ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಲಿಂಗಾಯತ ಸಮುದಾಯದ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸಮರ ನಡೆಸುತ್ತಿದ್ದು, ಮತಬೇಟೆಗೆ ಮುಂದಾಗಿವೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸೋಮಣ್ಣ-ವಿಜಯೇಂದ್ರ ಮತ ಶಿಕಾರಿ: ಸಿದ್ದು- ಕಾಂಗ್ರೆಸ್ ವಿರುದ್ಧ ವಾಗ್ದಾಳಿ


ಡಿ.ಕೆ.ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13ಕ್ಕೆ ಯಾರ ಯಾರ ಡ್ಯಾಂನಲ್ಲಿ ಎಷ್ಟು ನೀರಿದೆ ಅಂತಾ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ’ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ: Karnataka Election Photos : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌..! ಡಿಕೆಶಿ ನಾಮಪತ್ರ ಅಂಗೀಕಾರ


ಟಿಕೆಟ್ ಕೈತಪ್ಪಿದ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಸೇರಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.