ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ 64 ಜೋಡಿಗಳು

Samuhika Vivaha: ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ನವಜೋಡಿಗಳಿಗೆ 4 ಗ್ರಾಂ ಮಾಂಗಲ್ಯ, ರೇಷ್ಮೆ ಸೀರೆ, ಪಂಚೆ- ಶಲ್ಯ, ಬೆಳ್ಳಿ ಕಾಲುಂಗರವನ್ನು ಪ್ರಾಧಿಕಾರ ನೀಡಲಿದೆ.  ಸಚಿವರಿಗೆ ಹನೂರು ಶಾಸಕ ಎಂ.ಆರ್.ಮಂಜುನಾಥ್, ಕಾಡಾ ಅಧ್ಯಕ್ಷ ಮರಿಸ್ವಾಮಿ ಇದ್ದರು.

Written by - Yashaswini V | Last Updated : Aug 21, 2024, 12:48 PM IST
  • ಮಲೆ ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ
  • ನವ ಜೋಡಿಗಳ ವಿವಾಹಕ್ಕೆ ಸಾಕ್ಷಿಯಾದ ಮಾದಪ್ಪನ ಸನ್ನಿಧಿ.
  • ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರ ಆವರಣದಲ್ಲಿ ನಡೆದ ಉಚಿತ ಸಾಮೂಹಿಕ ವಿವಾಹ.
ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ 64 ಜೋಡಿಗಳು title=

Samuhika Vivaha In Mahadeshwara Hills: ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 64 ನವಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟರು.  ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಿಜೃಂಭಣೆಯಿಂದ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ (Samuhika Vivaha)  64 ನೂತನ ಜೋಡಿಗಳು ಸತಿ-ಪತಿಗಳಾದರು.

ಸುತ್ತೂರು ಶ್ರೀ ಮತ್ತು ಸಾಲೂರು ಮಠದ ಸ್ವಾಮೀಜಿ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೂತನ ದಂಪತಿಗಳಿಗೆ ಮಾಂಗಲ್ಯ ವಿತರಿಸಿ ಶುಭ ಹಾರೈಸಿದರು.

ಇದನ್ನೂ ಓದಿ- 'ಉತ್ತರ ಕರ್ನಾಟಕ‌ ಭಾಗದ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ'

ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಯಲಿದ್ದು ಮಾದಪ್ಪನ ಸನ್ನಿಧಿಯಲ್ಲಿ ಸತಿಪತಿಗಳಾಗುವುದು ಪುಣ್ಯವೆಂದೇ ಭಕ್ತರ ನಂಬಿಕೆಯಾಗಿದೆ. 

ಸಾಮೂಹಿಕ ವಿವಾಹದಲ್ಲಿ (Samuhika Vivaha) ಭಾಗಿಯಾದ ನವಜೋಡಿಗಳಿಗೆ 4 ಗ್ರಾಂ ಮಾಂಗಲ್ಯ, ರೇಷ್ಮೆ ಸೀರೆ, ಪಂಚೆ- ಶಲ್ಯ, ಬೆಳ್ಳಿ ಕಾಲುಂಗರವನ್ನು ಪ್ರಾಧಿಕಾರ ನೀಡಲಿದೆ.  ಸಚಿವರಿಗೆ ಹನೂರು ಶಾಸಕ ಎಂ.ಆರ್.ಮಂಜುನಾಥ್, ಕಾಡಾ ಅಧ್ಯಕ್ಷ ಮರಿಸ್ವಾಮಿ ಇದ್ದರು.

ಇದನ್ನೂ ಓದಿ- ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬೇಕಾದ ಅಕ್ಕಿ ಸರಬರಾಜಿಗೆ ಮನವಿ ಸಲ್ಲಿಕೆ: ಸಚಿವ ಕೆಹೆಚ್ ಮುನಿಯಪ್ಪ

ಸಿಎಂ ಸಿದ್ದರಾಮಯ್ಯ ಗೈರು: 
ಮಹದೇಶ್ವರ ಬೆಟ್ಟ (Mahadeshwara Betta) ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅಧ್ಯಕ್ಷರಾಗಿರಲಿದ್ದು ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಆದರೆ, ಈ ಬಾರಿ ಸಿದ್ದರಾಮಯ್ಯ ಬರುತ್ತಾರೆ ಎನ್ನಲಾಗುತ್ತಿದ್ದರೂ ಕೊನೆ ದಿನಗಳಲ್ಲಿ ರದ್ದಾಯಿತು. ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕೂಡ ಗಜ ಪಯಣ ಕಾರ್ಯಕ್ರಮದಲ್ಲಿ ಭಾಗಿಯಾದ್ದರಿಂದ ಸಾಮೂಹಿಕ ವಿವಾಹಕ್ಕೆ ಗೈರಾದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News