Weight Loss Tips: ಮನೆಯಲ್ಲಿಯೇ ಸುಲಭವಾಗಿ ತೂಕ ಇಳಿಸಿಕೊಳ್ಳಬೇಕೆ? ಇಲ್ಲಿವೆ ಕೆಲ ಆಯುರ್ವೇದ ವಿಧಾನಗಳು!

Weight Loss Home Remedies: ಕಡಿಮೆ ಅವಧಿಯಲ್ಲಿ ತೂಕ ಇಳಿಕೆ ಮಾಡಿಕೊಳ್ಳಲು ಆಯುರ್ವೇದದಲ್ಲಿ ಕೆಲ ಪರಿಹಾರಗಳನ್ನು ಸೂಚಿಸಲಾಗಿದೆ. ಆದರೆ ಅವುಗಳನ್ನು ನಿಯಮಿತವಾಗಿ ಮತ್ತು ಸೂಕ್ತ ಪ್ರಮಾಣದಲ್ಲಿ ಬಳಸುವುದು ತುಂಬಾ ಮುಖ್ಯ ಆದರೆ, ನೀವು ಯಾವುದೇ ನಿರ್ದಿಷ್ಟ ಕಾಯಿಲೆಯಿಂದ ಬಳಲುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸಿದ ನಂತರವೇ ಅವುಗಳನ್ನು ಆಲಾವಧಿಸಿಕೊಳ್ಳು (Lifestyle News In Kannada).  

Written by - Nitin Tabib | Last Updated : Mar 5, 2024, 07:08 PM IST
  • ಊಟದ ಸಮಯದಲ್ಲಿ ಅಂಜೂರದ ಹಣ್ಣುಗಳನ್ನು ಜೇನುತುಪ್ಪದಲ್ಲಿ ಬೆರೆಸಿ ಸೇವಿಸುವುದರಿಂದಲೂ ಕೂಡ ತೂಕ ಇಳಿಕೆಯಾಗುತ್ತದೆ.
  • ಅಂಜೂರದ ಹಣ್ಣುಗಳು ಫೈಬರ್ ಮತ್ತು ವಿಟಮಿನ್‌ಗಳನ್ನು ಹೊಂದಿದ್ದು
  • ಅವು ಹೊಟ್ಟೆಯಲಿರುವ ಆಹಾರವನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ,
Weight Loss Tips: ಮನೆಯಲ್ಲಿಯೇ ಸುಲಭವಾಗಿ ತೂಕ ಇಳಿಸಿಕೊಳ್ಳಬೇಕೆ? ಇಲ್ಲಿವೆ ಕೆಲ ಆಯುರ್ವೇದ ವಿಧಾನಗಳು! title=

Weight Loss Remedies: ಆಯುರ್ವೇದದಲ್ಲಿ (Ayurveda Remedies For Weight Loss) ತೂಕವನ್ನು ಕಳೆದುಕೊಳ್ಳಲು ಅತ್ಯಂತ ಪ್ರಾಚೀನ ಮತ್ತು ಪರಿಣಾಮಕಾರಿ ಪರಿಹಾರಗಳನ್ನು ಸೂಚಿಸಲಾಗಿದೆ, ಅವು ತುಂಬಾ ಆರೋಗ್ಯಕರ ಮತ್ತು ನೈಸರ್ಗಿಕವಾಗಿವೆ. ತೂಕವನ್ನು ಇಳಿಕೆ ಮಾಡಿಕೊಳ್ಳಲು ಇಲ್ಲಿವೆ ಕೆಲ ಆಯುರ್ವೇದ ಪರಿಹಾರಗಳು:(Lifestyle News In Kannada)

ತ್ರಿಫಲ: ತ್ರಿಫಲವು ಅತ್ಯಂತ ಪ್ರಾಚೀನ ಆಯುರ್ವೇದದ ಪದ್ಧತಿಯಲ್ಲಿ ಬಳಸಲಾಗುವ ಒಂದು ಔಷಧಿಯಾಗಿದೆ. ಇದು ತೂಕ ಇಳಿಕೆಗೆ (Weight Loss) ಸಹಾಯ ಮಾಡುತ್ತದೆ. ಇದನ್ನು ನೀವು ಆಮ್ಲಾ, ಭೀರಡಿಗಳ ಜೊತೆಗೆ ಬೆರೆಸಿ ಸೇವಿಸಬೇಕು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. .

