ನಾಳೆಯಿಂದ ಈ ರಾಶಿಯವರ ಜೀವನದಲ್ಲಿ ಸಂತೋಷದ ಹೊಳೆಯನ್ನೇ ಹರಿಸಲಿದ್ದಾನೆ ಗುರು

ಗುರು ಉದಯವು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಆದರೂ ಗುರುವಿನ ಉದಯ ಕೆಲವು ರಾಶಿಗಳ ಅದೃಷ್ಟವನ್ನೇ ಬದಲಾಯಿಸಲಿದೆ. 

Written by - Zee Kannada News Desk | Last Updated : Mar 22, 2022, 01:08 PM IST
  • ಅಸ್ತವಾಗಿರುವ ಗುರು ನಾಳೆ ಉದಯ
  • 12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ ಗುರು ಉದಯ
  • ಕೆಲವು ರಾಶಿಗಳ ಅದೃಷ್ಟವನ್ನೇ ಬದಲಾಯಿಸಲಿದೆ.
 ನಾಳೆಯಿಂದ ಈ  ರಾಶಿಯವರ ಜೀವನದಲ್ಲಿ ಸಂತೋಷದ ಹೊಳೆಯನ್ನೇ ಹರಿಸಲಿದ್ದಾನೆ  ಗುರು  title=
12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ ಗುರು ಉದಯ (file photo)

ಬೆಂಗಳೂರು : ಮಾರ್ಚ್ 23 ಅಂದರೆ ನಾಳೆ ಕುಂಭ ರಾಶಿಯಲ್ಲಿ ಗುರು ಉದಯವಾಗಲಿದೆ (Guru Uday). ಫೆಬ್ರವರಿ ತಿಂಗಳಲ್ಲಿ ಗುರು ಗ್ರಹ ಅಸ್ತವಾಗಿತ್ತು.  ಜ್ಯೋತಿಷ್ಯಶಾಸ್ತ್ರದ ಪ್ರಕಾರ (Astrology), ಗುರು ಉದಯವು ಎಲ್ಲಾ 12 ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಆದರೂ ಗುರುವಿನ ಉದಯ ಕೆಲವು ರಾಶಿಗಳ ಅದೃಷ್ಟವನ್ನೇ ಬದಲಾಯಿಸಲಿದೆ. 

ಮೇಷ : ಗುರುಗ್ರಹದ ಉದಯದೊಂದಿಗೆ, ಮೇಷ ರಾಶಿಯವರಿಗೆ (Aries) ಆರ್ಥಿಕ ಲಾಭವಾಗಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ಈ ರಾಶಿಗೆ ಸೇರಿದ ವಿದ್ಯಾರ್ಥಿಗಳು ಗುರು ಉದಯದಿಂದ ಲಾಭ ಪಡೆಯುತ್ತಾರೆ (effects of guru uday). ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಈ ಸಮಯ ಶುಭವಾಗಿರಲಿದೆ.  

ಇದನ್ನೂ ಓದಿ : ಈ ರಾಶಿಯವರಿಗೆ ಭಾರೀ ಅದೃಷ್ಟ ಕರುಣಿಸಲಿದ್ದಾನೆ ಶನಿ ಮಹಾತ್ಮ .!

ವೃಷಭ ರಾಶಿ  : ಗುರು ಉದಯ (guru uday 2022) ವೃಷಭ ರಾಶಿಯವರಿಗೆ ಲಾಭದಾಯಕವಾಗಿ ಪರಿಣಮಿಸಲಿದೆ. ಈ ಸಮಯದಲ್ಲಿ ಉದ್ಯೋಗದಲ್ಲಿರುವ ಜನರಿಗೆ ಹೊಸ ಉದ್ಯೋಗದ ಪ್ರಸ್ತಾಪ ಸಿಗಬಹುದು.  ಉದ್ಯೋಗದಲ್ಲಿ ಪ್ರಗತಿಯ ಸಾಧ್ಯತೆ ಇದೆ. ಗುರು ಉದಯದಿಂದ ಜೀವನದ ಸಂತೋಷ ಹೆಚ್ಚಾಗಲಿದೆ (Guru Uday effects). 

ಸಿಂಹ : ಸಿಂಹ ರಾಶಿಯವರ (Leo) ಮೇಲೆ ಗುರು ಉದಯದ ಪ್ರಭಾವವು ಶುಭಕರವಾಗಿರುತ್ತದೆ. ಈ ಸಮಯದಲ್ಲಿ ಧೈರ್ಯ ಮತ್ತು ಶಕ್ತಿ ಹೆಚ್ಚಾಗುತ್ತದೆ. ಹಣಕಾಸಿನ ವಿಚಾರದಲ್ಲಿರುವ ಅಡೆತಡೆಗಳು ನಿವಾರಣೆಯಾಗುತ್ತವೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. 

