Daily Horoscope: ದಿನಭವಿಷ್ಯ 13-02-2021 Today astrology

ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ...

Written by - Zee Kannada News Desk | Last Updated : Feb 13, 2021, 07:05 AM IST
  • ಕನ್ಯಾ ರಾಶಿಯವರು ನಿಮ್ಮ ಕಠಿಣ ಪರಿಶ್ರಮದ ಸರಿಯಾದ ಫಲಿತಾಂಶವನ್ನು ನೀವು ಪಡೆಯುತ್ತೀರಿ
  • ವೃಶ್ಚಿಕ ರಾಶಿಯವರು ಕೆಲಸವನ್ನು ತೊರೆಯುವ ಬಗ್ಗೆ ಯೋಚಿಸುತ್ತಿದ್ದರೆ, ಅದಕ್ಕೆ ಸಮಯ ಸರಿಯಾಗಿಲ್ಲ. ಅಂತಹ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ
  • ಕುಂಭ ರಾಶಿಯವರಿಗೆ ಇಂದು ನೀವು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತೀರಿ
Daily Horoscope: ದಿನಭವಿಷ್ಯ 13-02-2021 Today astrology  title=
Daily horoscope (ದಿನಭವಿಷ್ಯ 13-02-2021)

Daily horoscope (ದಿನಭವಿಷ್ಯ 13-02-2021)  : ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ...

ಮೇಷ ರಾಶಿ -
ಕೆಲಸದ ಆರಂಭದಲ್ಲಿ ಇಂದು ನಿಮಗೆ ತುಂಬಾ ಶುಭವಾಗಲಿದೆ. ನೀವು ಉದ್ಯೋಗಸ್ಥರಾಗಿದ್ದರೆ, ನಿಮ್ಮ ಕೆಲಸವನ್ನು ಕಠಿಣ ಪರಿಶ್ರಮ ಮತ್ತು ಹೆಚ್ಚು ಗಮನಕೊಟ್ಟು ಮಾಡಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಅತ್ಯುತ್ತಮ ಕಾರ್ಯಕ್ಷಮತೆಯಿಂದ ಉನ್ನತ ಅಧಿಕಾರಿಗಳು ನಿಮ್ಮ ಬಡ್ತಿಯ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಮತ್ತೊಂದೆಡೆ, ವ್ಯಾಪಾರಸ್ಥರು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯಬಹುದು. ಆರ್ಥಿಕ ಹಿಂಜರಿತ ಕೊನೆಗೊಳ್ಳುತ್ತದೆ. ಹಾಗೆಯೇ ಲಾಭ ಗಳಿಸಲು ಕೂಡ ನಿಮಗೆ ಅವಕಾಶವಿದೆ. ಕುಟುಂಬ ಜೀವನದಲ್ಲಿ ನಿಮ್ಮ ತಂದೆಯೊಂದಿಗಿನ ಸಂಬಂಧವನ್ನು ಸುಧಾರಿಸುವ ಮೂಲಕ ನೀವು ಇಂದು ಆರಾಮವಾಗಿರುತ್ತೀರಿ. ಇನ್ನು ನಿಮ್ಮ ಆರೋಗ್ಯದ ವಿಷಯದಲ್ಲಿ ಜಾಗತಿಕ ಸಾಂಕ್ರಾಮಿಕದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು.

ವೃಷಭ ರಾಶಿ -
ನೀವು ಉದ್ಯೋಗಸ್ಥರಾಗಿದ್ದರೆ, ಇಂದು ನಿಮ್ಮ ಬಡ್ತಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಇದಲ್ಲದೆ, ನಿಮ್ಮ ಆದಾಯವೂ ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ಸ್ವಂತ ಸಣ್ಣ ಉದ್ಯಮವನ್ನು ಪ್ರಾರಂಭಿಸಲು ನೀವು ಬಯಸಿದರೆ ಮತ್ತು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಇಂದು ಆಶ್ಚರ್ಯಕರವಾಗಿ ಈ ಸಮಸ್ಯೆಯನ್ನು ಪರಿಹರಿಸಲಾಗುವುದು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಇಂದು ನಿಮ್ಮ ಸಂಗಾತಿಯೊಂದಿಗೆ ಹೆಚ್ಚುವರಿ ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ. ನಿಮ್ಮ ನಿಕಟತೆ ಹೆಚ್ಚಾಗುತ್ತದೆ ಮತ್ತು ನಿಮ್ಮ ಪರಸ್ಪರ ತಿಳುವಳಿಕೆ ಕೂಡ ಸುಧಾರಿಸುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನಿಮಗೆ ಮೈಗ್ರೇನ್ ಅಥವಾ ಥೈರಾಯ್ಡ್ ಸಮಸ್ಯೆ ಇದ್ದರೆ, ನೀವು ನಿಮ್ಮ ಬಗ್ಗೆ ಸಂಪೂರ್ಣ ಕಾಳಜಿ ವಹಿಸಬೇಕು. ನಿಮ್ಮ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳಿ.

