ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಆರೈಕೆ ಸಿಗದೇ ಅಸ್ವಸ್ಥಗೊಂಡಿದ್ದ ಆನೆಮರಿಗೆ ಅರಣ್ಯ ಇಲಾಖೆ ಚಿಕಿತ್ಸೆ ಕೊಟ್ಟು ಮತ್ತೇ ಅಮ್ಮನ ಮಡಿಲು ಸೇರಿಸಿದ ವಿಶೇಷ ಘಟನೆ ಬಿ‌ಆರ್‌ಟಿ  ಹುಲಿ ಸಂರಕ್ಷಿತ (BRT Tiger Reserve) ಪ್ರದೇಶ ವ್ಯಾಪ್ತಿಯ ಯಳಂದೂರು ವನ್ಯಜೀವಿ ವಲಯದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಅಂದಾಜು 2-3 ವರ್ಷದ ಗಂಡಾನೆ ಮರಿ ಮತ್ತೇ ಅಮ್ಮನ ಮಡಿಲು ಸೇರಿದ್ದು ಸದ್ಯ ಅರಣ್ಯ ಇಲಾಖೆ (Forest department) ಮರಿ ಮೇಲೆ ನಿರಂತರ ನಿಗಾ ಇಟ್ಟಿದೆ.  ಬೇತಾಳಕಟ್ಟೆ ಗಸ್ತಿನ ಗಂಜಿಗಟ್ಟಿ ಅರಣ್ಯ ಪ್ರದೇಶದಲ್ಲಿ ಜೂ.10 ರಂದು  ಇಲಾಖಾ ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದ ವೇಳೆ ಜಯಣ್ಣ ಎಂಬುವವರ ಜಮೀನಿನಲ್ಲಿ ಆನೆಮರಿ  ಅಸ್ವಸ್ಥಗೊಂಡಿರುವುದು ಕಂಡುಬಂದಿದೆ.


ಇದನ್ನೂ ಓದಿ- ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ


ಕೂಡಲೇ ಕಾರ್ಯಪ್ರವೃತ್ತರಾದ ಬಂಡೀಪುರದಿಂದ ಅರಣ್ಯಾಧಿಕಾರಿಗಳು (Forest Officers from Bandipur)  ಪಶು ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ.


ಆದರೆ, ಅಷ್ಟರಲ್ಲಾಗಲೇ ಮರಿ ಅರಸುತ್ತಾ ಬಂದ ತಾಯಿ ಆನೆ ಚಿಕಿತ್ಸೆ ಕೊಡಲು ಬಂದಿದ್ದ ಸಿಬ್ಬಂದಿ ಮೇಲೆ ದಾಳಿ ಮಾಡಲು ಮುಂದಾದ ವೇಳೆ ಹರಸಾಹಸದಿಂದ ಆ್ಯಂಟಿಬಯೋಟಿಕ್, ಕಬ್ಬಿನ ಜಲ್ಲೆಗಳು, ಹಸಿ ಹುಲ್ಲುಗಳನ್ನು ಕೊಟ್ಟು ಆರೈಕೆ ಮಾಡಿದ್ದರು.


ಇದನ್ನೂ ಓದಿ- ಬಂಡೀಪುರ ಸಫಾರಿಯಲ್ಲಿ ಗಾಯಗೊಂಡ ವ್ಯಾಘ್ರಗಳ ದರ್ಶನ


ಮಂಗಳವಾರ (ಜೂನ್ 11) ಸಂಜೆ ತನಕವೂ ಆರೈಕೆ ಮುಂದುವರೆಸಿ ಮರಿ ಚೇತರಿಸಿಕೊಳ್ಳುತ್ತಿದ್ದಂತೆ ಅಮ್ಮನ ಮಡಿಲಿಗೆ ಮರಿಯನ್ನು ಒಪ್ಪಿಸಿದ್ದಾರೆ. ಜೊತೆಗೆ, 24 ತಾಸು ಕೂಡ ಮರಿ ಮೇಲೆ ನಿಗಾ ಇಡಲು ಬಿಆರ್ ಟಿ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.