ತುಲಾ : ಗುರುವು ತುಲಾ ರಾಶಿಯವರಿಗೆ (Libra) ಶುಭ ಫಲಿತಾಂಶಗಳನ್ನು ನೀಡುತ್ತಾನೆ. ಈ ಸಮಯದಲ್ಲಿ ಈ ರಾಶಿಯವರು ಅಧಿಕ ಹಣ ಗಳಿಸಬಹುದು. ಕೆಲಸ ಕಾರ್ಯಗಳಲ್ಲಿ ಸಹೋದರ ಸಹೋದರಿಯರ ಬೆಂಬಲ ಸಿಗಲಿದೆ. ಸಮಾಜದಲ್ಲಿ ಗೌರವ ಪಡೆಯಬಹುದು. ಈ ಅವಧಿಯಲ್ಲಿ ಕೈಗೂಡದೆ  ಅರ್ಧಕ್ಕೇ  ನಿಂತ ಕೆಲಸಗಳು ಪೂರ್ಣಗೊಳ್ಳಲಿವೆ.  ಆರೋಗ್ಯದ ವಿಷಯದಲ್ಲಿ ಕಾಳಜಿ ಅಗತ್ಯ. 

ಇದನ್ನೂ ಓದಿ : Astrology: ಈ 4 ರಾಶಿಯ ವ್ಯಕ್ತಿಗಳು ಪ್ರತಿಯೊಂದು ಕೆಲಸದಲ್ಲಿಯೂ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಾರೆ!

ವೃಶ್ಚಿಕ ರಾಶಿ :  ವೃಶ್ಚಿಕ ರಾಶಿಯ (Scorpio)ಜನರ ಜೀವನದಲ್ಲಿ ಆಹ್ಲಾದಕರ ಬದಲಾವಣೆ ಇರುತ್ತದೆ. ಈ ಸಮಯದಲ್ಲಿ, ಕೆಲಸ ಕಾರ್ಯಗಳ  ಕ್ಷೇತ್ರದಲ್ಲಿ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ. ಖರ್ಚು ಕಡಿಮೆಯಾಗಲಿದೆ. ಸೌಕರ್ಯಗಳು ಹೆಚ್ಚಾಗಲಿವೆ. ಮಾನಸಿಕ ತೃಪ್ತಿ ದೊರೆಯಲಿದೆ.

ಧನು ರಾಶಿ : ಬಹಳ ದಿನಗಳಿಂದ ಅರ್ಧಕ್ಕೆ ನಿಂತಿರುವ ಕೆಲಸಗಳು ಪೂರ್ಣಗೊಳ್ಳುವವು. ಗುರು ಉದಯ ಈ ರಾಶಿಯವರ ಜೀವನದಲ್ಲಿ ಶುಭ ಪರಿಣಾಮವನ್ನು ಬೀರಲಿದೆ. ಅನೇಕ ಕ್ಷೇತ್ರಗಳಲ್ಲಿ ಲಾಭವನ್ನು ಪಡೆಯುವ ನಿರೀಕ್ಷೆಯಿದೆ. ಕುಟುಂಬದ ಬೆಂಬಲ ಸಿಗಲಿದೆ. ವಿದ್ಯಾರ್ಥಿಗಳು ಒಳ್ಳೆಯ ಸುದ್ದಿ ಪಡೆಯಬಹುದು. ಹಿರಿಯ ಸಹೋದರರಿಂದ ಬೆಂಬಲ ಸಿಗುವ ಸಾಧ್ಯತೆ ಇದೆ.

ಮಕರ ರಾಶಿ : ಮಕರ ರಾಶಿಯವರು (Capricorn)ಈ ಅವಧಿಯಲ್ಲಿ ಕಾರ್ಯಗಳನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ. ನ್ಯಾಯಾಲಯದ ಕೆಲಸಗಳಲ್ಲಿ ಯಶಸ್ಸನ್ನು ಸಾಧಿಸಬಹುದು. ಕೆಲಸದ ಸ್ಥಳದಲ್ಲಿನ ಸಮಸ್ಯೆಗಳು ದೂರವಾಗುತ್ತವೆ.

ಇದನ್ನೂ ಓದಿ : 15 ದಿನಗಳ ಅಂತರದಲ್ಲಿ ಎರಡು ಗ್ರಹಣಗಳ ಗೋಚರ; ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿಗಲಿದೆ ಯಶಸ್ಸು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News