಮತ್ತು ಜ್ಯೋತಿಷ್ಯದಲ್ಲಿ, ವಾರದ ಪ್ರತಿಯೊಂದು ದಿನಕ್ಕೆ ಕೆಲ ನಿಯಮಗಳನ್ನು ಹೇಳಲಾಗಿದೆ. ಈ ನಿಯಮಗಳಲ್ಲಿ ಪ್ರತಿಯೊಂದು ದಿನ ಯಾವುದಾದರೊಂದು ಆಹಾರ ಪದಾರ್ಥ ಸೇವನೆಯನ್ನು ವರ್ಜ್ಯ ಎನ್ನಲಾಗಿದೆ.  ಈ ನಿಯಮವನ್ನು ಅನುಸರಿಸಲು ವಿಫಲವಾದರೆ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎನ್ನಲಾಗಿದೆ.  

Written by - Nitin Tabib | Last Updated : Jul 8, 2022, 04:23 PM IST
  • ಹಿಂದೂ ಧರ್ಮಶಾಸ್ತ್ರಗಳಲ್ಲಿ ವಾರದ ಪ್ರತಿ ಯಾವುದಾದರೊಂದು ದೇವ-ದೇವತೆಗೆ ಸಮರ್ಪಿತವಾಗಿದೆ.
  • ಹೀಗಾಗಿ ಪ್ರತಿದಿನವೂ ಕೆಲವು ವಿಶೇಷ ನಿಯಮಗಳನ್ನು ಹೇಳಲಾಗಿದೆ.
  • ಇದರಲ್ಲಿ ಆಯಾ ದಿನದಂದು ಕೆಲವು ಕೆಲಸಗಳನ್ನು ಮಾಡುವುದನ್ನು ನಿಷಿದ್ಧ ಎಂದೂ ಕೂಡ ಹೇಳಲಾಗಿದೆ.
Astrology For Week: ವಾರದ ಈ ದಿನ ಈ ಪದಾರ್ಥ ಸೇವನೆ ಬೇಡ, ಜಾತಕದ ಗ್ರಹಗಳು ಅಶುಭ ಫಲಿತಾಂಶ ನೀಡುತ್ತವೆ title=
Week Days Astrology

Astrology For Week: ಹಿಂದೂ ಧರ್ಮಶಾಸ್ತ್ರಗಳಲ್ಲಿ ವಾರದ ಪ್ರತಿ ಯಾವುದಾದರೊಂದು ದೇವ-ದೇವತೆಗೆ ಸಮರ್ಪಿತವಾಗಿದೆ. ಹೀಗಾಗಿ ಪ್ರತಿದಿನವೂ ಕೆಲವು ವಿಶೇಷ ನಿಯಮಗಳನ್ನು ಹೇಳಲಾಗಿದೆ. ಇದರಲ್ಲಿ ಆಯಾ ದಿನದಂದು ಕೆಲವು ಕೆಲಸಗಳನ್ನು ಮಾಡುವುದನ್ನು ನಿಷಿದ್ಧ ಎಂದೂ ಕೂಡ ಹೇಳಲಾಗಿದೆ. ಇದರಂತೆಯೇ ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಕೂಡ ವಾರದ ಎಲ್ಲಾ ದಿನಗಳಿಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ಒಂದು ನಿಯಮವು ಆಹಾರ ಮತ್ತು ಪಾನೀಯಕ್ಕೆ ಸಂಬಂಧಿಸಿದೆ. ಅಂದರೆ, ವಾರದ ಏಳು ದಿನಗಳಲ್ಲಿ ಪ್ರತಿದಿನ ಯಾವುದಾದರೊಂದು ಆಹಾರ ಪದಾರ್ಥದ ಸೇವನೆಯನ್ನು ನಿಷಿದ್ಧ ಎನ್ನಲಾಗಿದೆ. ಅವುಗಳನ್ನು ಅನುಸರಿಸಲು ವಿಫಲನಾಗುವ ವ್ಯಕ್ತಿಯು ತೊಂದರೆಗೆ ಸಿಲುಕುತ್ತಾನೆ ಎಂದು ನಂಬಲಾಗಿದೆ. ವಾರದ ಯಾವ ದಿನ ಯಾವ ಪದಾರ್ಥವನ್ನು ಸೇವಿಸಬಾರದು ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ. 

ವಾರಗಳಿಗೆ ಅನುಗುಣವಾಗಿ ಈ ನಿಯಮಗಳನ್ನು ಅನುಸರಿಸಿ
ವಾರದ ಪ್ರತಿಯೊಂದು ದಿನದಲ್ಲಿ ಕೆಲ ವಿಶೇಷ ಆಹಾರ ಪದಾರ್ಥಗಳ ಸೇವನೆಯನ್ನು ವರ್ಜ್ಯ ಎನ್ನಲಾಗಿದೆ. ಇಲ್ಲದಿದ್ದರೆ ಜಾತಕದಲ್ಲಿನ ಗ್ರಹಗಳು ನಕಾರಾತ್ಮಕ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತವೆ ಎಂದು ಹೇಳಲಾಗಿದೆ

ಸೋಮವಾರ: ಸೋಮವಾರ ಚಂದ್ರನಿಗೆ ಸಂಬಂಧಿಸಿದೆ. ಈ ದಿನ ಸಕ್ಕರೆಯನ್ನು ಸೇವಿಸಬೇಡಿ, ಇಲ್ಲದಿದ್ದರೆ ಚಂದ್ರನು ಅಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತಾನೆ.