ಮಿಥುನ ರಾಶಿ - 
ಇಂದು ನಿಮಗೆ ಶುಭವಾಗಲಿದೆ. ಇಂದು ನಿಮ್ಮ ಯಾವುದೇ ದೊಡ್ಡ ಚಿಂತೆ ನಿವಾರಣೆಯಾಗಬಹುದು. ನೀವು ವ್ಯಾಪಾರ ಮಾಡಿದರೆ ಮತ್ತು ನಿಮ್ಮ ಕೆಲಸದಲ್ಲಿ ನೀವು ಕೆಲವು ಅಡೆತಡೆಗಳನ್ನು ಎದುರಿಸುತ್ತಿದ್ದರೆ, ಇಂದು ಎಲ್ಲಾ ಅಡೆತಡೆಗಳನ್ನು ತೆಗೆದುಹಾಕುವ ಮೂಲಕ, ನಿಮ್ಮ ವ್ಯವಹಾರವು ಮತ್ತೊಮ್ಮೆ ವೇಗವಾಗಿ ಬೆಳೆಯುತ್ತದೆ. ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ನೀವು ಫ್ಯಾಷನ್‌ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರೆ ಇಂದು ನಿಮಗೆ ಬಹಳ ಮುಖ್ಯವಾಗುತ್ತದೆ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ವಾತಾವರಣ ಸಾಕಷ್ಟು ಚೆನ್ನಾಗಿರುತ್ತದೆ. ನೀವು ಮದುವೆಯಾಗಿದ್ದರೆ, ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಮನೆಯ ಜವಾಬ್ದಾರಿಗಳನ್ನು ಪೂರೈಸುವಲ್ಲಿ ನಿಮ್ಮ ಸಂಗಾತಿಯ ಬೆಂಬಲ ಸಿಗುತ್ತದೆ. ಆರ್ಥಿಕವಾಗಿ ಇಂದು ನಿಮಗೆ ಒಳ್ಳೆಯ ದಿನ. ಆರೋಗ್ಯದ ವಿಷಯದಲ್ಲಿ ಈ ದಿನವು ನಿಮಗೆ ಹೆಚ್ಚು ಉತ್ತಮವಾಗಿರುತ್ತದೆ.

