ಬಿಳಿಗಿರಿ ರಂಗನಿಗೆ ಬಗೆಬಗೆ ಪತ್ರ ಬರೆದ ಭಕ್ತರು‌...!

Biligiri Ranganatha Hills: ಬುಧವಾರ (ಜುಲೈ 12, 2023)  ನಡೆದ ಹುಂಡಿ ಎಣಿಕೆ ವೇಳೆ 4-5  ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗಿರಿರಂಗನಾಥ ಸ್ವಾಮಿಗೆ ಅರ್ಪಣೆ ಮಾಡಿದ್ದು ಆಸ್ತಿ, ದೈರ್ಯ, ಆರೋಗ್ಯ ಭಾಗ್ಯ, ಮಗನಿಗೆ ಒಳ್ಳೆಯ ಬುದ್ಧಿ ಕೊಡುವಂತೆ ನಾನಾ ರೀತಿಯ ಬೇಡಿಕೆಗಳನ್ನು ಭಗವಂತನ‌ ಮುಂದೆ ಇಟ್ಟಿದ್ದಾರೆ.

Written by - Yashaswini V | Last Updated : Jul 13, 2023, 11:04 AM IST
  • ಬಿಳಿಗಿರಿರಂಗನಾಥನ ಹುಂಡಿ ಎಣಿಕೆಯಲ್ಲಿ 42,11,305 ಹಣ ಸಂಗ್ರಹ
  • ವಿದೇಶಿ ಭಕ್ತರಿಂದಲೂ ಭಗವಂತನಿಗೆ ಕಾಣಿಕೆ
  • 132 ಅಮೇರಿಕನ್ ಡಾಲರ್, ನೇಪಾಳದ ಎರಡು ನೋಟುಗಳು ಲಭ್ಯ
ಬಿಳಿಗಿರಿ ರಂಗನಿಗೆ ಬಗೆಬಗೆ ಪತ್ರ ಬರೆದ ಭಕ್ತರು‌...! title=

Biligiri Ranganatha Hills: ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಹಾಗೂ ಚಿಕ್ಕ ತಿರುಪತಿ ಎಂದೇ ಹೆಸರಾದ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇವಾಯದ ಹುಂಡಿ ಎಣಿಕೆ ಬುಧವಾರ (ಜುಲೈ 12, 2023)  ನಡೆದಿದ್ದು ಭಕ್ತರು ಪತ್ರಗಳ ಮೂಲಕ ಭಗವಂತನಿಗೆ ಮೊರೆ ಇಟ್ಟಿದ್ದಾರೆ.

ಬುಧವಾರ (ಜುಲೈ 12, 2023)  ನಡೆದ ಹುಂಡಿ ಎಣಿಕೆ ವೇಳೆ 4-5  ಮಂದಿ ಭಕ್ತರು ಹಣದ ಜೊತೆಗೆ ಪತ್ರಗಳನ್ನು ಬಿಳಿಗಿರಿರಂಗನಾಥ ಸ್ವಾಮಿಗೆ ಅರ್ಪಣೆ ಮಾಡಿದ್ದು ಆಸ್ತಿ, ದೈರ್ಯ, ಆರೋಗ್ಯ ಭಾಗ್ಯ, ಮಗನಿಗೆ ಒಳ್ಳೆಯ ಬುದ್ಧಿ ಕೊಡುವಂತೆ ನಾನಾ ರೀತಿಯ ಬೇಡಿಕೆಗಳನ್ನು ಭಗವಂತನ‌ ಮುಂದೆ ಇಟ್ಟಿದ್ದಾರೆ.