ಗುಗ್ಗುಳ: ಗುಗ್ಗುಲು ಕೂಡ ತ್ರಿಫಲದಂತೆಯೇ ಒಂದು ನೈಸರ್ಗಿಕ ಔಷಧಿಯಾಗಿದೆ. ಇದು ಚಯಾಪಚ ದರವನ್ನು ಹೆಚ್ಚಿಸುತ್ತದೆ ಮತ್ತು ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಕೊಬ್ಬು ತ್ವರಿತವಾಗಿ ಕರಗುತ್ತದೆ

ಅಗಸೆ ಬೀಜಗಳು: ಅಗಸೆ ಬೀಜಗಳಲ್ಲಿ ಇರುವ ಜೀವಸತ್ವಗಳು, ಖನಿಜಗಳು ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳು ತೂಕ ಇಳಿಕೆಗೆ ತುಂಬಾ ಸಹಾಯ ಮಾಡುತ್ತವೆ. ಇದರ ನಿಯಮಿತ ಸೇವನೆಯು ಸ್ಥೂಲಕಾಯತೆಯನ್ನು ಕಡಿಮೆ (Belly Fat) ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಬಿಸಿನೀರು: ದಿನಕ್ಕೆ ಹಲವಾರು ಬಾರಿ ಬಿಸಿನೀರನ್ನು ಸೇವಿಸುವುದರಿಂದ ಕೂಡ ತೂಕವನ್ನು ಇಳಿಕೆ ಮಾಡಿಕೊಳ್ಳಬಹುದು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ದೇಹದಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಇದನ್ನೂ ಓದಿ-Relationship Secrets: ಮಹಿಳೆಯರು ಇಂತಹ ಪುರುಷರತ್ತ ಹೆಚ್ಚು ಆಕರ್ಷಿತರಾಗ್ತಾರಂತೆ! ಕಾರಣ ರೋಚಕವಾಗಿದೆ!

ಅಂಜೂರ ಮತ್ತು ಜೇನುತುಪ್ಪ: ಊಟದ ಸಮಯದಲ್ಲಿ ಅಂಜೂರದ ಹಣ್ಣುಗಳನ್ನು ಜೇನುತುಪ್ಪದಲ್ಲಿ ಬೆರೆಸಿ ಸೇವಿಸುವುದರಿಂದಲೂ ಕೂಡ ತೂಕ ಇಳಿಕೆಯಾಗುತ್ತದೆ. ಅಂಜೂರದ ಹಣ್ಣುಗಳು ಫೈಬರ್ ಮತ್ತು ವಿಟಮಿನ್‌ಗಳನ್ನು ಹೊಂದಿದ್ದು ಅವು ಹೊಟ್ಟೆಯಲಿರುವ ಆಹಾರವನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ, ಆದರೆ ಜೇನುತುಪ್ಪವು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ ಮತ್ತು ತಿಂದ ಬಳಿಕ ದೀರ್ಘಕಾಲದವರೆಗೆ ಹಸಿವಿನ ಭಾವನೆಯನ್ನು ಉಂಟುಮಾಡುವುದಿಲ್ಲ.

ಇದನ್ನೂ ಓದಿ-Drinking Water Stale Mouth: ಬೆಳಗ್ಗೆ ಹಲ್ಲುಜ್ಜದೆ ನೀರು ಕುಡಿಯುವುದರಿಂದಾಗುವ ಈ ಲಾಭಗಳು ನಿಮಗೂ ಗೊತ್ತಿರಲಿ!

(ಹಕ್ಕುತ್ಯಾಗ- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News