ಕಟಕ ರಾಶಿ -
ನಿಮ್ಮ ಪ್ರತಿಭೆಯನ್ನು ಹೊರತರಲು, ನಿಮ್ಮ ಹೊಸ ಆಲೋಚನೆಗಳನ್ನು ಬಳಸಲು ಮತ್ತು ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಲು ಇದು ಸರಿಯಾದ ಸಮಯ. ನೀವು ವ್ಯಾಪಾರ ಮಾಡುವವರಾಗಿದ್ದರೆ, ಹಣಕ್ಕೆ ಸಂಬಂಧಿಸಿದಂತೆ ಬಹಳ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ, ಇಲ್ಲದಿದ್ದರೆ ನಿಮಗೆ ದೊಡ್ಡ ನಷ್ಟವಾಗಬಹುದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಪ್ರತಿಕೂಲವಾಗಿರುತ್ತದೆ. ಮನೆಯಲ್ಲಿ ದೊಡ್ಡ ವಿವಾದ ಉಂಟಾಗಬಹುದು. ನೀವು ತಾಳ್ಮೆಯಿಂದ ಕೆಲಸ ಮಾಡದಿದ್ದರೆ, ಸಮಸ್ಯೆ ಗಣನೀಯವಾಗಿ ಹೆಚ್ಚಾಗಬಹುದು. ನಿಮ್ಮ ತಪ್ಪು ವರ್ತನೆ ನಿಮ್ಮ ಪ್ರೀತಿಪಾತ್ರರನ್ನು ನೋಯಿಸಬಹುದು. ನೀವು ಮದುವೆಯಾಗಿದ್ದರೆ ಸಂಗಾತಿಯ ನಡವಳಿಕೆಯಲ್ಲಿ ಸಾಕಷ್ಟು ಒರಟುತನ ಕಾಣುತ್ತೀರಿ. ಸಣ್ಣ ವಿಷಯಗಳು ಸಹ ನಿಮ್ಮಲ್ಲಿ ಗೊಂದಲಕ್ಕೆ ಕಾರಣವಾಗಬಹುದು. ಇಂದು, ಒಂದು ಸಣ್ಣ ಪ್ರಯಾಣವನ್ನು ಮಾಡಬೇಕಾಗಬಹುದು. ನಿಮ್ಮ ಪ್ರಯಾಣವು ಕೆಲಸಕ್ಕೆ ಸಂಬಂಧಿಸಿದ್ದಿರಬಹುದು.

ಇದನ್ನೂ ಓದಿ - Hanuman Pooja: ರಾತ್ರಿ ಪೂಜೆ ಮಾಡುವಾಗ ಮಾಡಬೇಡಿ ಈ ತಪ್ಪು..!

ಸಿಂಹ ರಾಶಿ -
ಕೆಲಸದ ಆರಂಭದಲ್ಲಿ ಕೆಲವು ಸಮಸ್ಯೆಗಳಿದ್ದರೆ, ನೀವು ಭಯಪಡಬೇಕಾಗಿಲ್ಲ. ಏಕೆಂದರೆ ನಿಮ್ಮ ಸಮಸ್ಯೆ ತಾತ್ಕಾಲಿಕವಾಗಿರುತ್ತದೆ. ಶೀಘ್ರದಲ್ಲೇ ಎಲ್ಲಾ ಅಡೆತಡೆಗಳೂ ನಿವಾರಣೆಯಾಗುತ್ತವೆ ಮತ್ತು ನಿಮ್ಮ ಕೆಲಸವು ಸುಗಮವಾಗಿ ಮುಂದುವರಿಯುತ್ತದೆ. ನೀವು ಉದ್ಯೋಗವನ್ನು ಮಾಡುತ್ತಿದ್ದರೆ ಇಂದು ಕೆಲಸದ ಹೊರೆ ಹೆಚ್ಚು. ಇಂದು ವ್ಯಾಪಾರಸ್ಥರಿಗೆ ಉತ್ತಮ ದಿನವಾಗಲಿದೆ. ನಿಮಗೆ ಯಾವುದೇ ದೊಡ್ಡ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ ನಿಮಗೆ ಯಾವುದೇ ನಷ್ಟವಾಗುವುದಿಲ್ಲ. ಆದರೆ ನಿಮ್ಮ ಪ್ರಯತ್ನವನ್ನು ಮುಂದುವರಿಸುತ್ತಲೇ ಇರಿ. ಕುಟುಂಬ ಜೀವನದಲ್ಲಿ ಏರಿಳಿತಗಳು ಕಂಡುಬರುತ್ತವೆ. ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧ ಹದಗೆಡಬಹುದು. ಸಣ್ಣ ವಿಷಯಗಳನ್ನು ಮನಸ್ಸಿಗೆ ತೆಗೆದುಕೊಳ್ಳುವುದನ್ನು ತಪ್ಪಿಸಿ. ಹಣದ ಹರಿವು ಚೆನ್ನಾಗಿರುತ್ತದೆ. ನೀವು ಚಿಂತನಶೀಲವಾಗಿ ಖರ್ಚು ಮಾಡಿದರೆ, ನೀವು ಉಳಿತಾಯದತ್ತಲೂ ಗಮನಹರಿಸಲು ಸಾಧ್ಯವಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಸಾಮಾನ್ಯ ದಿನ.