ಇದನ್ನೂ ಓದಿ- ಮಾನ್ಸೂನ್‌ನಲ್ಲಿ ಒಮ್ಮೆಯಾದರೂ ಕರ್ನಾಟಕದ ಈ 5 ಸ್ಥಳಗಳಿಗೆ ಭೇಟಿ ನೀಡಲೇಬೇಕು

ಪತ್ರಗಳಲ್ಲಿ ಏನಿದೆ..?
ಭಕ್ತರೊಬ್ಬರು ಚೀಟಿಯೊಂದನ್ನು ಹುಂಡಿಗೆ ಹಾಕಿದ್ದು ಆಸ್ತಿ ವ್ಯಾಜ್ಯದ ಬಗ್ಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಅಕ್ಕ-ತಂಗಿಯರಿಗೆ ಆಸ್ತಿ ಸಿಗದಿರಲಿ- ಗಂಡು ಮಕ್ಕಳ ಪರವಾಗಿ ಕೋರ್ಟ್ ತೀರ್ಪು ಬರಲಿ, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳಿಗೆ ಆಸ್ತಿ ಆಗಬಾರದು ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು, ಮತ್ತೊಂದು ಪತ್ರದಲ್ಲಿ ಯುವಕನೋರ್ವ ಸಮಾಜದಲ್ಲಿ ಮುಖಂಡನಾಗಿ ಗುರುತಿಸಿಕೊಳ್ಳುವ ಆಸೆಯನ್ನು ಹೊರಹಾಕಿ ಗಮನ ಸೆಳೆದಿದ್ದಾನೆ.

ತನಗೇ ಮಾತನಾಡುವ ಧೈರ್ಯ ಕೊಡು, ನಮ್ಮ ಏರಿಯಾದಲ್ಲಿ ಗುರುತಿಸಿಕೊಳ್ಳುತ್ತೇನೆ, ಹಣ ಸಂಪಾದನೆ ಮಾಡುತ್ತೇನೆ, ಇಡೀ ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಲಿದ್ದು, ಏರಿಯಾದಲ್ಲಿ ಧೈರ್ಯವಾಗಿ ಮಾತನಾಡುತ್ತೇನೆ ಎಂದು ದೇವರ ಬಳಿ ತನ್ನ ಆಸೆ ಹೊರಹಾಕಿದ್ದಾನೆ‌.

ಇದನ್ನೂ ಓದಿ- ನಂದಿಗಿರಿಧಾಮ ಪ್ರದಕ್ಷಿಣೆ ಮಾಡಿದ್ರೆ ಕೈಲಾಸ ಪರ್ವತವನ್ನೇ ಸುತ್ತಿದಷ್ಟು ಪುಣ್ಯವಂತೆ!

ಮತ್ತೊಂದು ಪತ್ರದಲ್ಲಿ ತಾಯಿಯೊಬ್ಬರು ಬರೆದಿದ್ದು ಮಗನಿಗೆ ಒಳ್ಳೆಯ ಬುದ್ಧಿ ಕೊಡಲಿ, ತನ್ನನ್ನು ಬೈಯ್ಯದಿರಲಿ,  ಹಿಂದೆ ಮಾಡಿದ್ದ ತಪ್ಪನ್ನು ತಾನು ಮಾಡುವುದಿಲ್ಲ. ಆರೋಗ್ಯ ಭಾಗ್ಯ ಕೊಡಲಿ  ಎಂದು ಎರಡು ಪುಟಗಳ ದೀರ್ಘ ಪತ್ರ ಬರೆದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

ಫಾರಿನ್ ಭಕ್ತರಿಂದ ಕಾಣಿಕೆ:
ಇನ್ನು, ಬಿಳಿಗಿರಿರಂಗನಾಥನ ಹುಂಡಿ ಎಣಿಕೆಯಲ್ಲಿ 42,11,305 ಹಣ ಸಂಗ್ರಹವಾಗಿದ್ದು ವಿದೇಶಿ ಭಕ್ತರು ದೇವರಿಗೆ ಕಾಣಿಕೆ ಅರ್ಪಿಸಿದ್ದಾರೆ. 132 ಅಮೇರಿಕನ್ ಡಾಲರ್, ನೇಪಾಳದ ಎರಡು ನೋಟುಗಳು, ಅರಬ್ ಎಮಿರೇಟ್ಸ್ ನ 10 ಧೀರಂ, ಆಫ್ರೀಕನ್ ಗಾಂಬಿಯಾದ 50 ರೂ. ನ ಒಂದು ನೋಟ್ ನ್ನು ಭಕ್ತರು ರಂಗನಾಥನಿಗೆ ಅರ್ಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News