ಮಂಗಳವಾರ: ಮಂಗಳವಾರ ಮಂಗಳ ಗ್ರಹಕ್ಕೆ ಸಂಬಂಧಿಸಿದೆ. ಈ ದಿನ ತುಪ್ಪವನ್ನು ಸೇವಿಸಬಾರದು. ಇಲ್ಲದಿದ್ದರೆ, ಧೈರ್ಯ ಮತ್ತು ಶಕ್ತಿಯಲ್ಲಿ ಕೊರತೆಯನ್ನು ಅನುಭವಿಸುವಿರಿ.

ಬುಧವಾರ: ಬುಧವಾರ ಬುಧ ಗ್ರಹಕ್ಕೆ ಸಂಬಂಧಿಸಿದೆ. ಬುಧ ವ್ಯಕ್ತಿಗೆ ಬುದ್ಧಿವಂತಿಕೆ, ಚಾತುರ್ಯ, ತರ್ಕ, ಸಂಪತ್ತನ್ನು ನೀಡುತ್ತದೆ. ಈ ದಿನ ಹಸಿರು ತರಕಾರಿಗಳನ್ನು ಸೇವಿಸಿದರೆ ಬುಧ ಗ್ರಹದ ಕೆಟ್ಟ ಫಲಿತಾಂಶಗಳು ಪ್ರಾಪ್ತಿಯಾಗುತ್ತವೆ. ಬುಧವಾರ ಯಾವಾಗಲೂ ಹಸಿರು ವಸ್ತುಗಳನ್ನು ದಾನ ಮಾಡಿ.

ಗುರುವಾರ: ಗುರುವಾರ ಗುರು ಗ್ರಹಕ್ಕೆ ಸಂಬಂಧಿಸಿದೆ. ಈ ದಿನ ಹಳದಿ ಪದಾರ್ಥಗಳನ್ನು ಸೇವಿಸಬೇಕು ಮತ್ತು ಹಾಲು-ಬಾಳೆಹಣ್ಣನ್ನು ತ್ಯಜಿಸಬೇಕು.

ಶುಕ್ರವಾರ: ಶುಕ್ರವಾರ ಶುಕ್ರ ಗ್ರಹ ಮತ್ತು ತಾಯಿ ಲಕ್ಷ್ಮಿಗೆ ಸಂಬಂಧಿಸಿದೆ. ಈ ದಿನ ಹುಳಿ ಪದಾರ್ಥಗಳನ್ನು ಸೇವಿಸಬಾರದು. ಮತ್ತೊಂದೆಡೆ, ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು, ಹಾಲು ಮತ್ತು ಹಾಲಿನಿಂದ ಮಾಡಿದ ಸಿಹಿತಿಂಡಿಗಳನ್ನು ದಾನ ಮಾಡಬೇಕು.

ಶನಿವಾರ: ಶನಿವಾರ ಶನಿಗೆ ಸಂಬಂಧಿಸಿದೆ. ಈ ದಿನ ಎಣ್ಣೆಯಿಂದ ಮಾಡಿದ ಪದಾರ್ಥಗಳನ್ನು ತಿನ್ನುವುದನ್ನು ತಪ್ಪಿಸಿ ಮತ್ತು ಎಣ್ಣೆಯನ್ನು ದಾನ ಮಾಡಿ.

ಇದನ್ನೂ ಓದಿ-Women Open Hair: ಹೆರಳು ಹಾಕದೆ ತಲೆಗೂದಲು ಹರಡಿಬಿಡುವುದು ದುಬಾರಿ ಪರಿಣಮಿಸುತ್ತದೆ, ಈ ಪರಿಣಾಮಗಳನ್ನು ಎದುರಿಸಬೇಕಾದೀತು ಎಚ್ಚರ!

ಭಾನುವಾರ: ಭಾನುವಾರ ಸೂರ್ಯನಿಗೆ ಸಂಬಂಧಿಸಿದೆ. ಸೂರ್ಯನ ಅಶುಭ ಫಲಿತಾಂಶಗಳನ್ನು ತಪ್ಪಿಸಲು ಭಾನುವಾರದಂದು ಉಪ್ಪು ಸೇವಿಸಬೇಡಿ.

ಇದನ್ನೂ ಓದಿ-ಚಾಣಕ್ಯ ನೀತಿ: ವಿಷಕಾರಿ ಹಾವಿಗಿಂತಲೂ ಅಪಾಯಕಾರಿಯಂತೆ ಇಂತಹ ಜನರು

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News