ಬೆಂಗಳೂರು: ಸ್ಥೂಲಕಾಯತೆಯು ಬ್ಯಾಡ್ ಲುಕ್ ನೀಡುವುದರ ಜೊತೆಗೆ ಹಲವಾರು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸ್ಥೂಲಕಾಯವನ್ನು ನಿಯಂತ್ರಿಸದಿದ್ದರೆ, ಅಧಿಕ ಬಿಪಿ, ಕೊಲೆಸ್ಟ್ರಾಲ್ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ಕಾರಣವಾಗಬಹುದು. ಆರೋಗ್ಯ ತಜ್ಞರ ಪ್ರಕಾರ, ತಪ್ಪು ಆಹಾರ ಪದ್ಧತಿ ಮತ್ತು ಕೆಟ್ಟ ಜೀವನಶೈಲಿ ಬೊಜ್ಜುಗೆ ಕಾರಣವಾಗಿದೆ. ಜನರು ತಮ್ಮ ಹೆಚ್ಚಿದ ತೂಕವನ್ನು ಕಡಿಮೆ ಮಾಡಲು ವಿವಿಧ ವಿಧಾನಗಳನ್ನು ಪ್ರಯತ್ನಿಸುತ್ತಾರೆ. ಕೆಲವರು ಡಯಟ್ ಮಾಡಿದರೆ ಇನ್ನು ಕೆಲವರು ಜಿಮ್ ಗೆ ಹೋಗಿ ಗಂಟೆಗಟ್ಟಲೆ ಬೆವರು ಸುರಿಸುತ್ತಾರೆ. ನೀವು ಬಯಸಿದರೆ, ತೂಕವನ್ನು ಕಳೆದುಕೊಳ್ಳಲು ನೀವು ಕೆಲವು ಆಯುರ್ವೇದ ಗಿಡಮೂಲಿಕೆಗಳನ್ನು ಸಹ ಸೇವಿಸಬಹುದು. ಅಂತಹ ಒಂದು ವಿಶೇಷ ಮೂಲಿಕೆ ಎಂದರೆ ಅದು ಮಧುನಾಶಿನಿ, ಇದು ತೂಕ ಇಳಿಕೆಗೆ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಆಯುರ್ವೇದದಲ್ಲಿ, ದೇಹದ ಅನೇಕ ಸಮಸ್ಯೆಗಳನ್ನು ತೆಗೆದುಹಾಕಲು ಇದನ್ನು ಬಳಸಲಾಗುತ್ತದೆ. ಇದರ ಸೇವನೆಯು ತೂಕವನ್ನು ಕಡಿಮೆ ಮಾಡುವುದಲ್ಲದೆ ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ. ಹಾಗಾದರೆ ಬನ್ನಿ, ತೂಕ ಇಳಿಕೆಗೆ ಮಧುನಾಶಿನಿಯನ್ನು ಹೇಗೆ ಬಳಸುವುದು ಎಂಬುದನ್ನು ತಿಳಿದುಕೊಳ್ಳೋಣ (Health News In Kannada / Lifestyle News In Kannada)


COMMERCIAL BREAK
SCROLL TO CONTINUE READING

ತೂಕ ಇಳಿಕೆಗೆ ಮಧುನಾಶಿನಿ ಹೇಗೆ ಪ್ರಯೋಜನಕಾರಿಯಾಗಿದೆ?
ಮಧುನಾಶಿನಿ ಸಾಕಷ್ಟು  ಔಷಧೀಯ ಗುಣಗಳನ್ನು ಹೊಂದಿದೆ. ಅದರ ಮಧುರತೆಯಿಂದಾಗಿ ಅದನ್ನು ಗುಡ್ಮಾರ್ ಎಂದೂ ಕೂಡ ಕರೆಯುತ್ತಾರೆ. ಮಧುನಾಶಿನಿ ಎಲೆಗಳು ಬೊಜ್ಜು ವಿರೋಧಿ ಗುಣಗಳನ್ನು ಹೊಂದಿದ್ದು, ಇದು ಕೊಬ್ಬನ್ನು ವೇಗವಾಗಿ ಸುಡಲು ಸಹಾಯ ಮಾಡುತ್ತದೆ. ಮಧುನಾಶಿನಿ ಎಲೆಗಳ ಸೇವನೆಯು ಹಸಿವನ್ನು ನಿಯಂತ್ರಿಸುತ್ತದೆ ಮತ್ತು ಸಿಹಿತಿಂಡಿಗಳ ಹಂಬಲವನ್ನು ಕಡಿಮೆ ಮಾಡುತ್ತದೆ. ಈ ರೀತಿಯಾಗಿ, ಇದು ತೂಕ ಇಳಿಕೆಗೆ ಸಹಾಯ ಮಾಡುತ್ತದೆ.


