ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ಅವರನ್ನು ಜಮಖಂಡಿಯ ಶಾರದಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Last Updated : Nov 9, 2018, 10:57 AM IST
ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ನಿಧನ title=

ಬಾಗಲಕೋಟೆ‌: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಬಾಬುರೆಡ್ಡಿ ತುಂಗಳ(85) ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. 

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜಮಖಂಡಿಯ ಶಾರದಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ 4 ಗಂಟೆ ಸುಮಾರಿಗೆ ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಸಂಸ್ಕಾರ ಜಮಖಂಡಿ ತಾಲೂಕಿನ ಬಿದರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ.

1985ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು 1985 ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ ಬಾಬುರೆಡ್ಡಿ ತುಂಗಳ ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಆಗಿದ್ದರು. ಅಷ್ಟೇ ಅಲ್ಲದೆ ಹಲವು ಸಾಮಾಜಿಕ ಹೋರಾಟಗಳಲ್ಲಿ ಭಾಗಿಯಾಗಿದ್ದ ಅವರು, ಅತ್ಯುತ್ತಮ ವಾಗ್ಮಿ ಕೂಡ ಆಗಿದ್ದರು. ಅಷ್ಟೇ ಅಲ್ಲದೆ, ಬಾಬುರೆಡ್ಡಿ ಅವರು ಕೃಷ್ಣಾ ತೀರದ ರೈತ ಸಂಘದ ಮೊದಲ ಅಧ್ಯಕ್ಷರೂ ಕೂಡ ಆಗಿದ್ದರು.

Trending News