Mandous Cyclone : ಡಿಸೆಂಬರ್ 15ರವರೆಗೂ ರಾಜ್ಯದಲ್ಲಿ ವರುಣಾರ್ಭಟ

ಮಾಂಡೋಸ್‌ ಪರಿಣಾಮದಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 15ರವರೆಗೂ ವರುಣಾರ್ಭಟ ಮುಂದುವರೆಯಲಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Written by - Krishna N K | Last Updated : Dec 13, 2022, 10:29 AM IST
  • ಮಾಂಡೋಸ್‌ ಪರಿಣಾಮದಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 15ರವರೆಗೂ ವರುಣಾರ್ಭಟ ಮುಂದುವರೆಯಲಿದೆ
  • ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ
  • ಮಾಂಡೋಸ್ ಚಂಡಮಾರುತದ ಎಫೆಕ್ಟ್ ನಿಂದ ಮಳೆ ಮುಂದುವರಿಕೆಯಾಗಲಿದೆ
Mandous Cyclone : ಡಿಸೆಂಬರ್ 15ರವರೆಗೂ ರಾಜ್ಯದಲ್ಲಿ ವರುಣಾರ್ಭಟ title=

ಬೆಂಗಳೂರು : ಮಾಂಡೋಸ್‌ ಪರಿಣಾಮದಿಂದಾಗಿ ರಾಜ್ಯದಲ್ಲಿ ಡಿಸೆಂಬರ್ 15ರವರೆಗೂ ವರುಣಾರ್ಭಟ ಮುಂದುವರೆಯಲಿದೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೈಕ್ಲೋನ್‌ ಮಾಂಡೋಸ್‌ ಎಫೆಕ್ಟ್‌ನಿಂದಾಗಿ ರಾಜ್ಯದಲ್ಲಿ ಮಳೆ ಡಿಸೆಂಬರ್‌ 15ರವರೆಗೂ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ, ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ, ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೌಢ್ಯಕ್ಕೆ ಸಡ್ಡು ಹೊಡೆದ ಎರಡನೇ ಸಿಎಂ ಬಸವರಾಜ ಬೊಮ್ಮಾಯಿ!!

ಇಂದು ಕೂಡ ರಾಜ್ಯದ ಹಲವೆಡೆ ಸೈಕ್ಲೋನ್ ಪರಿಣಾಮ ಬೀರಲಿದೆ, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದ್ದು, ಮಾಂಡೋಸ್ ಚಂಡಮಾರುತದ ಎಫೆಕ್ಟ್ ನಿಂದ ಮಳೆ ಮುಂದುವರಿಕೆಯಾಗಲಿದೆ. ಗರಿಷ್ಠ ಉಷ್ಣಾಂಶ 24 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಲ್ಲದೆ, ಮುಂದಿನ 48 ಗಂಟೆಗಳ ಕಾಲ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕೂಡಾ ಇದೆ. ಇನ್ನು ಮಾಂಡೋಸ್‌ ಪರಿಣಾಮದಿಂದಾಗಿ ಚಳಿ ಜೊತೆ ಅಲ್ಲಲ್ಲಿ ತುಂತುರುಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News