ಕನ್ಯಾ ರಾಶಿ -
ಮನೆಯ ವಿಷಯದಲ್ಲಿ ತೊಂದರೆಗಳು ಹೆಚ್ಚಾಗಬಹುದು. ಇದ್ದಕ್ಕಿದ್ದಂತೆ ಹಳೆಯ ಪ್ರಕರಣವೊಂದು ಹೊರಬಂದು ಮನೆಯ ಶಾಂತಿಗೆ ಭಂಗ ತರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೀವು ತುಂಬಾ ಸಮತೋಲಿತವಾಗಿ ವರ್ತಿಸಬೇಕು. ನೀವು ಕೆಲವು ರಾಜಿಗಳನ್ನು ಸಹ ಮಾಡಬೇಕಾಗಬಹುದು. ನೀವು ಉದ್ಯೋಗ ಮಾಡುವವರಾಗಿದ್ದರೆ, ನಿಮ್ಮ ಕಾರ್ಯಕ್ಷಮತೆ ಶ್ಲಾಘನೀಯವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳು ವೇಗವಾಗಿ ಪೂರ್ಣಗೊಳ್ಳುತ್ತವೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ ಮತ್ತು ನಿಮ್ಮ ಕಠಿಣ ಪರಿಶ್ರಮದ ಸರಿಯಾದ ಫಲಿತಾಂಶವನ್ನು ನೀವು ಪಡೆಯುತ್ತೀರಿ. ನೀವು ವ್ಯಾಪಾರ ಮಾಡುತ್ತಿದ್ದರೆ ಆರ್ಥಿಕವಾಗಿ ಲಾಭ ಪಡೆಯಬಹುದು. ಇಂದು ನೀವು ಹೊಸ ಆರ್ಡರ್ ಗಳನ್ನು ಪಡೆಯುವ ಸಾಧ್ಯತೆಯಿದೆ. ನೀವು ಹಣದ ಬಗ್ಗೆ ಚಿಂತೆ ಮಾಡುತ್ತೀರಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ತುಲಾ ರಾಶಿ -
ಗ್ರಹಗಳ ದುಷ್ಪರಿಣಾಮದಿಂದಾಗಿ, ಇಂದು ನೀವು ಅತಿಯಾಗಿ ಕೋಪಗೊಳ್ಳುವ ಸಾಧ್ಯತೆ ಇದೆ. ನೀವು ಅಧಿಕ ರಕ್ತದೊತ್ತಡ ಹೊಂದಿದ್ದರೆ, ನಿಮ್ಮ ನಿರ್ಲಕ್ಷ್ಯದಿಂದಾಗಿ, ನಿಮ್ಮ ಆರೋಗ್ಯವು ತೀವ್ರವಾಗಿ ಕುಸಿಯಬಹುದು. ಇಂದು ಉದ್ಯೋಗಿಗಳಿಗೆ ಉತ್ತಮ ದಿನ. ನಿಮ್ಮ ಎಲ್ಲಾ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ನೀವು ಉನ್ನತ ಸ್ಥಾನವನ್ನು ಪಡೆಯಬಹುದು. ಮತ್ತೊಂದೆಡೆ, ನಿಮ್ಮ ಮಾತಿನ ಮೇಲೆ ಹೆಚ್ಚಿನ ನಿಯಂತ್ರಣವನ್ನು ಇಟ್ಟುಕೊಳ್ಳುವುದು ಬಹಳ ಮುಖ್ಯ. ನಿಮ್ಮ ಅತಿಯಾದ ಮಾತುಗಳು ನಿಮ್ಮ ಕಚೇರಿಯಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ಇಂದಿನ ದಿನವು ಸಣ್ಣ ವ್ಯಾಪಾರಿಗಳಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ನಿಮ್ಮ ಬಜೆಟ್ ಸಮತೋಲನನದಲ್ಲಿರುತ್ತದೆ. ಇಂದು ನೀವು ಅಮೂಲ್ಯವಾದದ್ದೇನಾದರೂ ಪಡೆಯಬಹುದು. ನಿಮ್ಮ ವೈವಾಹಿಕ ಜೀವನದಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು, ನಿಮ್ಮ ಸಂಗಾತಿಯನ್ನು ನೀವು ಅರ್ಥಮಾಡಿಕೊಳ್ಳಬೇಕು. ನಿಮ್ಮ ಪ್ರಿಯತಮೆಯನ್ನು ನಿರ್ಲಕ್ಷಿಸುವ ಮೂಲಕ ನೀವು ಅವರ ಭಾವನೆಗಳನ್ನು ನೋಯಿಸುತ್ತಿದ್ದೀರಿ ಎಂಬುದನ್ನು ಅರಿತುಕೊಳ್ಳಿ.

