ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ

ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಸಂದಿದೆ.

Written by - Yashaswini V | Last Updated : May 3, 2024, 11:15 AM IST
  • ದಾಖಲೆ ಬರೆದ ಬಂಡೀಪುರದ ವಿಶಿಷ್ಟ ಕಾರ್ಯಕ್ರಮ
  • ಅರಣ್ಯ ಇಲಾಖೆ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ
  • ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ  title=

ಚಾಮರಾಜನಗರ: ಭಾರತದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ (Bandipur Tiger Reserve) ಮತ್ತೊಂದು ಗೌರವದ ಗರಿ ಬಂದಿದ್ದು ಬಂಡೀಪುರ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ ಸಂದಿದೆ.

ಹೌದು..., ವಿದ್ಯಾರ್ಥಿಗಳಿಗೆ ಕಾಡಿನ ಬಗ್ಗೆ ಅರಿವು, ಅರಣ್ಯದ ಬಗ್ಗೆ ಜಾಗೃತಿ, ಪರಿಸರ ರಕ್ಷಣೆ ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಡಲು ಆರಂಭಿಸಿದ್ದ ಯುವಮಿತ್ರ (Yuvamitra) ಕಾರ್ಯಕ್ರಮಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (India Book of Records) ಗೌರವ ಸಂದಿದೆ. ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅತಿಹೆಚ್ಚು ಮಂದಿ ಭಾಗಿಯಾಗಿದ್ದಾರೆಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಾಗಿದ್ದು ಪ್ರಶಸ್ತಿಯನ್ನು ವಿತರಿಸಲಾಗಿದೆ.

ಬಂಡೀಪುರ ಯುವ ಮಿತ್ರ ಜಾಗೃತಿ ಕಾರ್ಯಕ್ರಮದಲ್ಲಿ (Bandipur Yuva Mitra Awareness Program) ಒಟ್ಟು 8410 ಮಂದಿ ಭಾಗಿಯಾಗಿದ್ದಾರೆ. ಸಫಾರಿ ವೀಕ್ಷಿಸಿ, ಕಾನನದ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಜೊತೆಗೆ ಅರಣ್ಯ ಸಂರಕ್ಷಣೆ ಮಹತ್ವ ಅರಿತಿದ್ದಾರೆ.

ಇದನ್ನೂ ಓದಿ- ವಾಹನಗಳ ಗ್ರೀನ್ ಟ್ಯಾಕ್ಸ್: ಬಂಡೀಪುರಕ್ಕೆ 10 ತಿಂಗಳಲ್ಲಿ 4.5 ಕೋಟಿ ಆದಾಯ

8,410 ಮಂದಿಯಲ್ಲಿ 7,019 ವಿದ್ಯಾರ್ಥಿಗಳು, 655 ಶಿಕ್ಷಕರು, 197 ಗ್ರಾಮ ಪಂಚಾಯತಿ ಸಿಬ್ಬಂದಿ, ಸದಸ್ಯರು, 395  ಸ್ಥಳೀಯ ರೈತರು ಮತ್ತು 143 ಮಂದಿ ಗಿರಿಜನರಿದ್ದು 2023 ರ ಮಾ.3 ರಿಂದ 2024 ರ  ಮಾ. 8 ರ ವರೆಗೆ 162 ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

2023ರಲ್ಲಿ ಅಂದಿನ ಬಂಡೀಪುರ (Bandipur) ಸಿಎಫ್ಒ ಆಗಿದ್ದ ಡಾ.ಪಿ.ರಮೇಶ್ ಕುಮಾರ್ ಅವರಿಂದ ಬಂಡೀಪುರ ಯುವ ಮಿತ್ರ ಎಂಬ ಕಾರ್ಯಕ್ರಮ ಚಾಲನೆ ಸಿಕ್ಕಿತ್ತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸುವರ್ಣ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮ ರೂಪಿಸಿ ವಿದ್ಯಾರ್ಥಿಗಳಿಗೆ ಉಚಿತ ಸಫಾರಿ ಮಾಡಿಸಿ ಪ್ರಕೃತಿ ಶಿಕ್ಷಣ ನೀಡುವ ಕಾರ್ಯಕ್ರಮ‌ ಇದಾಗಿದೆ.

ಇದನ್ನೂ ಓದಿ- Viral Video: ಬಂಡೀಪುರದಲ್ಲಿ ಸಫಾರಿ ವಾಹನಕ್ಕೆ ಬೇರೆ ದಾರಿ ತೋರಿದ ಸಲಗ!!

ಬಂಡೀಪುರ ಯುವ ಮಿತ್ರ ಕಾರ್ಯಕ್ರಮದಲ್ಲಿ ಭಾಗಿಯಾದ ವಿದ್ಯಾರ್ಥಿಗಳಿಗೆ " ಪರಿಸರ ಸ್ವಯಂ ಸೇವಕರು" ಎಂಬ ಗುರುತಿನ ಚೀಟಿ ಕೊಟ್ಟು ಅರಣ್ಯ ರಕ್ಷಣೆ ಜಾಗೃತಿಗೆ ಪ್ರೇರಣೆ ನೀಡುವ ವಿಶಿಷ್ಟ ಕಾರ್ಯಕ್ರಮ ಇದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News