ತೂಕ ಇಳಿಕೆಗೆ ಮಧುನಾಶಿನಿ ಹೇಗೆ ಬಳಸಬೇಕು? 
ತೂಕ ಇಳಿಕೆಗೆ ಮಧುನಾಶಿನಿ ಎಲಗಳನ್ನು ಬಳಸಲು ಸರಿಯಾದ ಮಾರ್ಗವನ್ನು ತಿಳಿದುಕೊಳ್ಳುವುದು ತುಂಬಾ ಮುಖ್ಯವಾಗಿದೆ. ನೀವು ಇದರ ಎಲೆಗಳನ್ನು ಅಗಿಯಬಹುದು ಮತ್ತು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ನಂತರ, ಖಂಡಿತವಾಗಿಯೂ ಒಂದು ಲೋಟ ನೀರು ಕುಡಿಯಿರಿ. ಇದಲ್ಲದೆ, ನೀವು ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಒಂದು ಮಧುನಾಶಿನಿ ಎಲೆಗಳ ಪುಡಿ ಸೇರಿಸಿ ಕುಡಿಯಬಹುದು. ಇದರ ನಿಯಮಿತ ಸೇವನೆಯು ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ತೂಕವನ್ನು ನಿಯಂತ್ರಣದಲ್ಲಿಡುತ್ತದೆ.


ಇತರ ಪ್ರಯೋಜನಗಳು
ಮಧುಮೇಹದಲ್ಲಿ ಪ್ರಯೋಜನಕಾರಿ

ಮಧುನಾಶಿನಿ ಎಲೆಗಳು ಮಧುಮೇಹ-ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ, ಇದು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.


ಹೃದಯವನ್ನು ಆರೋಗ್ಯವಾಗಿರಿಸುತ್ತದೆ
ಮಧುನಾಶಿನಿಯಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವುದನ್ನು ತಡೆಯುತ್ತದೆ, ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.


ಕಾಮಾಲೆಯಲ್ಲಿ ಪ್ರಯೋಜನಕಾರಿ
ಮಧುನಾಶಿನಿ ಸೇವನೆಯಿಂದ ಲಿವರ್ ಆರೋಗ್ಯವಾಗಿರುತ್ತದೆ. ಕಾಮಾಲೆ ಸಮಸ್ಯೆಯಲ್ಲಿ ಇದರ ಸೇವನೆ ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ-Taming Diabetes: ಸಕ್ಕರೆ ಕಾಯಿಲೆಯನ್ನು ಹತ್ತಿರಕ್ಕೂ ಸುಳಿದಾಡಲು ಬಿಡುವುದಿಲ್ಲ ಈ ಅಕ್ಕಿಯ ಚಹಾ, ಇಲ್ಲಿದೆ ತಯಾರಿಕೆಯ ಸರಿಯಾದ ವಿಧಾನ!


ಯೂರಿಕ್ ಆಮ್ಲವನ್ನು ಕಡಿಮೆ ಮಾಡುತ್ತದೆ
ಹೆಚ್ಚಿನ ಯೂರಿಕ್ ಆಮ್ಲದ ಸಮಸ್ಯೆಯಲ್ಲಿ ಮಧುನಾಶಿನಿ ಸೇವನೆಯು ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಸಂಧಿವಾತದ ನೋವನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿಯಾಗಿದೆ.


ಇದನ್ನೂ ಓದಿ-High Cholesterol ನಿಯಂತ್ರಣಕ್ಕೆ ನಿಯಮಿತವಾಗಿ ಸೇವಿಸಿ ಈ ಎರಡು ಪದಾರ್ಥಗಳಿಂದ ತಯಾರಿಸಿದ ಚಹಾ!


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