ವೃಶ್ಚಿಕ ರಾಶಿ -
ನೀವು ಕೆಲಸವನ್ನು ತೊರೆಯುವ ಬಗ್ಗೆ ಯೋಚಿಸುತ್ತಿದ್ದರೆ, ಅದಕ್ಕೆ ಸಮಯ ಸರಿಯಾಗಿಲ್ಲ. ಅಂತಹ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ವ್ಯಾಪಾರಿಗಳು ತುಂಬಾ ಶ್ರಮಿಸಬೇಕಾಗಬಹುದು. ಆದಾಗ್ಯೂ, ಪರಿಸ್ಥಿತಿ ಸುಧಾರಿಸುವ ಸಾಧ್ಯತೆಯಿದೆ. ನಿಮ್ಮ ಗ್ರಾಹಕರೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಪೋಷಕರ ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಒಡಹುಟ್ಟಿದವರ ಸಂಪೂರ್ಣ ಬೆಂಬಲವನ್ನು ಸಹ ನೀವು ಪಡೆಯುತ್ತೀರಿ. ಮತ್ತೊಂದೆಡೆ, ನೀವು ಮಕ್ಕಳಿಗೆ ಸಂಬಂಧಿಸಿದ ಯಾವುದೇ ಆತಂಕವಿದ್ದರೂ ನಿವಾರಣೆಯಾಗಬಹುದು. ನಿಮ್ಮ ಸಂಗಾತಿಯೊಂದಿಗಿನ ತಪ್ಪುಗ್ರಹಿಕೆಯನ್ನು ನಿವಾರಿಸಲು ಅವರೊಂದಿಗೆ ಮುಕ್ತವಾಗಿ ಮಾತನಾಡಿ. ನಿಮ್ಮ ನಡುವಿನ ಎಲ್ಲಾ ಉದ್ವಿಗ್ನತೆ ಇಂದು ಕೊನೆಗೊಳ್ಳುವ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆಹೇಳುವುದಾದರೆ ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಸಮಸ್ಯೆ ಉಂಟಾಗಬಹುದು.

ಇದನ್ನೂ ಓದಿ - Friday Remedies: ಶುಕ್ರವಾರ ಮುಸ್ಸಂಜೆ ವೇಳೆ ಈ ಕೆಲಸ ಮಾಡಿ Lakshmi ಕೃಪೆಗೆ ಪಾತ್ರರಾಗಿ

