ಬೆಂಗಳೂರು : ಕೊತ್ತಂಬರಿ ನಮ್ಮ ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಇದರ ಸೇವನೆಯು ಅನೇಕ ಗಂಭೀರ ಕಾಯಿಲೆಗಳನ್ನು ತಡೆಯುತ್ತದೆ. ಕೊತ್ತಂಬರಿ ಬೀಜಗಳು ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಆದ್ದರಿಂದ, ಇದನ್ನು ಆಹಾರದಲ್ಲಿ ಸೇರಿಸುವುದು ಅನೇಕ ಆರೋಗ್ಯ ಸಮಸ್ಯೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಗರಿಷ್ಠ ಪ್ರಯೋಜನಗಳನ್ನು ಪಡೆಯಲು ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿಬೇಕು. 


COMMERCIAL BREAK
SCROLL TO CONTINUE READING

ಕೊತ್ತಂಬರಿ ನೀರಿನ ಪ್ರಯೋಜನಗಳು :
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ. ಇದಲ್ಲದೆ, ಇದು ಪ್ರತಿರಕ್ಷಣಾ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ. ಕೊತ್ತಂಬರಿ ನೀರನ್ನು ತಯಾರಿಸುವ ವಿಧಾನ ಮತ್ತು ಈ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗೆಗಿನ ಮಾಹಿತಿ ಇಲ್ಲಿದೆ.


ಇದನ್ನೂ ಓದಿ : ವಾರಕ್ಕೊಮ್ಮೆ ಹಾಲಿನ ಕೆನೆ ಮತ್ತು ಈ ವಸ್ತುವನ್ನು ಮುಖಕ್ಕೆ ಹಚ್ಚಿದರೆ ಪಾರ್ಲರ್ ಅಗತ್ಯವೇ ಇಲ್ಲ !


ತೂಕ ನಷ್ಟಕ್ಕೆ ಮನೆಮದ್ದು : 
ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಕುಡಿಯುವುದರಿಂದ ತೂಕ ಇಳಿಕೆಯಾಗುತ್ತದೆ. ಇದಲ್ಲದೆ, ಈ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಚಯಾಪಚಯವನ್ನು ಸುಧಾರಿಸುತ್ತದೆ. ಕೊತ್ತಂಬರಿ ನೀರನ್ನು ದೇಹದಿಂದ ವಿಷವನ್ನು ತೆಗೆದುಹಾಕಲು ಡಿಟಾಕ್ಸ್ ಪಾನೀಯವಾಗಿ ಬಳಸಲಾಗುತ್ತದೆ. ಆದ್ದರಿಂದ ಸ್ಥೂಲಕಾಯವನ್ನು ಕಡಿಮೆ ಮಾಡಲು, ನೀವು ಪ್ರತಿದಿನ ಬೆಳಿಗ್ಗೆ ಕೊತ್ತಂಬರಿ ನೀರನ್ನು ಕುಡಿಯಬಹುದು.


ಥೈರಾಯ್ಡ್ ಸಮಸ್ಯೆಗೆ ಮನೆಮದ್ದು : 
ಥೈರಾಯ್ಡ್ ಸಮಸ್ಯೆಯಲ್ಲಿ ಕೊತ್ತಂಬರಿ ನೀರು ಪ್ರಯೋಜನಕಾರಿ. ಕೊತ್ತಂಬರಿಯಲ್ಲಿರುವ ವಿವಿಧ ಖನಿಜಗಳು ಮತ್ತು ಜೀವಸತ್ವಗಳು ಥೈರಾಯ್ಡ್ ಹಾರ್ಮೋನುಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ : ಕೂದಲುದುರುವಿಕೆ, ಬಿಳಿ ಕೂದಲನ್ನು ಕಪ್ಪಾಗಿಸಲು ಈ ಸಿಂಪಲ್ ಟ್ರಿಕ್ಸ್ ಅನುಸರಿಸಿ


ರೋಗನಿರೋಧಕ ಶಕ್ತಿಗಾಗಿ ಮನೆಮದ್ದು : 
ಕೊತ್ತಂಬರಿ ಬೀಜದಲ್ಲಿ ಆ್ಯಂಟಿ ಆಕ್ಸಿಡೆಂಟ್‌ಗಳು ಅಧಿಕವಾಗಿವೆ. ಇದನ್ನು  ನೆನೆಸಿ ಅದರ ನೀರನ್ನು ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಬಹುದು. ಇದಲ್ಲದೆ, ಈ ನೀರನ್ನು ಕುಡಿಯುವುದರಿಂದ ದೇಹದಿಂದ ಹಾನಿಕಾರಕ ಫ್ರೀ ರಾಡಿಕಲ್ ಗಳನ್ನು  ತೆಗೆದುಹಾಕುತ್ತದೆ.


ಯೂರಿಕ್ ಆಸಿಡ್ ಗೆ ಮನೆ ಮದ್ದು : 
ಇದರ ಹೊರತಾಗಿ, ನಿಯಮಿತವಾಗಿ  ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಯೂರಿಕ್ ಆಮ್ಲದ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರನ್ನು ಕುಡಿಯುವುದರಿಂದ ವಿಷ ಮತ್ತು ಯೂರಿಕ್ ಆಸಿಡ್ ದೇಹದಿಂದ ಹೊರಹೋಗುತ್ತದೆ ಎಂಬುದು ಗಮನಿಸಬೇಕಾದ ಸಂಗತಿ. ಕೊತ್ತಂಬರಿ ಸೊಪ್ಪಿನಂತೆಯೇ ಕೊತ್ತಂಬರಿ ನೀರು ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. 


ಇದನ್ನೂ ಓದಿ : ಒಂದು ಚಮಚ ಶುಂಠಿ ರಸ ಸೇವಿಸಿದರೆ ಈ ಎಲ್ಲಾ ರೋಗಗಳಿಗೆ ಸಿಗುವುದು ಶಾಶ್ವತ ಮುಕ್ತಿ


ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಮನೆಮದ್ದು  : 
ಕೊತ್ತಂಬರಿ ನೀರನ್ನು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಆದರೆ ಈಗಾಗಲೇ ಕಡಿಮೆ ರಕ್ತದ ಸಕ್ಕರೆ ಹೊಂದಿರುವವರು ಅದನ್ನು ತೆಗೆದುಕೊಳ್ಳಬಾರದು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್