ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನಡೀತು 'ಕಾಳಿ' ಚಿತ್ರದ ಮುಹೂರ್ತ

Kali Movie : ಅಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ 'ಕಾಳಿ' ಚಿತ್ರದ ಮುಹೂರ್ತ, ಸೋಮವಾರ ಬೆಳಿಗ್ಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ 'ಕಾಳಿ' ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. 

Written by - YASHODHA POOJARI | Edited by - Zee Kannada News Desk | Last Updated : Nov 28, 2022, 09:39 PM IST
  • ಅಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದ ಸಿನಿಮಾ
  • ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನಡೀತು 'ಕಾಳಿ' ಚಿತ್ರದ ಮುಹೂರ್ತ
  • ಎಸ್​. ಕೃಷ್ಣ ನಿರ್ದೇಶಿಸುತ್ತಿರುವ 'ಕಾಳಿ' ಚಿತ್ರದ ಮುಹೂರ್ತ ಸಮಾರಂಭ
ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನಡೀತು 'ಕಾಳಿ' ಚಿತ್ರದ ಮುಹೂರ್ತ title=
ಕಾಳಿ ಚಿತ್ರದ ಮುಹೂರ್ತ

Kali Movie : ಅಭಿಷೇಕ್​ ಅಂಬರೀಶ್​ ಮತ್ತು ಸಪ್ತಮಿ ಗೌಡ ಅಭಿನಯದಲ್ಲಿ ಎಸ್​. ಕೃಷ್ಣ ನಿರ್ದೇಶಿಸುತ್ತಿರುವ 'ಕಾಳಿ' ಚಿತ್ರದ ಮುಹೂರ್ತ, ಸೋಮವಾರ ಬೆಳಿಗ್ಗೆ ನಗರದ ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ಯಶಸ್ವಿಯಾಗಿ ನೆರವೇರಿದೆ. 1990ರ ದಶಕದ ಕಾವೇರಿ ಗಲಭೆಯ ಹಿನ್ನೆಲೆಯಲ್ಲಿ ನಡೆಯುವ 'ಕಾಳಿ' ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ. ಸುದೀಪ್​ ಅಭಿನಯದ 'ಪೈಲ್ವಾನ್​' ಚಿತ್ರವನ್ನು ನಿರ್ಮಿಸುವ ಮೂಲಕ ಪ್ರಾರಂಭವಾದ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯು, ಆ ನಂತರ ಪುನೀತ್​ ರಾಜ್​ಕುಮಾರ್​ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು. ಆದರೆ, ಪುನೀತ್​ ಅವರ ಅಕಾಲಿಕ ನಿಧನದಿಂದಾಗಿ, ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೇ ಅರ್ಪಿಸಲಾಗುವುದು. 'ಕಾಳಿ' ಚಿತ್ರವು RRR ಮೋಷನ್ ಪಿಕ್ಚರ್ಸ್​ನ ಮೂರನೆಯ ಚಿತ್ರವಾಗಲಿದೆ. 

ಇದನ್ನೂ ಓದಿ : ʼಬಾಬಾʼ ಸಿನಿಮಾ ರೀ ರಿಲೀಸ್‌ : ತಮ್ಮದೆ ಸಿನಿಮಾಗೆ ಡಬ್ಬಿಂಗ್‌ ಮಾಡಿದ ತಲೈವಾ ರಜನಿ...!

ಇದಲ್ಲದೆ ಕಳೆದ 8 ವರ್ಷಗಳಿಂದ ಕನ್ನಡ ಕಿರುತೆರೆಯಲ್ಲಿ ಪ್ರಮುಖ ನಿರ್ಮಾಪರಾಗಿ ಗುರುತಿಸಿಕೊಂಡಿರುವ ಸ್ವಪ್ನ ಕೃಷ್ಣ, ಕನ್ನಡದ ನಂ.1 ಚಾನೆಲ್ ಆಗಿರುವ 'ಜೀ ಕನ್ನಡ'ಕ್ಕಾಗಿ ಅನೇಕ ಯಶಸ್ವಿ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ. ಈಗ ಪ್ರಸಾರವಾಗುತ್ತಿರುವ 'ಸತ್ಯ' ಮತ್ತು 'ಸೀತಾರಾಮ' ಧಾರಾವಾಹಿಗಳು ಸಹ ಅವರ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಧಾರಾವಾಹಿಗಳೇ.

ನಿರ್ದೇಶಕ ಕೃಷ್ಣ ಇದಕ್ಕೂ ಮುನ್ನ 25ಕ್ಕೂ ಹೆಚ್ಚು ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 'ಮುಂಗಾರು ಮಳೆ' ಚಿತ್ರಕ್ಕಾಗಿ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಅವರು, 2014ರಲ್ಲಿ ಯಶ್ ಅಭಿನಯದ ಯಶಸ್ವಿ ಚಿತ್ರ 'ಗಜಕೇಸರಿ' ಮೂಲಕ ನಿರ್ದೇಶಕರಾದರು. ಆ ನಂತರ ಸುದೀಪ್​ ಅಭಿನಯದಲ್ಲಿ 'ಹೆಬ್ಬುಲಿ' ಮತ್ತು 'ಪೈಲ್ವಾನ್​' ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಅವರ ನಾಲ್ಕನೇ ನಿರ್ದೇಶನದ ಚಿತ್ರ ಈ 'ಕಾಳಿ'.

ಇದನ್ನೂ ಓದಿ : ತುಂಡ್‌ ಹೈಕ್ಳ ಹೃದಯ ಘಾಸಿಗೊಳಿಸಿದ ಕ್ಯಾಟ್‌ ಖತರ್ನಾಕ್ ಮೈಮಾಟ

'ಕಾಳಿ' ಚಿತ್ರದಲ್ಲಿ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸುತ್ತಿದ್ದು, ಇದು ಅವರ ಅಭಿನಯದ ಮೂರನೆಯ ಚಿತ್ರವಾಗಿದೆ. 'ಕಾಂತಾರ' ಖ್ಯಾತಿಯ ಸಪ್ತಮಿ ಗೌಡ ಕಾಳಿ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೃಷ್ಣ ನಿರ್ದೇಶನದ 'ಹೆಬ್ಬುಲಿ' ಮತ್ತು 'ಪೈಲ್ವಾನ್' ಚಿತ್ರಗಳಿಗೆ ಛಾಯಾಗ್ರಾಹಕರಾಗಿದ್ದ ಕರುಣಾಕರ್​, ಇಲ್ಲೂ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. 

ಇನ್ನು, 'ಗೋಧಿ ಬಣ್ಣ ಸಾಧಾರಣ ಮೈಕಟ್ಟು', 'ಟಗರು' 'ಸಲಗ' ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು. ದೀಪು ಎಸ್ ಕುಮಾರ್ ಸಂಕಲನ ಮತ್ತು 'ಕೆಜಿಎಫ್' ಖ್ಯಾತಿಯ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ 'ಕಾಳಿ' ಕಾಲಿಗೆ ಸಂಭಾಷಣೆ ಬರೆಯಲಿದ್ದಾರೆ. ಚಿತ್ರಕ್ಕೆ ಇರಲಿದೆ. 'ಕಾಳಿ' ಚಿತ್ರದಲ್ಲಿ ಅಭಿನಯಿಸುವ ಕಲಾವಿದರಿಗಾಗಿ ಡಿಸೆಂಬರ್​ನಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, 2023ರ ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News