ಧನು ರಾಶಿ - 
ಇಂದು ನೀವು ತುಂಬಾ ಸಂತೋಷದಿಂದ ಇರುವುದರ ಜೊತೆಗೆ ಒತ್ತಡ ಮುಕ್ತರಾಗಿರುತ್ತೀರಿ. ಮೊದಲನೆಯದಾಗಿ, ನಿಮ್ಮ ಕೆಲಸದ ಬಗ್ಗೆ ಮಾತನಾಡುವುದಾದರೆ, ಕಚೇರಿಯಲ್ಲಿ ನಿಮ್ಮ ಕೆಲಸವು ಹೆಚ್ಚು ಮೆಚ್ಚುಗೆ ಪಡೆಯುತ್ತದೆ. ಇದಲ್ಲದೆ, ಹಿರಿಯ ಅಧಿಕಾರಿಗಳು ಸಹ ನಿಮಗೆ ಕೆಲವು ದೊಡ್ಡ ಜವಾಬ್ದಾರಿಗಳನ್ನು ವಹಿಸಿಕೊಡಬಹುದು. ವ್ಯವಹಾರದಲ್ಲಿ ದೊಡ್ಡ ಲಾಭ ಇರುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಇಂದು ನಿಮಗೆ ತುಂಬಾ ದುಬಾರಿಯಾಗಲಿದೆ. ಹಣಕಾಸಿನ ಬಿಕ್ಕಟ್ಟನ್ನು ತಪ್ಪಿಸಲು ನಿಮ್ಮ ಖರ್ಚುಗಳ ಬಗ್ಗೆ ನಿಗಾ ಇಡಿ. ನಿಮ್ಮ ಮನೆಯಲ್ಲಿ ಇತ್ತೀಚಿಗೆ ಒತ್ತಡದ ಪರಿಸ್ಥಿತಿ ಇದ್ದರೆ, ಇಂದು ನಿಮ್ಮ ಮನೆಯ ವಾತಾವರಣದಲ್ಲಿ ಸುಧಾರಣೆಯನ್ನು ನೋಡಬಹುದು. ಇನ್ನು ನಿಮ್ಮ ಆರೋಗ್ಯದ ಬಗ್ಗೆ ಇಂದು ನಿಮಗೆ ಸಾಮಾನ್ಯಕ್ಕಿಂತ ಉತ್ತಮ ದಿನವಾಗಿರುತ್ತದೆ.

ಮಕರ ರಾಶಿ -
ನಿಮ್ಮ ಮಾತಿನ ಮೇಲೆ ಹೆಚ್ಚಿನ ನಿಯಂತ್ರಣವನ್ನು ಇಟ್ಟುಕೊಳ್ಳುವುದು ಬಹಳ ಮುಖ್ಯ. ನಿಮ್ಮ ಕಠಿಣ ಮಾತು ನೀವು ಮಾಡುವ ಯಾವುದೇ ಪ್ರಮುಖ ಕೆಲಸವನ್ನು ಹಾಳು ಮಾಡುತ್ತದೆ. ನೀವು ನೌಕರಿ ಮಾಡುತ್ತಿದ್ದರೆ, ಇಂದು ಉನ್ನತ ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಗೊಳ್ಳದೇ ಇರಬಹುದು. ನೀವು ಮತ್ತೆ ಮತ್ತೆ ತಪ್ಪುಗಳನ್ನು ಮಾಡುತ್ತಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ನಿಮ್ಮ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡಲು ನೀವು ಪ್ರಯತ್ನಿಸಿ. ಮತ್ತೊಂದೆಡೆ, ವ್ಯಾಪಾರ ಮಾಡುವವರು ಅನಗತ್ಯ ಚರ್ಚೆಯನ್ನು ಮಾಡಬೇಡಿ. ಇಂದು ಈ ರಾಶಿಯ ವಿದ್ಯಾರ್ಥಿಗಳಿಗೆ ಒತ್ತಡ ಅಧಿಕವಾಗಿರುತ್ತದೆ. ನೀವು ಶ್ರದ್ಧೆಯಿಂದ ಅಧ್ಯಯನ ಮಾಡಿ ಮತ್ತು ನಿಮ್ಮ ಗುರುಗಳ ಸಲಹೆಯನ್ನು ತೆಗೆದುಕೊಳ್ಳುತ್ತಿರಿ. ಇಂದು ನಿಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ನಿಮಗೆ ಅವಕಾಶ ಸಿಗುವುದಿಲ್ಲ.

ಕುಂಭ ರಾಶಿ -
ಇಂದು ನೀವು ಮಿಶ್ರ ಫಲಿತಾಂಶಗಳನ್ನು ಪಡೆಯುತ್ತೀರಿ. ಕಚೇರಿಯಲ್ಲಿ ನಿಮ್ಮ ಯಾವುದೇ ಪ್ರಮುಖ ಕೆಲಸದಲ್ಲಿ ದೊಡ್ಡ ಅಡಚಣೆ ಉಂಟಾಗಬಹುದು. ಮತ್ತೊಂದೆಡೆ, ವ್ಯಾಪಾರಿಗಳು ತಮ್ಮ ಪ್ರತಿಸ್ಪರ್ಧಿಗಳೊಂದಿಗೆ ಜಾಗರೂಕರಾಗಿರುವುದು ಮುಖ್ಯ. ನೀವು ಎಚ್ಚರಿಕೆ ವಹಿಸದಿದ್ದರೆ ನೀವು ಆರ್ಥಿಕ ನಷ್ಟವನ್ನು ಅನುಭವಿಸಬಹುದು. ಹಣದ ಹರಿವು ಚೆನ್ನಾಗಿರುತ್ತದೆ. ಇಂದು ನೀವು ಅಗತ್ಯವಿರುವ ಸ್ನೇಹಿತನಿಗೆ ಆರ್ಥಿಕವಾಗಿ ಸಹಾಯ ಮಾಡಬಹುದು. ಮನೆಯ ವಾತಾವರಣ ಹರ್ಷಚಿತ್ತದಿಂದ ಕೂಡಿರುತ್ತದೆ. ಇಂದು ಕುಟುಂಬದೊಂದಿಗೆ ಶಾಂತಿಯಿಂದ ಸಮಯ ಕಳೆಯುತ್ತೀರಿ. ಜೀವನ ಸಂಗಾತಿಯ ನಡವಳಿಕೆಯಲ್ಲಿ ಮೃದುತ್ವ ಇರುತ್ತದೆ ಮತ್ತು ನಿಮ್ಮಿಬ್ಬರ ನಡುವಿನ ಸಮನ್ವಯವೂ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ದಿನ ನಿಮಗೆ ಒಳ್ಳೆಯದು.

ಮೀನ ರಾಶಿ -
ಇಂದು ನಿಮಗೆ ಕಷ್ಟದ ದಿನವಾಗಿರುತ್ತದೆ. ಕೆಲವು ಅನಗತ್ಯ ಭಯದಿಂದಾಗಿ ನೀವು ಮಾನಸಿಕ ತೊಂದರೆ ಅನುಭವಿಸುವಿರಿ. ನಿಮ್ಮ ಕೆಲಸದ ಬಗ್ಗೆ ಸರಿಯಾಗಿ ಗಮನ ಹರಿಸಲು ನಿಮಗೆ ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮೇಲಧಿಕಾರಿಗಳ ಕೋಪವನ್ನು ಸಹ ನೀವು ಎದುರಿಸಬೇಕಾಗಬಹುದು. ಮತ್ತೊಂದೆಡೆ, ವ್ಯಾಪಾರಿಗಳಿಗೆ, ಈ ಸಮಯವು ಪ್ರತಿಕೂಲವಾಗಿದೆ. ಆದ್ದರಿಂದ ಹೆಚ್ಚಿನ ಪ್ರಯತ್ನಗಳು ಮತ್ತು ಕಠಿಣ ಪರಿಶ್ರಮದ ಹೊರತಾಗಿಯೂ, ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯುವುದಿಲ್ಲ. ಹಣದ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ನಿಮಗೆ ದೊಡ್ಡ ಪರಿಹಾರ ಸಿಗುತ್ತದೆ. ಮನೆಯ ಸದಸ್ಯರೊಂದಿಗಿನ ನಿಮ್ಮ ಸಂಬಂಧವು ಉತ್ತಮವಾಗಿರುತ್ತದೆ ಮತ್ತು ಕಷ್ಟದ ಸಂದರ್ಭಗಳಲ್ಲಿ ನಿಮ್ಮ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವಂತೆ ತೋರುತ್ತದೆ. ನೀವು ಸ್ವಲ್ಪ ಅಜಾಗರೂಕತೆ ತೋರಿಸಿದರೂ ತೊಂದರೆಯಾಗುತ್ತದೆ.

ಇದನ್ನೂ ಓದಿ - Surya Rashi Parivartan 2021 : ನಾಳೆ ಕುಂಭ ರಾಶಿಗೆ ಸೂರ್ಯನ ಪ್ರವೇಶ, ಈ 5 ರಾಶಿಗಳ ಅದೃಷ್ಟವೇ ಬದಲಾಗಲಿದೆ

ಪಂಡಿತ್ ದಾಮೋದರ್ ಭಟ್  ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ, ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಕರೆ ಮಾಡಿ: 9008993001 Call / WhatsApp

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News